<p>ಹಾವೇರಿ: ‘ಜಿಲ್ಲೆಯ ರೈತರು ಎದುರಿಸುತ್ತಿರುವ ಸಮಸ್ಯೆಗಳ ಇತ್ಯರ್ಥಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಹೋರಾಟ ಆರಂಭಿಸಬೇಕಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರಿಗೆ ರೈತರು ಎಚ್ಚರಿಕೆ ನೀಡಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ’ಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಸಚಿವ ಪಾಟೀಲ ಅವರಿಗೆ ರೈತರು ಮನವಿ ಸಲ್ಲಿಸಿದರು.</p>.<p>‘ರೈತರ ಸಮಸ್ಯೆಗಳನ್ನು ಈಡೇರಿಸುವಂತೆ ಪದೇ ಪದೇ ಮನವಿ ಸಲ್ಲಿಸಲಾಗುತ್ತಿದೆ. ಹೋರಾಟವನ್ನೂ ಮಾಡಲಾಗಿದೆ. ಅಷ್ಟಾದರೂ ರೈತರ ಸಮಸ್ಯೆಗಳು ಬಗೆಹರಿಯುತ್ತಿಲ್ಲ. ಪ್ರಗತಿ ಪರಿಶೀಲನಾ ಸಭೆಯ ಮೂಲಕವಾದರೂ ಅಧಿಕಾರಿಗಳಿಗೆ ಸೂಚನೆ ನೀಡಿ, ರೈತರ ಸಮಸ್ಯೆಗಳಿಗೆ ಪರಿಹಾರ ಸೂಚಿಸಬೇಕು’ ಎಂದು ರೈತರು ಒತ್ತಾಯಿಸಿದರು.</p>.<p>‘ಪಂಪ್ಸೆಟ್ಗಳಿಗೆ ಸೋಲಾರ್ ಅಳವಡಿಸುವ ಯೋಜನೆಯಿಂದಾಗಿ ರೈತರಿಗೆ ಅನಾನುಕೂಲ ಆಗುತ್ತಿದೆ. ತಕ್ಷಣದಿಂದಲೇ ಅಕ್ರಮ ಸಕ್ರಮ ಯೋಜನೆ ಮರು ಜಾರಿಗೊಳಿಸಬೇಕು. ಜಿಲ್ಲೆಯಲ್ಲಿ ಕೃಷಿ ಪಂಪ್ ಸೆಟ್ಗಳ ಟ್ರಾನ್ಸ್ಫಾರ್ಮರ್ಗಳನ್ನು (ಟಿಸಿ) ಮೇಲ್ದರ್ಜೆಗೇರಿಸಬೇಕು. ಎಲ್ಲ ತಾಲ್ಲೂಕುಗಳಲ್ಲಿ ಕೃಷಿ ಪಂಪ್ಸೆಟ್ಗಳಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ಕಂಬಗಳು ಮತ್ತು ತಂತಿಗಳು ಹಳೆಯದಾಗಿದ್ದು, ಅಪಾಯಕಾರಿ ಸ್ಥಿತಿಯಲ್ಲಿವೆ. ತಕ್ಷಣವೇ ಅಪಾಯಕಾರಿ ಕಂಬ ಮತ್ತು ತಂತಿಗಳನ್ನು ಬದಲಾಯಿಸಬೇಕು’ ಎಂದು ರೈತರು ಆಗ್ರಹಿಸಿದರು.</p>.<p>‘ಸುಟ್ಟ ಟ್ರಾನ್ಸ್ಫಾರ್ಮರ್ಗಳನ್ನು 24 ಗಂಟೆಯೊಳಗೆ ಬದಲಾಯಿಸಬೇಕು. ವಿದ್ಯುತ್ ವ್ಯತ್ಯಯದ ಜೊತೆಗೆ ಕಡಿಮೆ ವೋಲ್ಟೇಜ್ನಿಂದ ಪಂಪ್ಸೆಟ್ಗಳ ಮೋಟಾರ್ ಸುಡುತ್ತಿದ್ದು, ವೋಲ್ಟೇಜ್ ಸಮಸ್ಯೆ ಬಗೆಹರಿಸಬೇಕು. ಬೆಂಬಲ ಬೆಲೆ ಯೋಜನೆ ಅಡಿ ಮೂರು ತಿಂಗಳ ಹಿಂದೆ ಖರೀದಿ ಮಾಡಿದ ಗೋವಿನ ಜೋಳದ ಬಾಕಿ ಹಣ ಕೊಡಿಸಬೇಕು. 2025–-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಪರಿಹಾರ ಜಮೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಜಿಲ್ಲೆಯಲ್ಲಿ ಎರಡು ತಿಂಗಳು ಕಳೆದರೆ ಬಿತ್ತನೆ ಕಾರ್ಯ ಪ್ರಾರಂಭವಾಗಲಿದ್ದು, ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು’ ಎಂದು ರೈತರು ಆಗ್ರಹಿಸಿದರು.</p>.<p>ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ರಾಮಣ್ಣ ಕೆಂಚಳ್ಳೇರ, ಮಲ್ಲಿಕಾರ್ಜುನ ಬಳ್ಳಾರಿ, ಮಾಲತೇಶ ಪೂಜಾರ, ಎಚ್.ಎಚ್. ಮುಲ್ಲಾ, ಶಿವಬಸಪ್ಪ ಗೋವಿ, ಶಿವಯೋಗಿ ಚ. ಹೊಸಗೌಡ್ರ, ಮರಿಗೌಡ ಪಾಟೀಲ, ರುದ್ರಗೌಡ ಕಾಡನಗೌಡ್ರ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-22-939823652</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ‘ಜಿಲ್ಲೆಯ ರೈತರು ಎದುರಿಸುತ್ತಿರುವ ಸಮಸ್ಯೆಗಳ ಇತ್ಯರ್ಥಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಹೋರಾಟ ಆರಂಭಿಸಬೇಕಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರಿಗೆ ರೈತರು ಎಚ್ಚರಿಕೆ ನೀಡಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ’ಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಸಚಿವ ಪಾಟೀಲ ಅವರಿಗೆ ರೈತರು ಮನವಿ ಸಲ್ಲಿಸಿದರು.</p>.<p>‘ರೈತರ ಸಮಸ್ಯೆಗಳನ್ನು ಈಡೇರಿಸುವಂತೆ ಪದೇ ಪದೇ ಮನವಿ ಸಲ್ಲಿಸಲಾಗುತ್ತಿದೆ. ಹೋರಾಟವನ್ನೂ ಮಾಡಲಾಗಿದೆ. ಅಷ್ಟಾದರೂ ರೈತರ ಸಮಸ್ಯೆಗಳು ಬಗೆಹರಿಯುತ್ತಿಲ್ಲ. ಪ್ರಗತಿ ಪರಿಶೀಲನಾ ಸಭೆಯ ಮೂಲಕವಾದರೂ ಅಧಿಕಾರಿಗಳಿಗೆ ಸೂಚನೆ ನೀಡಿ, ರೈತರ ಸಮಸ್ಯೆಗಳಿಗೆ ಪರಿಹಾರ ಸೂಚಿಸಬೇಕು’ ಎಂದು ರೈತರು ಒತ್ತಾಯಿಸಿದರು.</p>.<p>‘ಪಂಪ್ಸೆಟ್ಗಳಿಗೆ ಸೋಲಾರ್ ಅಳವಡಿಸುವ ಯೋಜನೆಯಿಂದಾಗಿ ರೈತರಿಗೆ ಅನಾನುಕೂಲ ಆಗುತ್ತಿದೆ. ತಕ್ಷಣದಿಂದಲೇ ಅಕ್ರಮ ಸಕ್ರಮ ಯೋಜನೆ ಮರು ಜಾರಿಗೊಳಿಸಬೇಕು. ಜಿಲ್ಲೆಯಲ್ಲಿ ಕೃಷಿ ಪಂಪ್ ಸೆಟ್ಗಳ ಟ್ರಾನ್ಸ್ಫಾರ್ಮರ್ಗಳನ್ನು (ಟಿಸಿ) ಮೇಲ್ದರ್ಜೆಗೇರಿಸಬೇಕು. ಎಲ್ಲ ತಾಲ್ಲೂಕುಗಳಲ್ಲಿ ಕೃಷಿ ಪಂಪ್ಸೆಟ್ಗಳಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ಕಂಬಗಳು ಮತ್ತು ತಂತಿಗಳು ಹಳೆಯದಾಗಿದ್ದು, ಅಪಾಯಕಾರಿ ಸ್ಥಿತಿಯಲ್ಲಿವೆ. ತಕ್ಷಣವೇ ಅಪಾಯಕಾರಿ ಕಂಬ ಮತ್ತು ತಂತಿಗಳನ್ನು ಬದಲಾಯಿಸಬೇಕು’ ಎಂದು ರೈತರು ಆಗ್ರಹಿಸಿದರು.</p>.<p>‘ಸುಟ್ಟ ಟ್ರಾನ್ಸ್ಫಾರ್ಮರ್ಗಳನ್ನು 24 ಗಂಟೆಯೊಳಗೆ ಬದಲಾಯಿಸಬೇಕು. ವಿದ್ಯುತ್ ವ್ಯತ್ಯಯದ ಜೊತೆಗೆ ಕಡಿಮೆ ವೋಲ್ಟೇಜ್ನಿಂದ ಪಂಪ್ಸೆಟ್ಗಳ ಮೋಟಾರ್ ಸುಡುತ್ತಿದ್ದು, ವೋಲ್ಟೇಜ್ ಸಮಸ್ಯೆ ಬಗೆಹರಿಸಬೇಕು. ಬೆಂಬಲ ಬೆಲೆ ಯೋಜನೆ ಅಡಿ ಮೂರು ತಿಂಗಳ ಹಿಂದೆ ಖರೀದಿ ಮಾಡಿದ ಗೋವಿನ ಜೋಳದ ಬಾಕಿ ಹಣ ಕೊಡಿಸಬೇಕು. 2025–-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಪರಿಹಾರ ಜಮೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಜಿಲ್ಲೆಯಲ್ಲಿ ಎರಡು ತಿಂಗಳು ಕಳೆದರೆ ಬಿತ್ತನೆ ಕಾರ್ಯ ಪ್ರಾರಂಭವಾಗಲಿದ್ದು, ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು’ ಎಂದು ರೈತರು ಆಗ್ರಹಿಸಿದರು.</p>.<p>ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ರಾಮಣ್ಣ ಕೆಂಚಳ್ಳೇರ, ಮಲ್ಲಿಕಾರ್ಜುನ ಬಳ್ಳಾರಿ, ಮಾಲತೇಶ ಪೂಜಾರ, ಎಚ್.ಎಚ್. ಮುಲ್ಲಾ, ಶಿವಬಸಪ್ಪ ಗೋವಿ, ಶಿವಯೋಗಿ ಚ. ಹೊಸಗೌಡ್ರ, ಮರಿಗೌಡ ಪಾಟೀಲ, ರುದ್ರಗೌಡ ಕಾಡನಗೌಡ್ರ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-22-939823652</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>