<p><strong>ಹಾವೇರಿ</strong>: ಇಲ್ಲಿನ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಶೌಚಾಲಯ ಬಳಿ ಗರ್ಭಿಣಿಗೆ ದಿಢೀರ್ ಹೆರಿಗೆಯಾಗಿ ನೆಲದ ಮೇಲೆ ಬಿದ್ದು ಶಿಶು ಮೃತಪಟ್ಟ ಘಟನೆ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.</p>.<p>ಆಸ್ಪತ್ರೆಯಲ್ಲಿ ಮಂಗಳವಾರ (ನ.18) ನಡೆದಿದ್ದ ಘಟನೆ ಬಗ್ಗೆ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ‘ನೆಲಕ್ಕೆ ಬಿದ್ದು ಹಸುಗೂಸು ಸಾವು’ ವರದಿ ಪ್ರಕಟಗೊಂಡಿತ್ತು. ಇದನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ, ‘ಘಟನೆ ಬಗ್ಗೆ ತನಿಖೆ ನಡೆಸಿ 3 ದಿನದೊಳಗೆ ವರದಿ ಸಲ್ಲಿಸಿ’ ಎಂದು ಹಾವೇರಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ಸೂಚಿಸಿದ್ದಾರೆ.</p>.<p class="Subhead">ಸಾವಿಗೆ ಸರ್ಕಾರವೇ ಹೊಣೆ: ‘ಜಿಲ್ಲಾಸ್ಪತ್ರೆ ಕಾರಿಡಾರ್ನಲ್ಲಿ ಶಿಶು ಅಸುನೀಗಿರುವುದು ಹೃದಯವಿದ್ರಾವಕ ಘಟನೆ. ಇದು ರಾಜ್ಯ ಸರ್ಕಾರದ ಬೇಜವಾಬ್ದಾರಿಗೆ ನಿದರ್ಶನ. ಈ ಸಾವಿಗೆ ಸರ್ಕಾರವೇ ಹೊಣೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಇಲ್ಲಿನ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಶೌಚಾಲಯ ಬಳಿ ಗರ್ಭಿಣಿಗೆ ದಿಢೀರ್ ಹೆರಿಗೆಯಾಗಿ ನೆಲದ ಮೇಲೆ ಬಿದ್ದು ಶಿಶು ಮೃತಪಟ್ಟ ಘಟನೆ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.</p>.<p>ಆಸ್ಪತ್ರೆಯಲ್ಲಿ ಮಂಗಳವಾರ (ನ.18) ನಡೆದಿದ್ದ ಘಟನೆ ಬಗ್ಗೆ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ‘ನೆಲಕ್ಕೆ ಬಿದ್ದು ಹಸುಗೂಸು ಸಾವು’ ವರದಿ ಪ್ರಕಟಗೊಂಡಿತ್ತು. ಇದನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ, ‘ಘಟನೆ ಬಗ್ಗೆ ತನಿಖೆ ನಡೆಸಿ 3 ದಿನದೊಳಗೆ ವರದಿ ಸಲ್ಲಿಸಿ’ ಎಂದು ಹಾವೇರಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ಸೂಚಿಸಿದ್ದಾರೆ.</p>.<p class="Subhead">ಸಾವಿಗೆ ಸರ್ಕಾರವೇ ಹೊಣೆ: ‘ಜಿಲ್ಲಾಸ್ಪತ್ರೆ ಕಾರಿಡಾರ್ನಲ್ಲಿ ಶಿಶು ಅಸುನೀಗಿರುವುದು ಹೃದಯವಿದ್ರಾವಕ ಘಟನೆ. ಇದು ರಾಜ್ಯ ಸರ್ಕಾರದ ಬೇಜವಾಬ್ದಾರಿಗೆ ನಿದರ್ಶನ. ಈ ಸಾವಿಗೆ ಸರ್ಕಾರವೇ ಹೊಣೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>