<p><strong>ಬ್ಯಾಡಗಿ:</strong> ಇಂಗ್ಲಿಷ್ ಹಾಗೂ ಇನ್ನಿತರ ಭಾಷೆಗಳ ಪ್ರಭಾವಕ್ಕೆ ಒಳಗಾಗಿ ಕನ್ನಡ ಮರೆಯಾಗುತ್ತಿರುವುದು ನೋವಿನ ಸಂಗತಿಯಾಗಿದೆ. ಕನ್ನಡದ ಉಳಿವಿಗಾಗಿ ನಾವೆಲ್ಲ ಒಂದಾಗಬೇಕಾಗಿದೆ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಂ.ಜಗಾಪೂರ ಹೇಳಿದರು.</p>.<p>ಪಟ್ಟಣದಲ್ಲಿ ಕಸಾಪ 112ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೂರದೃಷ್ಟಿ, ಸಮಾನತೆ ಮತ್ತು ಅಭಿವೃದ್ಧಿ ಒಡೆಯರ ಅವರ ಸಾಧನೆಯಾಗಿದೆ ಎಂದರು.</p>.<p>ಕನ್ನಡ ನಾಡು, ನುಡಿ, ಸಾಹಿತ್ಯ ಹಅಗೂ ಸಂಸ್ಕೃತಿಯ ರಕ್ಷಣೆಗಾಗಿ ಜನ್ಮ ತಾಳಿದ ಪ್ರಾತಿನಿಧಿಕ ಸಂಸ್ಥೆ ‘ಕನ್ನಡ ಸಾಹಿತ್ಯ ಪರಿಷತ್‘ ಏಳುಕೋಟಿ ಕನ್ನಡಿಗರ ಭಾವನಾತ್ಮಕ ಕೇಂದ್ರವಾಗಿದೆ. ಒಂದು ಶತಮಾನಕ್ಕೂ ಅಧಿಕ ಇತಿಹಾಸ ಹೊಂದಿರುವ ಸಂಸ್ಥೆ ಮಹಾವೃಕ್ಷವಾಗಿ ಇಂದು ಬೆಳೆದಿದೆ ಎಂದು ಹೇಳಿದರು.</p>.<p>ಕಸಾಪ ನಿಕಟಪೂರ್ವ ಅಧ್ಯಕ್ಷ ಮಾಲತೇಶ ಅರಳಿಮಟ್ಟಿ ಮಾತನಾ ಡಿದರು. ಶಿಕ್ಷಕ ಮಾಲತೇಶ ಚಳಗೇರಿ ಪರಿಷತ್ ನಡೆದು ಬಂದ ದಾರಿಯ ಕುರಿತು ಉಪನ್ಯಾಸ ನೀಡಿದರು.</p>.<p>ಗೌರವ ಕಾರ್ಯದರ್ಶಿ ಎಸ್.ಬಿ.ಇಮ್ಮಡಿ, ಸಂಘಟನಾ ಕಾರ್ಯದರ್ಶಿ ರಾಜಶೇಖರ ಹೊಸಳ್ಳಿ, ಸಂಧ್ಯಾರಾಣಿ ದೇಶಪಾಂಡೆ, ಆನಂದ ಮುದುಕಮ್ಮ ನವರ, ಜೀವರಾಜ ಛತ್ರದ, ಎಂ.ಎ. ಪಠಾಣ, ಕೃಷ್ಣ ಬಡಿಗೇರ, ವಿ.ಎನ್.ಮಾಳಪ್ಪನವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-22-1748278482</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ:</strong> ಇಂಗ್ಲಿಷ್ ಹಾಗೂ ಇನ್ನಿತರ ಭಾಷೆಗಳ ಪ್ರಭಾವಕ್ಕೆ ಒಳಗಾಗಿ ಕನ್ನಡ ಮರೆಯಾಗುತ್ತಿರುವುದು ನೋವಿನ ಸಂಗತಿಯಾಗಿದೆ. ಕನ್ನಡದ ಉಳಿವಿಗಾಗಿ ನಾವೆಲ್ಲ ಒಂದಾಗಬೇಕಾಗಿದೆ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಂ.ಜಗಾಪೂರ ಹೇಳಿದರು.</p>.<p>ಪಟ್ಟಣದಲ್ಲಿ ಕಸಾಪ 112ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೂರದೃಷ್ಟಿ, ಸಮಾನತೆ ಮತ್ತು ಅಭಿವೃದ್ಧಿ ಒಡೆಯರ ಅವರ ಸಾಧನೆಯಾಗಿದೆ ಎಂದರು.</p>.<p>ಕನ್ನಡ ನಾಡು, ನುಡಿ, ಸಾಹಿತ್ಯ ಹಅಗೂ ಸಂಸ್ಕೃತಿಯ ರಕ್ಷಣೆಗಾಗಿ ಜನ್ಮ ತಾಳಿದ ಪ್ರಾತಿನಿಧಿಕ ಸಂಸ್ಥೆ ‘ಕನ್ನಡ ಸಾಹಿತ್ಯ ಪರಿಷತ್‘ ಏಳುಕೋಟಿ ಕನ್ನಡಿಗರ ಭಾವನಾತ್ಮಕ ಕೇಂದ್ರವಾಗಿದೆ. ಒಂದು ಶತಮಾನಕ್ಕೂ ಅಧಿಕ ಇತಿಹಾಸ ಹೊಂದಿರುವ ಸಂಸ್ಥೆ ಮಹಾವೃಕ್ಷವಾಗಿ ಇಂದು ಬೆಳೆದಿದೆ ಎಂದು ಹೇಳಿದರು.</p>.<p>ಕಸಾಪ ನಿಕಟಪೂರ್ವ ಅಧ್ಯಕ್ಷ ಮಾಲತೇಶ ಅರಳಿಮಟ್ಟಿ ಮಾತನಾ ಡಿದರು. ಶಿಕ್ಷಕ ಮಾಲತೇಶ ಚಳಗೇರಿ ಪರಿಷತ್ ನಡೆದು ಬಂದ ದಾರಿಯ ಕುರಿತು ಉಪನ್ಯಾಸ ನೀಡಿದರು.</p>.<p>ಗೌರವ ಕಾರ್ಯದರ್ಶಿ ಎಸ್.ಬಿ.ಇಮ್ಮಡಿ, ಸಂಘಟನಾ ಕಾರ್ಯದರ್ಶಿ ರಾಜಶೇಖರ ಹೊಸಳ್ಳಿ, ಸಂಧ್ಯಾರಾಣಿ ದೇಶಪಾಂಡೆ, ಆನಂದ ಮುದುಕಮ್ಮ ನವರ, ಜೀವರಾಜ ಛತ್ರದ, ಎಂ.ಎ. ಪಠಾಣ, ಕೃಷ್ಣ ಬಡಿಗೇರ, ವಿ.ಎನ್.ಮಾಳಪ್ಪನವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-22-1748278482</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>