<p><strong>ಹಾವೇರಿ</strong>: ತುಂಗಭದ್ರಾ ನದಿಯಿಂದ ಅಕ್ರಮವಾಗಿ ತೆಗೆದು ಸಂಗ್ರಹಿಸಿಟ್ಟಿದ್ದ 43 ಮೆಟ್ರಿಕ್ ಟನ್ ಮರಳನ್ನು ರಾಣೆಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.</p>.<p>ಸೋಮ್ಲಾಪೂರ ಹಾಗೂ ಐರಣಿ ಗ್ರಾಮಗಳ ಸಮೀಪದಲ್ಲಿ ಮರಳು ಸಂಗ್ರಹಿಸಿಡಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೊಲೀಸರು ದಾಳಿ ಮಾಡಿದ್ದರು. ಮರಳು ಸಂಗ್ರಹಿಸಿಟ್ಟಿದ್ದ ಆರೋಪದಡಿ ಸೋಮ್ಲಾಪೂರದ ಚೇತನ ಬಸವರಾಜಪ್ಪ ಕಾಯಕದ,ಐರಣಿ ಗ್ರಾಮದ ಸುಲ್ತಾನ್ಖಾನ್ ಅಕ್ಬರ್ಖಾನ್ ಕಂದಾಂ ವಿರುದ್ಧ ಎಫ್ಐಆರ್ ದಾಖಲಾಗಿದೆ.</p>.<p>‘ಸೋಮ್ಲಾಪೂರ ಬಳಿಯೇ ತುಂಗಭದ್ರಾ ನದಿ ಹರಿಯುತ್ತಿದೆ. ಇದೇ ನದಿ ದಡದಲ್ಲಿ ಮರಳನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿತ್ತು. ಮೇ 30ರಂದು ಸಂಜೆ ಸ್ಥಳಕ್ಕೆ ಹೋಗಿ ತಪಾಸಣೆ ನಡೆಸಿದಾಗ, ₹ 18,400 ಮೌಲ್ಯದ 23 ಮೆಟ್ರಿಕ್ ಟನ್ ಮರಳು ಪತ್ತೆಯಾಯಿತು. ಚೇತನ್ ಕಾಯಕದ ಎಂಬಾತನೇ ಈ ಮರಳು ಸಂಗ್ರಹಿಸಿದ್ದ ಮಾಹಿತಿ ಆಧರಿಸಿ, ಆತನ ವಿರುದ್ಧವೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಐರಣಿ ಬಳಿಯ ತುಂಗಭದ್ರಾ ನದಿ ದಡದಲ್ಲಿಯೇ ಅಕ್ರಮ ಮರಳು ಇರುವ ಮಾಹಿತಿ ಸಿಕ್ಕಿತ್ತು. ಮೇ 30ರಂದು ಸಂಜೆ ಸ್ಥಳಕ್ಕೆ ಹೋಗಿ ಪರಿಶೀಲಿಸಲಾಯಿತು. ₹16 ಸಾವಿರ ಮೌಲ್ಯದ 20 ಮೆಟ್ರಿಕ್ ಅಕ್ರಮ ಮರಳು ಜಪ್ತಿ ಮಾಡಲಾಯಿತು. ಇದು ಸುಲ್ತಾನ್ಖಾನ್ಗೆ ಸೇರಿದ್ದು ಎಂಬುದು ಪ್ರಾಥಮಿಕವಾಗಿ ಗೊತ್ತಾಗಿದೆ’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-23-1488180394</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ತುಂಗಭದ್ರಾ ನದಿಯಿಂದ ಅಕ್ರಮವಾಗಿ ತೆಗೆದು ಸಂಗ್ರಹಿಸಿಟ್ಟಿದ್ದ 43 ಮೆಟ್ರಿಕ್ ಟನ್ ಮರಳನ್ನು ರಾಣೆಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ.</p>.<p>ಸೋಮ್ಲಾಪೂರ ಹಾಗೂ ಐರಣಿ ಗ್ರಾಮಗಳ ಸಮೀಪದಲ್ಲಿ ಮರಳು ಸಂಗ್ರಹಿಸಿಡಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಪೊಲೀಸರು ದಾಳಿ ಮಾಡಿದ್ದರು. ಮರಳು ಸಂಗ್ರಹಿಸಿಟ್ಟಿದ್ದ ಆರೋಪದಡಿ ಸೋಮ್ಲಾಪೂರದ ಚೇತನ ಬಸವರಾಜಪ್ಪ ಕಾಯಕದ,ಐರಣಿ ಗ್ರಾಮದ ಸುಲ್ತಾನ್ಖಾನ್ ಅಕ್ಬರ್ಖಾನ್ ಕಂದಾಂ ವಿರುದ್ಧ ಎಫ್ಐಆರ್ ದಾಖಲಾಗಿದೆ.</p>.<p>‘ಸೋಮ್ಲಾಪೂರ ಬಳಿಯೇ ತುಂಗಭದ್ರಾ ನದಿ ಹರಿಯುತ್ತಿದೆ. ಇದೇ ನದಿ ದಡದಲ್ಲಿ ಮರಳನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿತ್ತು. ಮೇ 30ರಂದು ಸಂಜೆ ಸ್ಥಳಕ್ಕೆ ಹೋಗಿ ತಪಾಸಣೆ ನಡೆಸಿದಾಗ, ₹ 18,400 ಮೌಲ್ಯದ 23 ಮೆಟ್ರಿಕ್ ಟನ್ ಮರಳು ಪತ್ತೆಯಾಯಿತು. ಚೇತನ್ ಕಾಯಕದ ಎಂಬಾತನೇ ಈ ಮರಳು ಸಂಗ್ರಹಿಸಿದ್ದ ಮಾಹಿತಿ ಆಧರಿಸಿ, ಆತನ ವಿರುದ್ಧವೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಐರಣಿ ಬಳಿಯ ತುಂಗಭದ್ರಾ ನದಿ ದಡದಲ್ಲಿಯೇ ಅಕ್ರಮ ಮರಳು ಇರುವ ಮಾಹಿತಿ ಸಿಕ್ಕಿತ್ತು. ಮೇ 30ರಂದು ಸಂಜೆ ಸ್ಥಳಕ್ಕೆ ಹೋಗಿ ಪರಿಶೀಲಿಸಲಾಯಿತು. ₹16 ಸಾವಿರ ಮೌಲ್ಯದ 20 ಮೆಟ್ರಿಕ್ ಅಕ್ರಮ ಮರಳು ಜಪ್ತಿ ಮಾಡಲಾಯಿತು. ಇದು ಸುಲ್ತಾನ್ಖಾನ್ಗೆ ಸೇರಿದ್ದು ಎಂಬುದು ಪ್ರಾಥಮಿಕವಾಗಿ ಗೊತ್ತಾಗಿದೆ’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-23-1488180394</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>