<p><strong>ಹಾವೇರಿ/ಗದಗ:</strong> ‘ಖರೀದಿ ಕೇಂದ್ರಗಳನ್ನು ಆರಂಭಿಸಿ ಬೆಂಬಲ ಬೆಲೆಯಡಿ ಮೆಕ್ಕೆಜೋಳವನ್ನು ಖರೀದಿಸಲು ಆಗ್ರಹಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸೋಮವಾರ ಹಾವೇರಿಯಲ್ಲಿ ಎಂಟನೇ ದಿನಕ್ಕೆ, ಗದಗನಲ್ಲಿ ಹದಿನೇಳನೇ ದಿನಕ್ಕೆ ಕಾಲಿರಿಸಿತು.</p>.<p>‘ಪ್ರತಿ ರೈತರಿಂದ ಗರಿಷ್ಠ 5 ಕ್ವಿಂಟಲ್ ಮೆಕ್ಕೆಜೋಳವನ್ನು ಕ್ವಿಂಟಲ್ಗೆ ₹ 2,400 ಬೆಂಬಲ ಬೆಲೆಯಡಿ ಖರೀದಿಸಬೇಕು’ ಎಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಪ್ರತಿಗಳನ್ನು ರೈತರು ಸುಟ್ಟು ಪ್ರತಿಭಟಿಸಿದರು. ಮೆಕ್ಕೆಜೋಳವನ್ನು ಪ್ರತಿ ಕ್ವಿಂಟಲ್ಗೆ ₹ 3,000 ದರದಲ್ಲಿ ಖರೀದಿಸಬೇಕು. ಖರೀದಿ ಕೇಂದ್ರಗಳನ್ನು ಆರಂಭಿಸಬೇಕು’ ಎಂದು ರೈತರು ಆಗ್ರಹಿಸಿದರು.</p>.<p>‘ಹಾವೇರಿ ಜಿಲ್ಲೆಯಲ್ಲಿ ಅಂದಾಜು 11 ಲಕ್ಷಕ್ಕೂ ಹೆಚ್ಚು ಕ್ವಿಂಟಲ್ ಮೆಕ್ಕೆಜೋಳ ಬೆಳೆಯಲಾಗಿದೆ. ಈ ಆದೇಶದಿಂದ ಪ್ರಯೋಜನವಾಗದು’ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ರೈತರು ಟಯರ್ಗಳಿಗೆ ಬೆಂಕಿ ಹಚ್ಚಿ, ಆಕ್ರೋಶ ವ್ಯಕ್ತಪಡಿಸಿದರು. ಖರೀದಿ ಕೇಂದ್ರ ಆರಂಭಿಸುವವರೆಗೂ ಪ್ರತಿಭಟನೆ ಹಿಂಪಡೆಯಲ್ಲ ಎಂದು ಎಚ್ಚರಿಸಿದರು.</p>.<p>ಖರೀದಿ ಕೇಂದ್ರ ಆರಂಭಿಸುವ ಭರವಸೆ ಸಿಕ್ಕಿದ್ದ ಕಾರಣ, ರೈತರು ಧರಣಿ ಸ್ಥಳದಲ್ಲಿ ವಿಜಯೋತ್ಸವ ಆಚರಿಸಲು ನಿರ್ಧರಿಸಿದ್ದರು. ಆದರೆ, ಖರೀದಿ ಕೇಂದ್ರ ಆರಂಭಗೊಳ್ಳದ ಕಾರಣ ಪಾಲಾ-ಬಾದಾಮಿ ಹೆದ್ದಾರಿಯಲ್ಲಿ ಟಯರ್ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ/ಗದಗ:</strong> ‘ಖರೀದಿ ಕೇಂದ್ರಗಳನ್ನು ಆರಂಭಿಸಿ ಬೆಂಬಲ ಬೆಲೆಯಡಿ ಮೆಕ್ಕೆಜೋಳವನ್ನು ಖರೀದಿಸಲು ಆಗ್ರಹಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸೋಮವಾರ ಹಾವೇರಿಯಲ್ಲಿ ಎಂಟನೇ ದಿನಕ್ಕೆ, ಗದಗನಲ್ಲಿ ಹದಿನೇಳನೇ ದಿನಕ್ಕೆ ಕಾಲಿರಿಸಿತು.</p>.<p>‘ಪ್ರತಿ ರೈತರಿಂದ ಗರಿಷ್ಠ 5 ಕ್ವಿಂಟಲ್ ಮೆಕ್ಕೆಜೋಳವನ್ನು ಕ್ವಿಂಟಲ್ಗೆ ₹ 2,400 ಬೆಂಬಲ ಬೆಲೆಯಡಿ ಖರೀದಿಸಬೇಕು’ ಎಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶ ಪ್ರತಿಗಳನ್ನು ರೈತರು ಸುಟ್ಟು ಪ್ರತಿಭಟಿಸಿದರು. ಮೆಕ್ಕೆಜೋಳವನ್ನು ಪ್ರತಿ ಕ್ವಿಂಟಲ್ಗೆ ₹ 3,000 ದರದಲ್ಲಿ ಖರೀದಿಸಬೇಕು. ಖರೀದಿ ಕೇಂದ್ರಗಳನ್ನು ಆರಂಭಿಸಬೇಕು’ ಎಂದು ರೈತರು ಆಗ್ರಹಿಸಿದರು.</p>.<p>‘ಹಾವೇರಿ ಜಿಲ್ಲೆಯಲ್ಲಿ ಅಂದಾಜು 11 ಲಕ್ಷಕ್ಕೂ ಹೆಚ್ಚು ಕ್ವಿಂಟಲ್ ಮೆಕ್ಕೆಜೋಳ ಬೆಳೆಯಲಾಗಿದೆ. ಈ ಆದೇಶದಿಂದ ಪ್ರಯೋಜನವಾಗದು’ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ರೈತರು ಟಯರ್ಗಳಿಗೆ ಬೆಂಕಿ ಹಚ್ಚಿ, ಆಕ್ರೋಶ ವ್ಯಕ್ತಪಡಿಸಿದರು. ಖರೀದಿ ಕೇಂದ್ರ ಆರಂಭಿಸುವವರೆಗೂ ಪ್ರತಿಭಟನೆ ಹಿಂಪಡೆಯಲ್ಲ ಎಂದು ಎಚ್ಚರಿಸಿದರು.</p>.<p>ಖರೀದಿ ಕೇಂದ್ರ ಆರಂಭಿಸುವ ಭರವಸೆ ಸಿಕ್ಕಿದ್ದ ಕಾರಣ, ರೈತರು ಧರಣಿ ಸ್ಥಳದಲ್ಲಿ ವಿಜಯೋತ್ಸವ ಆಚರಿಸಲು ನಿರ್ಧರಿಸಿದ್ದರು. ಆದರೆ, ಖರೀದಿ ಕೇಂದ್ರ ಆರಂಭಗೊಳ್ಳದ ಕಾರಣ ಪಾಲಾ-ಬಾದಾಮಿ ಹೆದ್ದಾರಿಯಲ್ಲಿ ಟಯರ್ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>