<p><strong>ಹಾವೇರಿ:</strong> ತಾಲ್ಲೂಕಿನ ಗುತ್ತಲದಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಮಟ್ಕಾ ದಂಧೆಯನ್ನು ಶಾಸಕ ರುದ್ರಪ್ಪ ಲಮಾಣಿ ಅವರು ಪತ್ತೆ ಮಾಡಿದ್ದು, ಇದರ ಬೆನ್ನಲ್ಲೇ ಕರ್ತವ್ಯಲೋಪ ಆರೋಪದಡಿ ಗುತ್ತಲ ಠಾಣೆಯ ಪಿಎಸ್ಐ ಬಸನಗೌಡ ಬಿರಾದಾರ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.</p><p>ಗುತ್ತಲದ ನಾಡ ಕಚೇರಿ ಉದ್ಘಾಟನೆ ಮತ್ತು ಪಟ್ಟಣ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಮಾ. 2ರಂದು ಶಾಸಕ ರುದ್ರಪ್ಪ ಹೋಗಿದ್ದರು. ಅವರಿಗೆ ಮುತ್ತಿಗೆ ಹಾಕಿದ್ದ ಸ್ಥಳೀಯ ಮಹಿಳೆಯರು, ಕೊಠಡಿಯೊಂದರಲ್ಲಿ ನಡೆಯುತ್ತಿದ್ದ ಮಟ್ಕಾ ಬಗ್ಗೆ ಮಾಹಿತಿ ನೀಡಿದ್ದರು.</p><p>ಅದರಂತೆ ಕೊಠಡಿ ಮೇಲೆ ದಾಳಿ ಮಾಡಿದ್ದ ಶಾಸಕ ರುದ್ರಪ್ಪ ಲಮಾಣಿ, ಮಟ್ಕಾ ಬರೆಯುತ್ತಿದ್ದ ಆರೋಪಿ ಮುತ್ತಪ್ಪ ಪುಟ್ಟಪ್ಪ ರಾಮಣ್ಣನವರ (30) ಎಂಬುವವರನ್ನು ಪುರಾವೆ ಸಮೇತ ಹಿಡಿದಿದ್ದರು. ನಂತರ, ಪಿಎಸ್ಐ ಅವರನ್ನು ಸ್ಥಳಕ್ಕೆ ಕರೆಸಿ ತರಾಟೆಗೆ ತೆಗೆದುಕೊಂಡಿದ್ದರು. ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದರು.</p><p>‘ಕೊಠಡಿಯಲ್ಲಿ ಮಟ್ಕಾ ನಡೆಯುತ್ತಿದ್ದ ಬಗ್ಗೆ ಮಾಹಿತಿ ನೀಡಿದರೂ ಪಿಎಸ್ಐ ಬಸನಗೌಡ ಬಿರಾದಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಮಟ್ಕಾ ದಂಧೆಕೋರರ ಜೊತೆಗೆ ಅವರು ಶಾಮೀಲಾಗಿರುವ ಅನುಮಾನವಿದೆ’ ಎಂದು ಜನರು ದೂರಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಶಾಸಕ ರುದ್ರಪ್ಪ, ಸಂಬಂಧಪಟ್ಟ ಅಧಿಕಾರಿಗಳಿಗೆ ವಿಷಯ ತಲುಪಿಸಿದ್ದರು.</p><p>ಮಟ್ಕಾ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಾವಣಗೆರೆ ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ ಅವರು, ಪಿಎಸ್ಐ ಬಸನಗೌಡ ಬಿರಾದಾರ ಅವರನ್ನು ಕೆಲಸದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇಲಾಖೆ ವಿಚಾರಣೆಗೆ ನಿರ್ದೇಶನ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ತಾಲ್ಲೂಕಿನ ಗುತ್ತಲದಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ಮಟ್ಕಾ ದಂಧೆಯನ್ನು ಶಾಸಕ ರುದ್ರಪ್ಪ ಲಮಾಣಿ ಅವರು ಪತ್ತೆ ಮಾಡಿದ್ದು, ಇದರ ಬೆನ್ನಲ್ಲೇ ಕರ್ತವ್ಯಲೋಪ ಆರೋಪದಡಿ ಗುತ್ತಲ ಠಾಣೆಯ ಪಿಎಸ್ಐ ಬಸನಗೌಡ ಬಿರಾದಾರ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.</p><p>ಗುತ್ತಲದ ನಾಡ ಕಚೇರಿ ಉದ್ಘಾಟನೆ ಮತ್ತು ಪಟ್ಟಣ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಮಾ. 2ರಂದು ಶಾಸಕ ರುದ್ರಪ್ಪ ಹೋಗಿದ್ದರು. ಅವರಿಗೆ ಮುತ್ತಿಗೆ ಹಾಕಿದ್ದ ಸ್ಥಳೀಯ ಮಹಿಳೆಯರು, ಕೊಠಡಿಯೊಂದರಲ್ಲಿ ನಡೆಯುತ್ತಿದ್ದ ಮಟ್ಕಾ ಬಗ್ಗೆ ಮಾಹಿತಿ ನೀಡಿದ್ದರು.</p><p>ಅದರಂತೆ ಕೊಠಡಿ ಮೇಲೆ ದಾಳಿ ಮಾಡಿದ್ದ ಶಾಸಕ ರುದ್ರಪ್ಪ ಲಮಾಣಿ, ಮಟ್ಕಾ ಬರೆಯುತ್ತಿದ್ದ ಆರೋಪಿ ಮುತ್ತಪ್ಪ ಪುಟ್ಟಪ್ಪ ರಾಮಣ್ಣನವರ (30) ಎಂಬುವವರನ್ನು ಪುರಾವೆ ಸಮೇತ ಹಿಡಿದಿದ್ದರು. ನಂತರ, ಪಿಎಸ್ಐ ಅವರನ್ನು ಸ್ಥಳಕ್ಕೆ ಕರೆಸಿ ತರಾಟೆಗೆ ತೆಗೆದುಕೊಂಡಿದ್ದರು. ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದರು.</p><p>‘ಕೊಠಡಿಯಲ್ಲಿ ಮಟ್ಕಾ ನಡೆಯುತ್ತಿದ್ದ ಬಗ್ಗೆ ಮಾಹಿತಿ ನೀಡಿದರೂ ಪಿಎಸ್ಐ ಬಸನಗೌಡ ಬಿರಾದಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಮಟ್ಕಾ ದಂಧೆಕೋರರ ಜೊತೆಗೆ ಅವರು ಶಾಮೀಲಾಗಿರುವ ಅನುಮಾನವಿದೆ’ ಎಂದು ಜನರು ದೂರಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಶಾಸಕ ರುದ್ರಪ್ಪ, ಸಂಬಂಧಪಟ್ಟ ಅಧಿಕಾರಿಗಳಿಗೆ ವಿಷಯ ತಲುಪಿಸಿದ್ದರು.</p><p>ಮಟ್ಕಾ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಾವಣಗೆರೆ ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ ಅವರು, ಪಿಎಸ್ಐ ಬಸನಗೌಡ ಬಿರಾದಾರ ಅವರನ್ನು ಕೆಲಸದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇಲಾಖೆ ವಿಚಾರಣೆಗೆ ನಿರ್ದೇಶನ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>