<p><strong>ಹಾವೇರಿ:</strong> ಜಿಲ್ಲೆಯ ರೌಡಿ ಪಟ್ಟಿಯಲ್ಲಿರುವ 182 ಮಂದಿಯ ಮನೆಗಳ ಮೇಲೆ ಬುಧವಾರ ನಸುಕಿನಲ್ಲಿ ದಿಢೀರ್ ದಾಳಿ ನಡೆಸಿದ ಪೊಲೀಸರು, ತಪಾಸಣೆ ನಡೆಸಿದರು.</p>.<p>ಜಿಲ್ಲೆಯ ಹಾವೇರಿ, ಹಾನಗಲ್, ರಾಣೆಬೆನ್ನೂರು, ಹಿರೇಕೆರೂರು, ರಟ್ಟೀಹಳ್ಳಿ, ಬ್ಯಾಡಗಿ, ಶಿಗ್ಗಾವಿ, ಸವಣೂರು ಹಾಗೂ ಸುತ್ತಮುತ್ತಲಿನ ಠಾಣೆಗಳಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು.</p>.<p>ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಮೇಲೆ ಹೊರಗಿರುವ ವ್ಯಕ್ತಿಗಳ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದರು. ರೌಡಿ ಪಟ್ಟಿಯಲ್ಲಿ ಹೆಸರಿರುವ ವ್ಯಕ್ತಿಗಳ ಮನೆಗಳಿಗೆ ಹೋಗಿ, ಅವರನ್ನು ವಿಚಾರಣೆಗೆ ಒಳಪಡಿಸಿದರು. ಯಾವುದಾದರೂ ಮಾರಕಾಸ್ತ್ರ ಇದೆಯಾ? ಎಂಬುದನ್ನು ತಿಳಿಯಲು ಮನೆಯಲ್ಲಿ ತಪಾಸಣೆ ನಡೆಸಿದರು.</p>.<p>‘ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲು ವಿಶೇಷ ಒತ್ತು ನೀಡಲಾಗಿದೆ. ಯಾವುದೇ ಕೃತ್ಯದಲ್ಲಿ ಭಾಗಿಯಾಗಬಾರದು. ಯಾರೊಬ್ಬರನ್ನೂ ಬೆದರಿಸಬಾರದು. ಆಕಸ್ಮಾತ್ ಕಾನೂನು ಉಲ್ಲಂಘಿಸಿದರೆ ಕ್ರಮ ಖಚಿತ’ ಎಂದು ಪೊಲೀಸರು ರೌಡಿಗಳಿಗೆ ಎಚ್ಚರಿಕೆ ನೀಡಿದರು.</p>.<p>ಡಿವೈಎಸ್ಪಿ, ಇನ್ಸ್ಪೆಕ್ಟರ್, ಪಿಎಸ್ಐ ಹಾಗೂ ಸಿಬ್ಬಂದಿ ದಾಳಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯ ರೌಡಿ ಪಟ್ಟಿಯಲ್ಲಿರುವ 182 ಮಂದಿಯ ಮನೆಗಳ ಮೇಲೆ ಬುಧವಾರ ನಸುಕಿನಲ್ಲಿ ದಿಢೀರ್ ದಾಳಿ ನಡೆಸಿದ ಪೊಲೀಸರು, ತಪಾಸಣೆ ನಡೆಸಿದರು.</p>.<p>ಜಿಲ್ಲೆಯ ಹಾವೇರಿ, ಹಾನಗಲ್, ರಾಣೆಬೆನ್ನೂರು, ಹಿರೇಕೆರೂರು, ರಟ್ಟೀಹಳ್ಳಿ, ಬ್ಯಾಡಗಿ, ಶಿಗ್ಗಾವಿ, ಸವಣೂರು ಹಾಗೂ ಸುತ್ತಮುತ್ತಲಿನ ಠಾಣೆಗಳಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು.</p>.<p>ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಮೇಲೆ ಹೊರಗಿರುವ ವ್ಯಕ್ತಿಗಳ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದರು. ರೌಡಿ ಪಟ್ಟಿಯಲ್ಲಿ ಹೆಸರಿರುವ ವ್ಯಕ್ತಿಗಳ ಮನೆಗಳಿಗೆ ಹೋಗಿ, ಅವರನ್ನು ವಿಚಾರಣೆಗೆ ಒಳಪಡಿಸಿದರು. ಯಾವುದಾದರೂ ಮಾರಕಾಸ್ತ್ರ ಇದೆಯಾ? ಎಂಬುದನ್ನು ತಿಳಿಯಲು ಮನೆಯಲ್ಲಿ ತಪಾಸಣೆ ನಡೆಸಿದರು.</p>.<p>‘ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳನ್ನು ಹತ್ತಿಕ್ಕಲು ವಿಶೇಷ ಒತ್ತು ನೀಡಲಾಗಿದೆ. ಯಾವುದೇ ಕೃತ್ಯದಲ್ಲಿ ಭಾಗಿಯಾಗಬಾರದು. ಯಾರೊಬ್ಬರನ್ನೂ ಬೆದರಿಸಬಾರದು. ಆಕಸ್ಮಾತ್ ಕಾನೂನು ಉಲ್ಲಂಘಿಸಿದರೆ ಕ್ರಮ ಖಚಿತ’ ಎಂದು ಪೊಲೀಸರು ರೌಡಿಗಳಿಗೆ ಎಚ್ಚರಿಕೆ ನೀಡಿದರು.</p>.<p>ಡಿವೈಎಸ್ಪಿ, ಇನ್ಸ್ಪೆಕ್ಟರ್, ಪಿಎಸ್ಐ ಹಾಗೂ ಸಿಬ್ಬಂದಿ ದಾಳಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>