<p><strong>ಹಾವೇರಿ:</strong> ಜಿಲ್ಲೆಯ ಹಾನಗಲ್ ತಾಲ್ಲೂಕಿನ ಗೊಂದಿ ಕ್ರಾಸ್ ಬಳಿಯ ಹಿರೇಕಾಂಶಿ ರಸ್ತೆಯಲ್ಲಿರುವ ಬಸವೇಶ್ವರ ಜನರಲ್ ಸ್ಟೋರ್ಸ್ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ 13 ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.</p>.<p>ಅಕ್ರಮ ಪಡಿತರ ಸಂಗ್ರಹಕ್ಕೆ ಸಂಬಂಧಪಟ್ಟಂತೆ ಸ್ಟೋರ್ಸ್ ಮಾಲೀಕ ಮಲ್ಲನಗೌಡ ಮರಿಗೌಡ ಓದೇಗೌಡ್ರ ವಿರುದ್ಧ ಆಡೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>‘ಹಾನಗಲ್ ತಹಶೀಲ್ದಾರ್ ಕಚೇರಿಯ ಅಧಿಕಾರಿ ಹನುಮಂತಪ್ಪ ಮಾಳಾಪುರ ಅವರು ದೂರು ನೀಡಿದ್ದಾರೆ. ಮಲ್ಲನಗೌಡ ಓದೇಗೌಡ್ರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಆಡೂರು ಪೊಲೀಸರು ತಿಳಿಸಿದರು.</p>.<p>‘ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಪಡಿತರ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಇದೇ ಅಕ್ಕಿಯನ್ನು ಸ್ಟೋರ್ಸ್ನಲ್ಲಿದ್ದ 29 ಬಿಳಿ ಬಣ್ಣದ ಚೀಲದಲ್ಲಿ ತುಂಬಿಡಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ, ₹29,362 ಮೌಲ್ಯದ ಅಕ್ಕಿ ಜಪ್ತಿ ಮಾಡಿರುವುದಾಗಿ ದೂರುದಾರರು ತಿಳಿಸಿದ್ದಾರೆ’ ಎಂದು ವಿವರಿಸಿದರು.</p>.<p>‘ದಾಳಿ ಸಂದರ್ಭದಲ್ಲಿ ಆರೋಪಿ ಸ್ಥಳದಿಂದ ತಪ್ಪಿಸಿಕೊಂಡು ಓಡಿಹೋಗಿದ್ದಾರೆ. ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯುವ ಜನರಿಂದ ಅಕ್ರಮವಾಗಿ ಅಕ್ಕಿ ಖರೀದಿಸಿ, ಅಂಗಡಿಯಲ್ಲಿ ಇರಿಸಿಕೊಂಡು ಮಾರುತ್ತಿದ್ದರೆಂಬುದು ಗೊತ್ತಾಗಿದೆ. ಆರೋಪಿಯ ಕೃತ್ಯದ ಬಗ್ಗೆ ಮತ್ತಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯ ಹಾನಗಲ್ ತಾಲ್ಲೂಕಿನ ಗೊಂದಿ ಕ್ರಾಸ್ ಬಳಿಯ ಹಿರೇಕಾಂಶಿ ರಸ್ತೆಯಲ್ಲಿರುವ ಬಸವೇಶ್ವರ ಜನರಲ್ ಸ್ಟೋರ್ಸ್ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ 13 ಕ್ವಿಂಟಲ್ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.</p>.<p>ಅಕ್ರಮ ಪಡಿತರ ಸಂಗ್ರಹಕ್ಕೆ ಸಂಬಂಧಪಟ್ಟಂತೆ ಸ್ಟೋರ್ಸ್ ಮಾಲೀಕ ಮಲ್ಲನಗೌಡ ಮರಿಗೌಡ ಓದೇಗೌಡ್ರ ವಿರುದ್ಧ ಆಡೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>‘ಹಾನಗಲ್ ತಹಶೀಲ್ದಾರ್ ಕಚೇರಿಯ ಅಧಿಕಾರಿ ಹನುಮಂತಪ್ಪ ಮಾಳಾಪುರ ಅವರು ದೂರು ನೀಡಿದ್ದಾರೆ. ಮಲ್ಲನಗೌಡ ಓದೇಗೌಡ್ರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಆಡೂರು ಪೊಲೀಸರು ತಿಳಿಸಿದರು.</p>.<p>‘ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಪಡಿತರ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಇದೇ ಅಕ್ಕಿಯನ್ನು ಸ್ಟೋರ್ಸ್ನಲ್ಲಿದ್ದ 29 ಬಿಳಿ ಬಣ್ಣದ ಚೀಲದಲ್ಲಿ ತುಂಬಿಡಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ, ₹29,362 ಮೌಲ್ಯದ ಅಕ್ಕಿ ಜಪ್ತಿ ಮಾಡಿರುವುದಾಗಿ ದೂರುದಾರರು ತಿಳಿಸಿದ್ದಾರೆ’ ಎಂದು ವಿವರಿಸಿದರು.</p>.<p>‘ದಾಳಿ ಸಂದರ್ಭದಲ್ಲಿ ಆರೋಪಿ ಸ್ಥಳದಿಂದ ತಪ್ಪಿಸಿಕೊಂಡು ಓಡಿಹೋಗಿದ್ದಾರೆ. ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯುವ ಜನರಿಂದ ಅಕ್ರಮವಾಗಿ ಅಕ್ಕಿ ಖರೀದಿಸಿ, ಅಂಗಡಿಯಲ್ಲಿ ಇರಿಸಿಕೊಂಡು ಮಾರುತ್ತಿದ್ದರೆಂಬುದು ಗೊತ್ತಾಗಿದೆ. ಆರೋಪಿಯ ಕೃತ್ಯದ ಬಗ್ಗೆ ಮತ್ತಷ್ಟು ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>