<p>ಹಾವೇರಿ: ‘ಮನೆಯ ಪಾಯ ಅಗೆಯುವಾಗ 2 ಕೆ.ಜಿ. ಚಿನ್ನದ ನಿಧಿ ಸಿಕ್ಕಿದೆ. ಅದನ್ನು ₹ 5 ಲಕ್ಷಕ್ಕೆ ಕೊಡುತ್ತೇವೆ’ ಎಂದು ಹೇಳಿ ನಂಬಿಸಿ ₹ 5 ಲಕ್ಷ ನಗದು ಕಿತ್ತೊಯ್ಯಲಾಗಿದ್ದು, ಈ ಬಗ್ಗೆ ಹಲಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಮೇ 6ರಂದು ನಡೆದ ಕೃತ್ಯದ ಬಗ್ಗೆ ಸಂತ್ರಸ್ತ ಶಶಿಕುಮಾರ ದೂರು ನೀಡಿದ್ದಾರೆ. ಆರೋಪಿ ಮಂಜಣ್ಣ ಎಂಬಾತನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ವಿಜಯಪುರ ಜಿಲ್ಲೆಯ ಶಶಿಕುಮಾರ ಅವರು ಹುಬ್ಬಳ್ಳಿಯಲ್ಲಿ ಪರೀಕ್ಷೆಯೊಂದಕ್ಕೆ ಹೋಗಿದ್ದರು. ಅದೇ ಸಂದರ್ಭದಲ್ಲಿ ಅವರಿಗೆ ಆರೋಪಿ ಪರಿಚಯವಾಗಿತ್ತು. ಪರಸ್ಪರ ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡಿದ್ದರು. ಶಶಿಕುಮಾರ ಅವರಿಗೆ ಕರೆ ಮಾಡಿದ್ದ ಆರೋಪಿ, ‘ನಮ್ಮ ಮನೆಯ ಪಾಯ ಅಗೆಯುವಾಗ, 2 ಕೆ.ಜಿ. ಚಿನ್ನದ ನಿಧಿ ಸಿಕ್ಕಿದೆ. ಅದನ್ನು ನಿಮಗೆ ₹5 ಲಕ್ಷಕ್ಕೆ ಕೊಡುತ್ತೇವೆ’ ಎಂದಿದ್ದ. ಆತನ ಮಾತು ನಂಬಿದ್ದ ದೂರುದಾರ, ತಮ್ಮೂರಿನಿಂದ ಹುಬ್ಬಳ್ಳಿಗೆ, ನಂತರ ರಟ್ಟೀಹಳ್ಳಿಗೆ ಬಂದಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>ದೂರುದಾರ ಹಾಗೂ ಆತನ ಸಂಬಂಧಿ, ಸ್ಥಳಕ್ಕೆ ಹೋಗಿದ್ದರು. ಸ್ಥಳದಲ್ಲಿದ್ದ ಇಬ್ಬರು ಆರೋಪಿಗಳು, ದೂರುದಾರರನ್ನು ಸಮೀಪದ ಚಾನಲ್ ಬಳಿ ಕರೆದೊಯ್ದಿದ್ದರು’ ಎಂದರು.</p>.<p>‘ದೂರುದಾರರನ್ನು ಬೆದರಿಸಿದ್ದ ಆರೋಪಿಗಳು, ಅವರ ಬಳಿಯ ₹ 5 ಲಕ್ಷ ನಗದು ಹಾಗೂ 50 ಗ್ರಾಂ ತೂಕದ ಬೆಳ್ಳಿ ಬ್ರಾಸ್ಲೈಟ್ ಕಿತ್ತುಕೊಂಡು ಪರಾರಿಯಾಗಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-22-841292554</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ‘ಮನೆಯ ಪಾಯ ಅಗೆಯುವಾಗ 2 ಕೆ.ಜಿ. ಚಿನ್ನದ ನಿಧಿ ಸಿಕ್ಕಿದೆ. ಅದನ್ನು ₹ 5 ಲಕ್ಷಕ್ಕೆ ಕೊಡುತ್ತೇವೆ’ ಎಂದು ಹೇಳಿ ನಂಬಿಸಿ ₹ 5 ಲಕ್ಷ ನಗದು ಕಿತ್ತೊಯ್ಯಲಾಗಿದ್ದು, ಈ ಬಗ್ಗೆ ಹಲಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಮೇ 6ರಂದು ನಡೆದ ಕೃತ್ಯದ ಬಗ್ಗೆ ಸಂತ್ರಸ್ತ ಶಶಿಕುಮಾರ ದೂರು ನೀಡಿದ್ದಾರೆ. ಆರೋಪಿ ಮಂಜಣ್ಣ ಎಂಬಾತನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ವಿಜಯಪುರ ಜಿಲ್ಲೆಯ ಶಶಿಕುಮಾರ ಅವರು ಹುಬ್ಬಳ್ಳಿಯಲ್ಲಿ ಪರೀಕ್ಷೆಯೊಂದಕ್ಕೆ ಹೋಗಿದ್ದರು. ಅದೇ ಸಂದರ್ಭದಲ್ಲಿ ಅವರಿಗೆ ಆರೋಪಿ ಪರಿಚಯವಾಗಿತ್ತು. ಪರಸ್ಪರ ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡಿದ್ದರು. ಶಶಿಕುಮಾರ ಅವರಿಗೆ ಕರೆ ಮಾಡಿದ್ದ ಆರೋಪಿ, ‘ನಮ್ಮ ಮನೆಯ ಪಾಯ ಅಗೆಯುವಾಗ, 2 ಕೆ.ಜಿ. ಚಿನ್ನದ ನಿಧಿ ಸಿಕ್ಕಿದೆ. ಅದನ್ನು ನಿಮಗೆ ₹5 ಲಕ್ಷಕ್ಕೆ ಕೊಡುತ್ತೇವೆ’ ಎಂದಿದ್ದ. ಆತನ ಮಾತು ನಂಬಿದ್ದ ದೂರುದಾರ, ತಮ್ಮೂರಿನಿಂದ ಹುಬ್ಬಳ್ಳಿಗೆ, ನಂತರ ರಟ್ಟೀಹಳ್ಳಿಗೆ ಬಂದಿದ್ದರು’ ಎಂದು ಪೊಲೀಸರು ತಿಳಿಸಿದರು.</p>.<p>ದೂರುದಾರ ಹಾಗೂ ಆತನ ಸಂಬಂಧಿ, ಸ್ಥಳಕ್ಕೆ ಹೋಗಿದ್ದರು. ಸ್ಥಳದಲ್ಲಿದ್ದ ಇಬ್ಬರು ಆರೋಪಿಗಳು, ದೂರುದಾರರನ್ನು ಸಮೀಪದ ಚಾನಲ್ ಬಳಿ ಕರೆದೊಯ್ದಿದ್ದರು’ ಎಂದರು.</p>.<p>‘ದೂರುದಾರರನ್ನು ಬೆದರಿಸಿದ್ದ ಆರೋಪಿಗಳು, ಅವರ ಬಳಿಯ ₹ 5 ಲಕ್ಷ ನಗದು ಹಾಗೂ 50 ಗ್ರಾಂ ತೂಕದ ಬೆಳ್ಳಿ ಬ್ರಾಸ್ಲೈಟ್ ಕಿತ್ತುಕೊಂಡು ಪರಾರಿಯಾಗಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-22-841292554</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>