<p><strong>ಹಾವೇರಿ</strong>: ಜಿಲ್ಲೆಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದಂದು ಬ್ಯಾನರ್ ಮತ್ತು ಬಂಟಿಂಗ್ಸ್ ಪ್ರದರ್ಶಿಸಲು ಸ್ಥಳೀಯ ಆಡಳಿತ ಸಂಸ್ಥೆಗಳ ಅನುಮತಿ ಕಡ್ಡಾಯಗೊಳಿಸಲಾಗಿದ್ದು, ಈ ಸಂಬಂಧ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.</p>.<p>‘ಗಣೇಶ ಹಬ್ಬ ಮತ್ತು ಈದ್ -ಮಿಲಾದ್ ಹಬ್ಬದ ಸಂದರ್ಭದಲ್ಲಿ ಬ್ಯಾನರ್–ಬಂಟಿಂಗ್ಗಳನ್ನು ಕಟ್ಟುವಾಗ ಸಂಬಂಧಪಟ್ಟ ಪೊಲೀಸ್ ಠಾಣಾಧಿಕಾರಿಯಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕು. ನಂತರ, ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳಾದ ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಯಿಂದಲೂ ಅನುಮತಿ ಪಡೆಯುವುದು ಕಡ್ಡಾಯ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p>.<p>‘ಬ್ಯಾನರ್ ಮತ್ತು ಬಂಟಿಂಗ್ಗಳಲ್ಲಿ ಗಣೇಶ ಹಬ್ಬ–ಈದ್ -ಮಿಲಾದ ಹಬ್ಬಕ್ಕೆ ಸಂಬಂಧಪಟ್ಟ ವಿಷಯವನ್ನು ಮಾತ್ರ ನಮೂದಿಸಿರಬೇಕು. ಅನ್ಯ ಧರ್ಮದ ಭಾವನೆಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ಯಾವುದೇ ವಿಷಯಗಳಿರಬಾರದು. ಕಾನೂನು ಬಾಹಿರ ವಿಷಯ ಮುದ್ರಿಸಬಾರದು. ನಿಗದಿಪಡಿಸಿದ ಅವಧಿ ಮುಗಿದ ತಕ್ಷಣ ಬ್ಯಾನರ್ ಮತ್ತು ಬಂಟಿಂಗ್ಗಳನ್ನು ಸ್ವಯಂ ಸೇವಕರಿಂದ ತೆರವುಗೊಳಿಸಬೇಕು.’</p>.<p>‘ಬ್ಯಾನರ್–ಬಂಟಿಂಗ್ಗಳು ಯಾವುದೇ ಕಾರಣಕ್ಕೂ ಹರಿದು ಬೀಳದಂತೆ, ಹಾಳಾಗದಂತೆ ಆಯೋಜಕರು ನೋಡಿಕೊಳ್ಳಬೇಕು. ಬ್ಯಾನರ್–ಬಂಟಿಂಗ್ಸ್ ವಿಚಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾದರೆ, ಅನುಮತಿ ಪಡೆದವರ ವಿರುದ್ಧವೇ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಜಿಲ್ಲೆಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದಂದು ಬ್ಯಾನರ್ ಮತ್ತು ಬಂಟಿಂಗ್ಸ್ ಪ್ರದರ್ಶಿಸಲು ಸ್ಥಳೀಯ ಆಡಳಿತ ಸಂಸ್ಥೆಗಳ ಅನುಮತಿ ಕಡ್ಡಾಯಗೊಳಿಸಲಾಗಿದ್ದು, ಈ ಸಂಬಂಧ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಆದೇಶ ಹೊರಡಿಸಿದ್ದಾರೆ.</p>.<p>‘ಗಣೇಶ ಹಬ್ಬ ಮತ್ತು ಈದ್ -ಮಿಲಾದ್ ಹಬ್ಬದ ಸಂದರ್ಭದಲ್ಲಿ ಬ್ಯಾನರ್–ಬಂಟಿಂಗ್ಗಳನ್ನು ಕಟ್ಟುವಾಗ ಸಂಬಂಧಪಟ್ಟ ಪೊಲೀಸ್ ಠಾಣಾಧಿಕಾರಿಯಿಂದ ನಿರಾಕ್ಷೇಪಣಾ ಪತ್ರ ಪಡೆಯಬೇಕು. ನಂತರ, ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳಾದ ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಯಿಂದಲೂ ಅನುಮತಿ ಪಡೆಯುವುದು ಕಡ್ಡಾಯ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.</p>.<p>‘ಬ್ಯಾನರ್ ಮತ್ತು ಬಂಟಿಂಗ್ಗಳಲ್ಲಿ ಗಣೇಶ ಹಬ್ಬ–ಈದ್ -ಮಿಲಾದ ಹಬ್ಬಕ್ಕೆ ಸಂಬಂಧಪಟ್ಟ ವಿಷಯವನ್ನು ಮಾತ್ರ ನಮೂದಿಸಿರಬೇಕು. ಅನ್ಯ ಧರ್ಮದ ಭಾವನೆಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ಯಾವುದೇ ವಿಷಯಗಳಿರಬಾರದು. ಕಾನೂನು ಬಾಹಿರ ವಿಷಯ ಮುದ್ರಿಸಬಾರದು. ನಿಗದಿಪಡಿಸಿದ ಅವಧಿ ಮುಗಿದ ತಕ್ಷಣ ಬ್ಯಾನರ್ ಮತ್ತು ಬಂಟಿಂಗ್ಗಳನ್ನು ಸ್ವಯಂ ಸೇವಕರಿಂದ ತೆರವುಗೊಳಿಸಬೇಕು.’</p>.<p>‘ಬ್ಯಾನರ್–ಬಂಟಿಂಗ್ಗಳು ಯಾವುದೇ ಕಾರಣಕ್ಕೂ ಹರಿದು ಬೀಳದಂತೆ, ಹಾಳಾಗದಂತೆ ಆಯೋಜಕರು ನೋಡಿಕೊಳ್ಳಬೇಕು. ಬ್ಯಾನರ್–ಬಂಟಿಂಗ್ಸ್ ವಿಚಾರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾದರೆ, ಅನುಮತಿ ಪಡೆದವರ ವಿರುದ್ಧವೇ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>