<p><strong>ಸವಣೂರು:</strong> ಪಟ್ಟಣದಲ್ಲಿ ಜ. 24 ಹಾಗೂ 25ರಂದು ಹಮ್ಮಿಕೊಂಡಿರುವ ಹಾವೇರಿ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರವದ ಸಕಲ ಸಿದ್ಧತೆ ನಡೆಸಲಾಗಿದೆ’ ಎಂದು ಶಾಸಕ ಯಾಸೀರಖಾನ್ ಪಠಾಣ ತಿಳಿಸಿದರು.</p>.<p>ಶಿಗ್ಗಾಂವಿ ಪಟ್ಟಣದಲ್ಲಿ ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ಕನ್ನಡ ಮನಸ್ಸುಗಳು ಒಂದಾಗಿ ತಾಯಿ ಭುವನೇಶ್ವರಿ ರಥ ಎಳೆಯಲು ಸಿದ್ದರಾಗಬೇಕು’ ಎಂದರು.</p>.<p>ಕಸಾಪ ಜಿಲ್ಲಾ ಕಾರ್ಯದರ್ಶಿ ಪ್ರಭು ಅರಗೋಳ ಅವರು, ಸಮ್ಮೇಳನದಲ್ಲಿ ಹಮ್ಮಿಕೊಂಡಿರುವ ವಿವಿಧ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸನ್ಮಾನ ಕುರಿತು ವಿವರಿಸಿದರು.</p>.<p>ಕಸಾಪ ತಾಲ್ಲೂಕು ಘಟಕ ಅಧ್ಯಕ್ಷ ಸಿ.ಎನ್. ಪಾಟೀಲ ಮಾತನಾಡಿದರು. ಮುಖಂಡರಾದ ಎಂ.ಜೆ. ಮುಲ್ಲಾ, ಗುಡ್ಡಪ್ಪ ಜಲದಿ, ಮಹೇಶ ಅಪ್ಪಣ್ಣನವರ, ಮೌಲಾಸಾಬ್ ಹೊಂಬರಡಿ, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವಣೂರು:</strong> ಪಟ್ಟಣದಲ್ಲಿ ಜ. 24 ಹಾಗೂ 25ರಂದು ಹಮ್ಮಿಕೊಂಡಿರುವ ಹಾವೇರಿ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರವದ ಸಕಲ ಸಿದ್ಧತೆ ನಡೆಸಲಾಗಿದೆ’ ಎಂದು ಶಾಸಕ ಯಾಸೀರಖಾನ್ ಪಠಾಣ ತಿಳಿಸಿದರು.</p>.<p>ಶಿಗ್ಗಾಂವಿ ಪಟ್ಟಣದಲ್ಲಿ ಶನಿವಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಅವರು, ‘ಕನ್ನಡ ಮನಸ್ಸುಗಳು ಒಂದಾಗಿ ತಾಯಿ ಭುವನೇಶ್ವರಿ ರಥ ಎಳೆಯಲು ಸಿದ್ದರಾಗಬೇಕು’ ಎಂದರು.</p>.<p>ಕಸಾಪ ಜಿಲ್ಲಾ ಕಾರ್ಯದರ್ಶಿ ಪ್ರಭು ಅರಗೋಳ ಅವರು, ಸಮ್ಮೇಳನದಲ್ಲಿ ಹಮ್ಮಿಕೊಂಡಿರುವ ವಿವಿಧ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸನ್ಮಾನ ಕುರಿತು ವಿವರಿಸಿದರು.</p>.<p>ಕಸಾಪ ತಾಲ್ಲೂಕು ಘಟಕ ಅಧ್ಯಕ್ಷ ಸಿ.ಎನ್. ಪಾಟೀಲ ಮಾತನಾಡಿದರು. ಮುಖಂಡರಾದ ಎಂ.ಜೆ. ಮುಲ್ಲಾ, ಗುಡ್ಡಪ್ಪ ಜಲದಿ, ಮಹೇಶ ಅಪ್ಪಣ್ಣನವರ, ಮೌಲಾಸಾಬ್ ಹೊಂಬರಡಿ, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>