<p><strong>ಹಾವೇರಿ</strong>: ಮನೆ ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆ ಹಾಗೂ ಔಷಧೋಪಚಾರ ನಿರ್ವಹಣೆ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗೃಹ ಆರೋಗ್ಯ ಯೋಜನೆ’ಗೆ ಹಾವೇರಿ ಜಿಲ್ಲೆಯಲ್ಲಿಯೂ ಚಾಲನೆ ನೀಡಲಾಗಿದೆ.</p>.<p>ಇಲ್ಲಿಯ ದೇವಗಿರಿ ರಸ್ತೆಯಲ್ಲಿರುವ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಹಿಮ್ಸ್) ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಯೋಜನೆಯ ಆಶಾ ಕೈಪಿಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಬಿಡುಗಡೆಗೊಳಿಸಿದರು.</p>.<p>ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆ ಘೋಷಿಸಿದ್ದರು. 2024ರ ಅಕ್ಟೋಬರ್ 24ರಂದು ಬೆಂಗಳೂರಿನಲ್ಲಿ ಯೋಜನೆಗೆ ಚಾಲನೆ ನೀಡಿ, ಕೋಲಾರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ್ದರು. ಅದರ ಯಶಸ್ಸಿನ ನಂತರ, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಈ ಯೋಜನೆ ವಿಸ್ತರಿಸಲಾಗಿದೆ.</p>.<p>‘30 ವರ್ಷ ವಯೋಮಿತಿ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆ ನಡೆಸಲಾಗುವುದು. ಮಧುಮೇಹ, ರಕ್ತದೊತ್ತಡ ಮತ್ತು ಮೂರು ಸಾಮಾನ್ಯ ಕ್ಯಾನ್ಸರ್ಗಳ (ಬಾಯಿ, ಸ್ತನ ಮತ್ತು ಗರ್ಭಕಂಠ) ತಪಾಸಣೆಯನ್ನೂ ಮಾಡಲಾಗುವುದು’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.</p>.<p>‘ಆರೋಗ್ಯ ತಪಾಸಣೆ ನಂತರ, ಏನಾದರೂ ಸಮಸ್ಯೆ ಕಂಡುಬಂದರೆ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಆಹ್ವಾನಿಸಲಾಗುವುದು. ಅಲ್ಲಿಯೂ ಪುನಃ ತಪಾಸಣೆ, ನಿರ್ವಹಣೆ ಮತ್ತು ಉಚಿತವಾಗಿ ಔಷಧಿಗಳನ್ನು ಒದಗಿಸಲಾಗುವುದು. ತಪಾಸಣೆ ಸಂದರ್ಭದಲ್ಲಿ ಆರೋಗ್ಯ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಸಹ ಮೂಡಿಸಲಾಗುತ್ತಿದೆ’ ಎಂದು ಹೇಳಿದರು.</p>.<p>‘ಆಶಾ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿ ಆರೋಗ್ಯದ ಅರಿವು ಮೂಡಿಸಲಿದ್ದಾರೆ. ಏನಾದರೂ ಸಮಸ್ಯೆಗಳು ಕಂಡುಬಂದರೆ, ಅಂಥವರನ್ನು ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಕರೆತರಲಿದ್ದಾರೆ. ವೈದ್ಯಕೀಯ ಅಧಿಕಾರಿಗಳು, ರೋಗನಿರ್ಣಯ, ಚಿಕಿತ್ಸೆ ಮತ್ತು ನಿರ್ವಹಣೆ ಸೇವೆಗಳನ್ನು ಒದಗಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಮನೆ ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆ ಹಾಗೂ ಔಷಧೋಪಚಾರ ನಿರ್ವಹಣೆ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗೃಹ ಆರೋಗ್ಯ ಯೋಜನೆ’ಗೆ ಹಾವೇರಿ ಜಿಲ್ಲೆಯಲ್ಲಿಯೂ ಚಾಲನೆ ನೀಡಲಾಗಿದೆ.</p>.<p>ಇಲ್ಲಿಯ ದೇವಗಿರಿ ರಸ್ತೆಯಲ್ಲಿರುವ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಹಿಮ್ಸ್) ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಯೋಜನೆಯ ಆಶಾ ಕೈಪಿಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಬಿಡುಗಡೆಗೊಳಿಸಿದರು.</p>.<p>ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆ ಘೋಷಿಸಿದ್ದರು. 2024ರ ಅಕ್ಟೋಬರ್ 24ರಂದು ಬೆಂಗಳೂರಿನಲ್ಲಿ ಯೋಜನೆಗೆ ಚಾಲನೆ ನೀಡಿ, ಕೋಲಾರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ್ದರು. ಅದರ ಯಶಸ್ಸಿನ ನಂತರ, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಈ ಯೋಜನೆ ವಿಸ್ತರಿಸಲಾಗಿದೆ.</p>.<p>‘30 ವರ್ಷ ವಯೋಮಿತಿ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆ ನಡೆಸಲಾಗುವುದು. ಮಧುಮೇಹ, ರಕ್ತದೊತ್ತಡ ಮತ್ತು ಮೂರು ಸಾಮಾನ್ಯ ಕ್ಯಾನ್ಸರ್ಗಳ (ಬಾಯಿ, ಸ್ತನ ಮತ್ತು ಗರ್ಭಕಂಠ) ತಪಾಸಣೆಯನ್ನೂ ಮಾಡಲಾಗುವುದು’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.</p>.<p>‘ಆರೋಗ್ಯ ತಪಾಸಣೆ ನಂತರ, ಏನಾದರೂ ಸಮಸ್ಯೆ ಕಂಡುಬಂದರೆ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಆಹ್ವಾನಿಸಲಾಗುವುದು. ಅಲ್ಲಿಯೂ ಪುನಃ ತಪಾಸಣೆ, ನಿರ್ವಹಣೆ ಮತ್ತು ಉಚಿತವಾಗಿ ಔಷಧಿಗಳನ್ನು ಒದಗಿಸಲಾಗುವುದು. ತಪಾಸಣೆ ಸಂದರ್ಭದಲ್ಲಿ ಆರೋಗ್ಯ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಸಹ ಮೂಡಿಸಲಾಗುತ್ತಿದೆ’ ಎಂದು ಹೇಳಿದರು.</p>.<p>‘ಆಶಾ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿ ಆರೋಗ್ಯದ ಅರಿವು ಮೂಡಿಸಲಿದ್ದಾರೆ. ಏನಾದರೂ ಸಮಸ್ಯೆಗಳು ಕಂಡುಬಂದರೆ, ಅಂಥವರನ್ನು ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಕರೆತರಲಿದ್ದಾರೆ. ವೈದ್ಯಕೀಯ ಅಧಿಕಾರಿಗಳು, ರೋಗನಿರ್ಣಯ, ಚಿಕಿತ್ಸೆ ಮತ್ತು ನಿರ್ವಹಣೆ ಸೇವೆಗಳನ್ನು ಒದಗಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>