<p><strong>ಹಾವೇರಿ:</strong> ಇಲ್ಲಿಯ ಕಾಗಿನೆಲೆ ರಸ್ತೆಯಲ್ಲಿರುವ ಕೆಳಸೇತುವೆ ಸಮೀಪದಲ್ಲಿ ಅಣ್ಣ–ತಮ್ಮ ಹಾಗೂ ಅವರ ಸ್ನೇಹಿತನ ಬಟ್ಟೆ ಬಿಚ್ಚಿಸಿ ವಿಡಿಯೊ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿ ಹಣ ಸುಲಿಗೆ ಮಾಡಲಾಗಿದ್ದು, ಕೃತ್ಯ ಎಸಗಿದ್ದ ಆರೋಪದಡಿ ಇಬ್ಬರನ್ನು ಹಾವೇರಿ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ನಾಗೇಂದ್ರನಮಟ್ಟಿಯ ಸುದೀಪ ದೊಡ್ಡಮನಿ ಹಾಗೂ ಸುದೀಪ ದ್ಯಾಮಪ್ಪ ಕುಂಚಿಕೊರವರ ಬಂಧಿತರು. ಸವಣೂರು ತಾಲ್ಲೂಕಿನ ಕಡಕೋಳ ಗ್ರಾಮದ 25 ವರ್ಷದ ಯುವಕ ನೀಡಿದ್ದ ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಎ.ಸಿ. ನಿರ್ವಹಣೆ ಕೆಲಸ ಮಾಡುತ್ತಿದ್ದ ದೂರುದಾರ, ಬಂಕಾಪುರದಲ್ಲಿ ನೆಲೆಸಿದ್ದರು. ಮೇ 5ರಂದು ರಾತ್ರಿ ಅಣ್ಣ ಹಾಗೂ ಸ್ನೇಹಿತರ ಜೊತೆ ಹಾವೇರಿಗೆ ಬಂದಿದ್ದರು. ಕಾಗಿನೆಲೆ ರಸ್ತೆಯಲ್ಲಿರುವ ಕೆಳಸೇತುವೆ ಸಮೀಪದಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಊಟ ಮಾಡುತ್ತಿ್ದ್ದರು. ತಡರಾತ್ರಿ 2 ಗಂಟೆ ಸುಮಾರಿಗೆ ಆರೋಪಿಗಳು ಸ್ಥಳಕ್ಕೆ ಬಂದಿದ್ದರು’ ಎಂದು ತಿಳಿಸಿದರು.</p>.<p>‘ದೂರುದಾರ, ಅವರ ಅಣ್ಣ ಹಾಗೂ ಸ್ನೇಹಿತನ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳು, ಜೀವ ಬೆದರಿಕೆಯೊಡ್ಡಿ ಎಲ್ಲರ ಬಟ್ಟೆ ಬಿಚ್ಚಿಸಿದ್ದರು. ನಂತರ, ಮೊಬೈಲ್ನಲ್ಲಿ ವಿಡಿಯೊ ಚಿತ್ರೀಕರಣ ಮಾಡಿದ್ದರು. ಮೂವರ ಬಳಿಯಿದ್ದ ₹ 16,100 ಕಸಿದುಕೊಂಡಿದ್ದರು. ಇದಾದ ನಂತರ, ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ’ ಎಂದು ಹೇಳಿದರು.</p>.<p>‘ದೂರು ದಾಖಲಾಗುತ್ತಿದ್ದಂತೆ, ಪುರಾವೆಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಗಿದೆ. ಆರೋಪಿಗಳು, ಮತ್ತಷ್ಟು ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಹಿತಿಯಿದೆ. ಒಬ್ಬ ಆರೋಪಿ ಮೇಲೆ ಈ ಹಿಂದೆ ಕೊಲೆ ಯತ್ನ ನಡೆದಿತ್ತು. ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಂಡಿರುವ ಆತ, ಕೃತ್ಯ ಎಸಗಿದ್ದಾನೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-22-1355200634</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಇಲ್ಲಿಯ ಕಾಗಿನೆಲೆ ರಸ್ತೆಯಲ್ಲಿರುವ ಕೆಳಸೇತುವೆ ಸಮೀಪದಲ್ಲಿ ಅಣ್ಣ–ತಮ್ಮ ಹಾಗೂ ಅವರ ಸ್ನೇಹಿತನ ಬಟ್ಟೆ ಬಿಚ್ಚಿಸಿ ವಿಡಿಯೊ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿ ಹಣ ಸುಲಿಗೆ ಮಾಡಲಾಗಿದ್ದು, ಕೃತ್ಯ ಎಸಗಿದ್ದ ಆರೋಪದಡಿ ಇಬ್ಬರನ್ನು ಹಾವೇರಿ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ನಾಗೇಂದ್ರನಮಟ್ಟಿಯ ಸುದೀಪ ದೊಡ್ಡಮನಿ ಹಾಗೂ ಸುದೀಪ ದ್ಯಾಮಪ್ಪ ಕುಂಚಿಕೊರವರ ಬಂಧಿತರು. ಸವಣೂರು ತಾಲ್ಲೂಕಿನ ಕಡಕೋಳ ಗ್ರಾಮದ 25 ವರ್ಷದ ಯುವಕ ನೀಡಿದ್ದ ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಎ.ಸಿ. ನಿರ್ವಹಣೆ ಕೆಲಸ ಮಾಡುತ್ತಿದ್ದ ದೂರುದಾರ, ಬಂಕಾಪುರದಲ್ಲಿ ನೆಲೆಸಿದ್ದರು. ಮೇ 5ರಂದು ರಾತ್ರಿ ಅಣ್ಣ ಹಾಗೂ ಸ್ನೇಹಿತರ ಜೊತೆ ಹಾವೇರಿಗೆ ಬಂದಿದ್ದರು. ಕಾಗಿನೆಲೆ ರಸ್ತೆಯಲ್ಲಿರುವ ಕೆಳಸೇತುವೆ ಸಮೀಪದಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಊಟ ಮಾಡುತ್ತಿ್ದ್ದರು. ತಡರಾತ್ರಿ 2 ಗಂಟೆ ಸುಮಾರಿಗೆ ಆರೋಪಿಗಳು ಸ್ಥಳಕ್ಕೆ ಬಂದಿದ್ದರು’ ಎಂದು ತಿಳಿಸಿದರು.</p>.<p>‘ದೂರುದಾರ, ಅವರ ಅಣ್ಣ ಹಾಗೂ ಸ್ನೇಹಿತನ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳು, ಜೀವ ಬೆದರಿಕೆಯೊಡ್ಡಿ ಎಲ್ಲರ ಬಟ್ಟೆ ಬಿಚ್ಚಿಸಿದ್ದರು. ನಂತರ, ಮೊಬೈಲ್ನಲ್ಲಿ ವಿಡಿಯೊ ಚಿತ್ರೀಕರಣ ಮಾಡಿದ್ದರು. ಮೂವರ ಬಳಿಯಿದ್ದ ₹ 16,100 ಕಸಿದುಕೊಂಡಿದ್ದರು. ಇದಾದ ನಂತರ, ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ’ ಎಂದು ಹೇಳಿದರು.</p>.<p>‘ದೂರು ದಾಖಲಾಗುತ್ತಿದ್ದಂತೆ, ಪುರಾವೆಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಮಾಡಲಾಗಿದೆ. ಆರೋಪಿಗಳು, ಮತ್ತಷ್ಟು ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಹಿತಿಯಿದೆ. ಒಬ್ಬ ಆರೋಪಿ ಮೇಲೆ ಈ ಹಿಂದೆ ಕೊಲೆ ಯತ್ನ ನಡೆದಿತ್ತು. ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಂಡಿರುವ ಆತ, ಕೃತ್ಯ ಎಸಗಿದ್ದಾನೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-22-1355200634</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>