<p><strong>ಹಾವೇರಿ:</strong>ಲಿಂ. ಶಿವಬಸವ ಸ್ವಾಮೀಜಿ 74ನೇ ಹಾಗೂ ಲಿಂ.ಶಿವಲಿಂಗ ಸ್ವಾಮೀಜಿಯ 11ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ 2020ರ ಜನವರಿ 1ರಿಂದ 7ರವರೆಗೆ ‘ನಮ್ಮೂರ ಜಾತ್ರೆ’ ಕಾರ್ಯಕ್ರಮ ನಡೆಯಲಿದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಾತ್ರೆ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಹಿಂದಿನ ವರ್ಷ ಕಬಡ್ಡಿ, ವಚನ ಭಜನಾ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಆದರೆ, ಈ ಬಾರಿ ವಿಶೇಷವಾಗಿ ಫಲಪುಷ್ಪ ಪ್ರದರ್ಶನ, ಜಾನುವಾರು ಜಾತ್ರೆ, ರೈತರಿಗಾಗಿ ಕೃಷಿ ಮಾಹಿತಿನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ಜ.1ರಂದು ಬೆಳಿಗ್ಗೆ 8.30ಕ್ಕೆ ಷಟಸ್ಥಲ ಧ್ವಜಾರೋಹಣ, ಸಂಜೆ 6.30ಕ್ಕೆ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಜ.2 ರಂದು ಸಂಜೆ ಧಾರ್ಮಿಕ ಕಾರ್ಯಕ್ರಮ, ಅಕ್ಕನ ಬಳಗದ ಸ್ಮರಣ ಸಂಚಿಕೆ ‘ಕರ್ಪೂರ ಗಿರಿ’ಬಿಡುಗಡೆ ಮಾಡಲಾಗುತ್ತದೆ ಎಂದರು.</p>.<p>ಜ.3ರಂದು ಬೆಳಗ್ಗೆ 10 ಗಂಟೆಗೆ ಎಪಿಎಂಸಿ ಜಾನುವಾರು ಮಾರುಕಟ್ಟೆಯಲ್ಲಿ ಶಿವಬಸವ ದನಗಳ ಜಾತ್ರೆ ಉದ್ಘಾಟನೆ, ಸಂಜೆ 5.30ಕ್ಕೆ ಹಳೆ ಯಾಲಕ್ಕಿ ವರ್ತಕರ ಸಂಘದ ಆವರಣದಲ್ಲಿ ಫಲ–ಪುಷ್ಪ ಪ್ರದರ್ಶನ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಜ.4 ಮತ್ತು 5ರಂದು ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದರು.</p>.<p>ಜ.6ರಂದು ಲಿಂಗೈಕ್ಯ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವದಅಂಗವಾಗಿ ಬೆ.8ಕ್ಕೆ ಸ್ವಾಮೀಜಿಗಳ ಗದ್ದುಗೆ ಮಹಾ ಪೂಜೆ, ಬಿಲ್ವಾರ್ಚನೆ, ಮಧ್ಯಾಹ್ನ 12ಗಂಟೆಗೆ ಮಹಾಗಣಾರಾಧನೆ ಸಂಜೆ 4ಕ್ಕೆ ಭಾವಚಿತ್ರದ ಮೆರವಣಿಗೆ ಇರಲಿದ್ದು, ವಿವಿಧ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಜ.7ರಂದು ‘ಸಾಂಸ್ಕೃತಿಕ ಸುಗ್ಗಿ’ ಕಾರ್ಯಕ್ರಮ ನಡೆಯಲಿದೆ ಎಂದರು.</p>.<p>ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಜಿಲ್ಲಾ ಯೋಗ ಸಂಸ್ಥೆ ಸಹಯೋಗದಲ್ಲಿ 2019ರ ಡಿ.29ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಎಲ್ಲ ವಯೋಮಾನದವರಿಗಾಗಿ ‘ಯೋಗಾಸನ ಸ್ಪರ್ಧೆ’ ಹಮ್ಮಿಕೊಳ್ಳಲಾಗಿದೆ ಎಂದರು.</p>.<p><strong>ಜಾನುವಾರುಗಳಿಗೆ ಪ್ರಶಸ್ತಿ:</strong></p>.<p>ದನಗಳ ಜಾತ್ರೆ ಜತೆಗೆ ಜಾನುವಾರುಗಳ ಉಚಿತ ಆರೋಗ್ಯ ತಪಾಸಣೆ ಮತ್ತು ಪ್ರದರ್ಶನ ನಡೆಯಲಿದೆ. ಇದರಲ್ಲಿ 8 ತಳಿ ಜಾನುವಾರು ಪಾಲ್ಗೊಳ್ಳಲಿದ್ದು, ಅವುಗಳಲ್ಲಿ 24 ಜಾನುವಾರುಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ ಎಂದು ಉತ್ಸವ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ ಹೇಳಿದರು.</p>.<p>ಉತ್ಸವ ಸಮಿತಿಯ ಸದಸ್ಯ ತಮ್ಮಣ್ಣ ಮುದ್ದಿ, ಮುಖಂಡರಾದಪಿ.ಡಿ. ಶಿರೂರ, ಎಸ್.ಎಸ್. ಮುಷ್ಠಿ, ನಾರಾಯಣ ಲೋಖಂಡೆ, ಶಿವಬಸಪ್ಪ ಜಾಬೀನ, ಪ್ರಕಾಶ ಶೆಟ್ಟಿ, ಆರ್.ಎಸ್. ಲಂಬಿ, ಶಿವಕುಮಾರ, ಶಿವರಾಜ ವಳಸಂಗದ, ಬಿ. ಬಸವರಾಜ, ಆರ್.ಎಸ್. ಮಾಗನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong>ಲಿಂ. ಶಿವಬಸವ ಸ್ವಾಮೀಜಿ 74ನೇ ಹಾಗೂ ಲಿಂ.ಶಿವಲಿಂಗ ಸ್ವಾಮೀಜಿಯ 11ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ 2020ರ ಜನವರಿ 1ರಿಂದ 7ರವರೆಗೆ ‘ನಮ್ಮೂರ ಜಾತ್ರೆ’ ಕಾರ್ಯಕ್ರಮ ನಡೆಯಲಿದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಾತ್ರೆ ಅಂಗವಾಗಿ ಪ್ರತಿವರ್ಷದಂತೆ ಈ ವರ್ಷವೂ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಹಿಂದಿನ ವರ್ಷ ಕಬಡ್ಡಿ, ವಚನ ಭಜನಾ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಆದರೆ, ಈ ಬಾರಿ ವಿಶೇಷವಾಗಿ ಫಲಪುಷ್ಪ ಪ್ರದರ್ಶನ, ಜಾನುವಾರು ಜಾತ್ರೆ, ರೈತರಿಗಾಗಿ ಕೃಷಿ ಮಾಹಿತಿನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ಜ.1ರಂದು ಬೆಳಿಗ್ಗೆ 8.30ಕ್ಕೆ ಷಟಸ್ಥಲ ಧ್ವಜಾರೋಹಣ, ಸಂಜೆ 6.30ಕ್ಕೆ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಜ.2 ರಂದು ಸಂಜೆ ಧಾರ್ಮಿಕ ಕಾರ್ಯಕ್ರಮ, ಅಕ್ಕನ ಬಳಗದ ಸ್ಮರಣ ಸಂಚಿಕೆ ‘ಕರ್ಪೂರ ಗಿರಿ’ಬಿಡುಗಡೆ ಮಾಡಲಾಗುತ್ತದೆ ಎಂದರು.</p>.<p>ಜ.3ರಂದು ಬೆಳಗ್ಗೆ 10 ಗಂಟೆಗೆ ಎಪಿಎಂಸಿ ಜಾನುವಾರು ಮಾರುಕಟ್ಟೆಯಲ್ಲಿ ಶಿವಬಸವ ದನಗಳ ಜಾತ್ರೆ ಉದ್ಘಾಟನೆ, ಸಂಜೆ 5.30ಕ್ಕೆ ಹಳೆ ಯಾಲಕ್ಕಿ ವರ್ತಕರ ಸಂಘದ ಆವರಣದಲ್ಲಿ ಫಲ–ಪುಷ್ಪ ಪ್ರದರ್ಶನ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಜ.4 ಮತ್ತು 5ರಂದು ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ ಎಂದರು.</p>.<p>ಜ.6ರಂದು ಲಿಂಗೈಕ್ಯ ಸ್ವಾಮೀಜಿಗಳ ಪುಣ್ಯ ಸ್ಮರಣೋತ್ಸವದಅಂಗವಾಗಿ ಬೆ.8ಕ್ಕೆ ಸ್ವಾಮೀಜಿಗಳ ಗದ್ದುಗೆ ಮಹಾ ಪೂಜೆ, ಬಿಲ್ವಾರ್ಚನೆ, ಮಧ್ಯಾಹ್ನ 12ಗಂಟೆಗೆ ಮಹಾಗಣಾರಾಧನೆ ಸಂಜೆ 4ಕ್ಕೆ ಭಾವಚಿತ್ರದ ಮೆರವಣಿಗೆ ಇರಲಿದ್ದು, ವಿವಿಧ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಜ.7ರಂದು ‘ಸಾಂಸ್ಕೃತಿಕ ಸುಗ್ಗಿ’ ಕಾರ್ಯಕ್ರಮ ನಡೆಯಲಿದೆ ಎಂದರು.</p>.<p>ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಜಿಲ್ಲಾ ಯೋಗ ಸಂಸ್ಥೆ ಸಹಯೋಗದಲ್ಲಿ 2019ರ ಡಿ.29ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಎಲ್ಲ ವಯೋಮಾನದವರಿಗಾಗಿ ‘ಯೋಗಾಸನ ಸ್ಪರ್ಧೆ’ ಹಮ್ಮಿಕೊಳ್ಳಲಾಗಿದೆ ಎಂದರು.</p>.<p><strong>ಜಾನುವಾರುಗಳಿಗೆ ಪ್ರಶಸ್ತಿ:</strong></p>.<p>ದನಗಳ ಜಾತ್ರೆ ಜತೆಗೆ ಜಾನುವಾರುಗಳ ಉಚಿತ ಆರೋಗ್ಯ ತಪಾಸಣೆ ಮತ್ತು ಪ್ರದರ್ಶನ ನಡೆಯಲಿದೆ. ಇದರಲ್ಲಿ 8 ತಳಿ ಜಾನುವಾರು ಪಾಲ್ಗೊಳ್ಳಲಿದ್ದು, ಅವುಗಳಲ್ಲಿ 24 ಜಾನುವಾರುಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ ಎಂದು ಉತ್ಸವ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ ಹೇಳಿದರು.</p>.<p>ಉತ್ಸವ ಸಮಿತಿಯ ಸದಸ್ಯ ತಮ್ಮಣ್ಣ ಮುದ್ದಿ, ಮುಖಂಡರಾದಪಿ.ಡಿ. ಶಿರೂರ, ಎಸ್.ಎಸ್. ಮುಷ್ಠಿ, ನಾರಾಯಣ ಲೋಖಂಡೆ, ಶಿವಬಸಪ್ಪ ಜಾಬೀನ, ಪ್ರಕಾಶ ಶೆಟ್ಟಿ, ಆರ್.ಎಸ್. ಲಂಬಿ, ಶಿವಕುಮಾರ, ಶಿವರಾಜ ವಳಸಂಗದ, ಬಿ. ಬಸವರಾಜ, ಆರ್.ಎಸ್. ಮಾಗನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>