<p><strong>ಹಾವೇರಿ:</strong> ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಸೋಮವಾರ ಜೋರು ಮಳೆಯಾಗಿದ್ದು, ಜಿಲ್ಲಾ ಕೇಂದ್ರವಾದ ಹಾವೇರಿಯಲ್ಲಿ ರಸ್ತೆ ಮೇಲೆಯೇ ನೀರು ಹರಿಯಿತು.</p>.<p>ಜಿಲ್ಲೆಯಾದ್ಯಂತ ಕೆಲದಿನಗಳಿಂದ ಮೋಡ ಕವಿದ ವಾತಾವರಣವಿದೆ. ಬಿಡುವು ನೀಡುತ್ತಲೇ ಮಳೆ ಸುರಿಯುತ್ತಿದೆ. ಭಾನುವಾರವೂ ಮಳೆಯಾಗಿತ್ತು. ಆದರೆ, ಸೋಮವಾರ ಮಳೆಯ ಅಬ್ಬರ ಜೋರಾಗಿತ್ತು.</p>.<p>ಹಾವೇರಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಆರಂಭವಾದ ಮಳೆ ಸಂಜೆಯವರೆಗೂ ಸುರಿಯಿತು. ತಡರಾತ್ರಿಯೂ ಜಿಟಿ ಜಿಟಿ ಮಳೆಯಿತ್ತು.</p>.<p>ನಿತ್ಯದ ಕೆಲಸಕ್ಕಾಗಿ ಮನೆಯಿಂದ ಹೊರಗೆ ಬಂದಿದ್ದ ಜನರು, ಮಳೆಯಲ್ಲಿ ಓಡಾಡಿದರು. ಕೆಲವರು, ರಸ್ತೆಯ ಅಕ್ಕ–ಪಕ್ಕದಲ್ಲಿರುವ ಮಳಿಗೆಗಳನ್ನು ಆಶ್ರಯ ಪಡೆದುಕೊಂಡಿದ್ದರು.</p>.<p>ಮಳೆಯ ಅಬ್ಬರ ಜೋರಾಗಿದ್ದರಿಂದ ಹಲವು ಕಡೆಗಳಲ್ಲಿ ರಸ್ತೆ ಮೇಲೆಯೇ ನೀರು ಹರಿಯಿತು. ನಗರದ ಕೆಲ ಕಾಲುವೆಗಳಲ್ಲಿ ಹೂಳು ತುಂಬಿಕೊಂಡಿದ್ದರಿಂದ, ನೀರು ರಸ್ತೆಗೆ ಹರಿಯಿತು.</p>.<p>ಹಳೇ ಪಿ.ಬಿ. ರಸ್ತೆ, ಹಾನಗಲ್ ರಸ್ತೆ, ಬಸವೇಶ್ವರನಗರದ, ಎಂ.ಜಿ. ರಸ್ತೆ, ಅಶ್ವಿನಿನಗರ, ದಾನೇಶ್ವರಿನಗರ, ಮಂಜುನಾಥ ನಗರ, ಇಜಾರಿ ಲಕಮಾಪುರ, ಗುತ್ತಲ ರಸ್ತೆ, ಮೈಲಾರ ಮಹದೇವಪ್ಪ ವೃತ್ತ, ವಿದ್ಯಾನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಸುರಿಯಿತು.</p>.<p class="Subhead">ಹಿರೇಕೆರೂರು: ತಾಲ್ಲೂಕಿನ ಹಂಸಬಾವಿಯಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿದ್ದರಿಂದ, ಮಳೆಯಿಂದ ಸಂಗ್ರಹವಾದ ನೀರು ಮನೆಗಳಿಗೆ ನುಗ್ಗಿತ್ತು. ಹಂಸಬಾವಿಯ ಬ್ಯಾಂಕ ಆಫ್ ಬರೋಡಾ ಹತ್ತಿರ ಕೆಲ ಮನೆಗಳಿಗೆ ನೀರು ನುಗ್ಗಿದ್ದು ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಸೋಮವಾರ ಜೋರು ಮಳೆಯಾಗಿದ್ದು, ಜಿಲ್ಲಾ ಕೇಂದ್ರವಾದ ಹಾವೇರಿಯಲ್ಲಿ ರಸ್ತೆ ಮೇಲೆಯೇ ನೀರು ಹರಿಯಿತು.</p>.<p>ಜಿಲ್ಲೆಯಾದ್ಯಂತ ಕೆಲದಿನಗಳಿಂದ ಮೋಡ ಕವಿದ ವಾತಾವರಣವಿದೆ. ಬಿಡುವು ನೀಡುತ್ತಲೇ ಮಳೆ ಸುರಿಯುತ್ತಿದೆ. ಭಾನುವಾರವೂ ಮಳೆಯಾಗಿತ್ತು. ಆದರೆ, ಸೋಮವಾರ ಮಳೆಯ ಅಬ್ಬರ ಜೋರಾಗಿತ್ತು.</p>.<p>ಹಾವೇರಿಯಲ್ಲಿ ಮಧ್ಯಾಹ್ನ 2 ಗಂಟೆಗೆ ಆರಂಭವಾದ ಮಳೆ ಸಂಜೆಯವರೆಗೂ ಸುರಿಯಿತು. ತಡರಾತ್ರಿಯೂ ಜಿಟಿ ಜಿಟಿ ಮಳೆಯಿತ್ತು.</p>.<p>ನಿತ್ಯದ ಕೆಲಸಕ್ಕಾಗಿ ಮನೆಯಿಂದ ಹೊರಗೆ ಬಂದಿದ್ದ ಜನರು, ಮಳೆಯಲ್ಲಿ ಓಡಾಡಿದರು. ಕೆಲವರು, ರಸ್ತೆಯ ಅಕ್ಕ–ಪಕ್ಕದಲ್ಲಿರುವ ಮಳಿಗೆಗಳನ್ನು ಆಶ್ರಯ ಪಡೆದುಕೊಂಡಿದ್ದರು.</p>.<p>ಮಳೆಯ ಅಬ್ಬರ ಜೋರಾಗಿದ್ದರಿಂದ ಹಲವು ಕಡೆಗಳಲ್ಲಿ ರಸ್ತೆ ಮೇಲೆಯೇ ನೀರು ಹರಿಯಿತು. ನಗರದ ಕೆಲ ಕಾಲುವೆಗಳಲ್ಲಿ ಹೂಳು ತುಂಬಿಕೊಂಡಿದ್ದರಿಂದ, ನೀರು ರಸ್ತೆಗೆ ಹರಿಯಿತು.</p>.<p>ಹಳೇ ಪಿ.ಬಿ. ರಸ್ತೆ, ಹಾನಗಲ್ ರಸ್ತೆ, ಬಸವೇಶ್ವರನಗರದ, ಎಂ.ಜಿ. ರಸ್ತೆ, ಅಶ್ವಿನಿನಗರ, ದಾನೇಶ್ವರಿನಗರ, ಮಂಜುನಾಥ ನಗರ, ಇಜಾರಿ ಲಕಮಾಪುರ, ಗುತ್ತಲ ರಸ್ತೆ, ಮೈಲಾರ ಮಹದೇವಪ್ಪ ವೃತ್ತ, ವಿದ್ಯಾನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಸುರಿಯಿತು.</p>.<p class="Subhead">ಹಿರೇಕೆರೂರು: ತಾಲ್ಲೂಕಿನ ಹಂಸಬಾವಿಯಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿದ್ದರಿಂದ, ಮಳೆಯಿಂದ ಸಂಗ್ರಹವಾದ ನೀರು ಮನೆಗಳಿಗೆ ನುಗ್ಗಿತ್ತು. ಹಂಸಬಾವಿಯ ಬ್ಯಾಂಕ ಆಫ್ ಬರೋಡಾ ಹತ್ತಿರ ಕೆಲ ಮನೆಗಳಿಗೆ ನೀರು ನುಗ್ಗಿದ್ದು ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>