<p><strong>ಹಾವೇರಿ:</strong> ಜಿಲ್ಲೆಯಲ್ಲಿರುವ ಅರ್ಹ 301 ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ₹ 819.74 ಕೋಟಿ ಸಾಲ ನೀಡಲಾಗಿದ್ದು, ಇದರ ಚೆಕ್ಗಳನ್ನು ಸಂಸದ ಬಸವರಾಜ ಬೊಮ್ಮಾಯಿ ಅವರು ಫಲಾನುಭವಿಗಳಿಗೆ ಶುಕ್ರವಾರ ವಿತರಿಸಿದರು.</p>.<p>ನಗರದ ಹೊರವಲಯದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಅಗ್ರಣೀಯ ಬ್ಯಾಂಕ್ (ಲೀಡ್ ಬ್ಯಾಂಕ್) ಸಹಯೋಗದಲ್ಲಿ ಸಾಲ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಫಲಾನುಭವಿಗಳು, ಖುಷಿಯಿಂದಲೇ ಚೆಕ್ಗಳನ್ನು ಸ್ವೀಕರಿಸಿದರು.</p>.<p>ಪಿಎಂ ವಿಶ್ವಕರ್ಮ ಯೋಜನೆಯಡಿ 12 ಫಲಾನುಭವಿಗಳಿಗೆ ₹ 11.50 ಲಕ್ಷ, ಪಿಎಂಇಜಿಪಿ ಯೋಜನೆಯಡಿ 12 ಫಲಾನುಭವಿಗಳಿಗೆ ₹ 83.45 ಲಕ್ಷ, ಮುದ್ರಾ ಯೋಜನೆಯಡಿ 44 ಫಲಾನುಭವಿಗಳಿಗೆ ₹ 251.77 ಲಕ್ಷ, ಪಿಎಂ ಸ್ವನಿಧಿ ಯೋಜನೆಯಡಿ 110 ಫಲಾನುಭವಿಗಳಿಗೆ ₹19.74 ಲಕ್ಷ, ಪಿಎಂಎಫ್ಎಂಇ ಯೋಜನೆಯಡಿ 26 ಫಲಾನುಭವಿಗಳಿಗೆ ₹ 240.33 ಲಕ್ಷ ಸಾಲದ ಚೆಕ್ ವಿತರಿಸಲಾಯಿತು.</p>.<p>ಎನ್.ಆರ್.ಎಲ್.ಎಂ.ಎಸ್.ಎಚ್.ಜಿ ಯೋಜನೆಯಡಿ 20 ಫಲಾನುಭವಿಗಳಿಗೆ ₹ 112 ಲಕ್ಷ ಹಾಗೂ ಎನ್ಯುಎಲ್ಎಂ ಯೋಜನೆಯಡಿ 5 ಫಲಾನುಭವಿಗಳಿಗೆ ₹ 44 ಲಕ್ಷ ಸಾಲದ ಚೆಕ್ ಹಾಗೂ ಸಾಲ ಮಂಜೂರಾತಿ ಪ್ರಮಾಣಪತ್ರ ನೀಡಲಾಯಿತು.</p>.<p>60 ಕೋಟಿ ಜನಧನ್ ಖಾತೆ: ಚೆಕ್ ವಿತರಿಸಿ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ, ‘ದುಡಿಯುವ ವರ್ಗದವರ ಬಳಿಯೇ ಹಣ ಬರಬೇಕೆಂಬ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ದೇಶದಲ್ಲಿ 60 ಕೋಟಿ ಜನಧನ್ ಖಾತೆಗಳಿದ್ದು, ಈ ಪೈಕಿ ಮಹಿಳೆಯರ ಖಾತೆಗಳು ಹೆಚ್ಚಾಗಿವೆ. ಜನಧನ್ ಖಾತೆಯಿಂದ ಮಹಿಳೆಯರು ಉಳಿತಾಯ ಮಾಡುತ್ತಿದ್ದಾರೆ. ಡಿಜಿಟಲ್ ಹಣಕಾಸು ವ್ಯವಹಾರದಿಂದ ಬೆಳೆ ವಿಮೆ, ಪಿಂಚಣಿ, ಬೆಳೆ ಪರಿಹಾರದ ಹಣ ನೇರವಾಗಿ ಫಲಾನುಭವಿ ಖಾತೆಗೆ ಜಮೆಯಾಗುತ್ತದೆ. ಇದರಿಂದ ದುಡಿಯುವ ವರ್ಗಕ್ಕೆ ಅನುಕೂಲವಾಗಿದೆ’ ಎಂದರು.</p>.<p>‘ಸ್ವಾತಂತ್ರ್ಯ ದೊರೆತ ಸಮಯದಲ್ಲಿ ದೇಶದ ಜನಸಂಖ್ಯೆ 33 ಕೋಟಿ ಇತ್ತು. ಆಹಾರದ ಕೊರತೆಯೂ ಇತ್ತು. ಅಮೆರಿಕಾ ಸೇರಿದಂತೆ ವಿವಿಧ ದೇಶಗಳಿಂದ ಆಹಾರ ಆಮದು ಮಾಡಿಕೊಳ್ಳಲಾಗುತ್ತಿತ್ತು. ಇಂದು ದೇಶದ ಜನಸಂಖ್ಯೆ 133 ಕೋಟಿಯಿದೆ. ಅಷ್ಟಾದರೂ ಆಹಾರದ ಕೊರತೆ ಇಲ್ಲ. ಇದಕ್ಕೆ ರೈತರು ಹಾಗೂ ದುಡಿಯುವ ವರ್ಗವೇ ಕಾರಣ’ ಎಂದರು.</p>.<p><strong>ಜಿಲ್ಲೆಗೆ ಡಿಸಿಸಿ ಬ್ಯಾಂಕ್:</strong> ‘ನಬಾರ್ಡ್ ಯೋಜನೆಯ ಮೊತ್ತ ಡಿಸಿಸಿ ಬ್ಯಾಂಕ್ಗೆ ಬರುತ್ತದೆ. ಧಾರವಾಡ ಡಿಸಿಸಿ ಬ್ಯಾಂಕ್ ವ್ಯಾಪ್ತಿಯಲ್ಲಿರುವ ಹಾವೇರಿ ಜಿಲ್ಲೆಗೆ ಪ್ರತ್ಯೇಕ ಬ್ಯಾಂಕ್ ಮಾಡಲು ಕೇಂದ್ರ ಸಚಿವ ಅಮಿತ್ ಶಾ ಅವರು ಮುಂದಾಗಿದ್ದಾರೆ. ಅವರ ದೂರದೃಷ್ಟಿಕೋನದಿಂದ ಜಿಲ್ಲೆಗೊಂದು ಡಿಸಿಸಿ ಬ್ಯಾಂಕ್ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಆರ್.ಬಿ.ಐ.ಗೆ ಪ್ರಸ್ತಾವ ಸಲ್ಲಿಕೆಯಾಗಿದೆ’ ಎಂದು ಬೊಮ್ಮಾಯಿ ಹೇಳಿದರು.</p>.<p>‘ದುಡಿಯುವ ವರ್ಗದ ಆರ್ಥಿಕ ಸ್ಥಿತಿ ಸುಧಾರಿಸಿದರೆ ಮಾತ್ರ, ನಾಡಿನ ಹಾಗೂ ದೇಶದ ಆರ್ಥಿಕತೆ ಸುಧಾರಿಸುತ್ತದೆ. ಹೀಗಾಗಿಯೇ ಪಿ.ಎಂ. ಸ್ವನಿಧಿ, ವಿಶ್ವಕರ್ಮ ಸೇರಿದಂತೆ ವಿವಿಧ ಯೋಜನೆಗಳಡಿ ಸಾಲ ನೀಡಲಾಗುತ್ತಿದೆ. ಸಾಲ ಪಡೆದವರು ಸ್ವಾಭಿಮಾನದ ಬದುಕು ನಡೆಸಬೇಕು. ಆರ್ಥಿಕವಾಗಿ ಸದೃಢರಾಗಬೇಕು. ಮಕ್ಕಳ ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು ನೀಡಬೇಕು’ ಎಂದರು.</p>.<p>ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ‘ಸಾಲ ತೆಗೆದುಕೊಳ್ಳುವುದು ಹಾಗೂ ಕೊಡುವುದು ಬಹಳ ಹಳೇ ಪದ್ಧತಿಯಾಗಿದೆ. ಪೌರಾಣಿಕವಾಗಿ ನೋಡುವುದಾದರೆ, ತಿರುಪತಿ ತಿಮ್ಮಪ್ಪನಿಗೆ ಕುಬೇರ ಸಾಲ ನೀಡಿದ್ದಾಗಿ ಪ್ರತೀತಿ ಇದೆ. ದೇಶದ ಆರ್ಥಿಕ ಸದೃಢತೆಗೆ ಬ್ಯಾಂಕ್ಗಳ ಪಾತ್ರ ಪ್ರಮುಖವಾಗಿದೆ. ಜನರಿಗೆ ಸಾಲ ಸಿಕ್ಕರೆ, ಅವರ ಆರ್ಥಿಕ ಚಟುವಟಿಕೆ ಸುಧಾರಣೆಗೆ ಸಹಾಯವಾಗುತ್ತದೆ. ಗ್ರಾಹಕರು ಬ್ಯಾಂಕಿಗೆ ಸಾಲ ಕೇಳಲು ಬಂದಾಗ, ಅವರ ಸಮಸ್ಯೆ ಆಲಿಸಬೇಕು. ಧನಾತ್ಮಕವಾಗಿ ಆಲೋಚನೆ ಮಾಡಬೇಕು. ಕೃಷಿ ಸೇರಿದಂತೆ ಆದ್ಯತಾ ವಲಯಕ್ಕೆ ಸಾಲ ನೀಡುವ ಪ್ರಮಾಣ ಹೆಚ್ಚಾಗಬೇಕು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ರುಚಿ ಬಿಂದಲ್, ಬ್ಯಾಂಕ್ ಆಫ್ ಬರೋಡಾ ಶಿವಮೊಗ್ಗದ ವಲಯದ ಪ್ರಾದೇಶಿಕ ಉಪ ವ್ಯವಸ್ಥಾಪಕ ದೀಪಕ ಶಹಕರ್, ಮಂಗಳೂರು ವಲಯದ ಉಪ ವ್ಯವಸ್ಥಾಪಕ ರಾಜೇಶ ಶರ್ಮಾ, ಶಿವಮೊಗ್ಗ ವಲಯದ ಪ್ರಾದೇಶಿಕ ವ್ಯವಸ್ಥಾಪಕ ಪಂಕಜಕುಮಾರ ಸಮನ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾವೇರಿಯ ಪ್ರಾದೇಶಿಕ ವ್ಯವಸ್ಥಾಪಕ ನವೀನ ಬಿ., ನಬಾರ್ಡನ ಡಿ.ಡಿ.ಎಂ ರಂಗನಾಥ ಎಸ್., ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಪ್ರಭುದೇವ ಹಾಗೂ ಇತರರು ಇದ್ದರು.</p>.<div><blockquote>ರೈತರು ಮತ್ತು ದುಡಿಯುವ ವರ್ಗ ಆಧುನಿಕ ಯುಗದ ಕುಬೇರರು. ಕೇವಲ ಅನುದಾನ ಮಂಜೂರು ಮಾಡುವುದರಿಂದ ದೇಶದ ಆರ್ಥಿಕತೆ ಹೆಚ್ಚಾಗುವುದಿಲ್ಲ. ದುಡಿಯುವ ವರ್ಗದವರ ಕೆಲಸ ಹಾಗೂ ಉತ್ಪಾದನೆಯಿಂದ ಮಾತ್ರ ಸರ್ಕಾರಕ್ಕೆ ಆದಾಯ ಬರುತ್ತದೆ </blockquote><span class="attribution">ಬಸವರಾಜ ಬೊಮ್ಮಾಯಿ ಸಂಸದ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯಲ್ಲಿರುವ ಅರ್ಹ 301 ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ₹ 819.74 ಕೋಟಿ ಸಾಲ ನೀಡಲಾಗಿದ್ದು, ಇದರ ಚೆಕ್ಗಳನ್ನು ಸಂಸದ ಬಸವರಾಜ ಬೊಮ್ಮಾಯಿ ಅವರು ಫಲಾನುಭವಿಗಳಿಗೆ ಶುಕ್ರವಾರ ವಿತರಿಸಿದರು.</p>.<p>ನಗರದ ಹೊರವಲಯದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಅಗ್ರಣೀಯ ಬ್ಯಾಂಕ್ (ಲೀಡ್ ಬ್ಯಾಂಕ್) ಸಹಯೋಗದಲ್ಲಿ ಸಾಲ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಫಲಾನುಭವಿಗಳು, ಖುಷಿಯಿಂದಲೇ ಚೆಕ್ಗಳನ್ನು ಸ್ವೀಕರಿಸಿದರು.</p>.<p>ಪಿಎಂ ವಿಶ್ವಕರ್ಮ ಯೋಜನೆಯಡಿ 12 ಫಲಾನುಭವಿಗಳಿಗೆ ₹ 11.50 ಲಕ್ಷ, ಪಿಎಂಇಜಿಪಿ ಯೋಜನೆಯಡಿ 12 ಫಲಾನುಭವಿಗಳಿಗೆ ₹ 83.45 ಲಕ್ಷ, ಮುದ್ರಾ ಯೋಜನೆಯಡಿ 44 ಫಲಾನುಭವಿಗಳಿಗೆ ₹ 251.77 ಲಕ್ಷ, ಪಿಎಂ ಸ್ವನಿಧಿ ಯೋಜನೆಯಡಿ 110 ಫಲಾನುಭವಿಗಳಿಗೆ ₹19.74 ಲಕ್ಷ, ಪಿಎಂಎಫ್ಎಂಇ ಯೋಜನೆಯಡಿ 26 ಫಲಾನುಭವಿಗಳಿಗೆ ₹ 240.33 ಲಕ್ಷ ಸಾಲದ ಚೆಕ್ ವಿತರಿಸಲಾಯಿತು.</p>.<p>ಎನ್.ಆರ್.ಎಲ್.ಎಂ.ಎಸ್.ಎಚ್.ಜಿ ಯೋಜನೆಯಡಿ 20 ಫಲಾನುಭವಿಗಳಿಗೆ ₹ 112 ಲಕ್ಷ ಹಾಗೂ ಎನ್ಯುಎಲ್ಎಂ ಯೋಜನೆಯಡಿ 5 ಫಲಾನುಭವಿಗಳಿಗೆ ₹ 44 ಲಕ್ಷ ಸಾಲದ ಚೆಕ್ ಹಾಗೂ ಸಾಲ ಮಂಜೂರಾತಿ ಪ್ರಮಾಣಪತ್ರ ನೀಡಲಾಯಿತು.</p>.<p>60 ಕೋಟಿ ಜನಧನ್ ಖಾತೆ: ಚೆಕ್ ವಿತರಿಸಿ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ, ‘ದುಡಿಯುವ ವರ್ಗದವರ ಬಳಿಯೇ ಹಣ ಬರಬೇಕೆಂಬ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ದೇಶದಲ್ಲಿ 60 ಕೋಟಿ ಜನಧನ್ ಖಾತೆಗಳಿದ್ದು, ಈ ಪೈಕಿ ಮಹಿಳೆಯರ ಖಾತೆಗಳು ಹೆಚ್ಚಾಗಿವೆ. ಜನಧನ್ ಖಾತೆಯಿಂದ ಮಹಿಳೆಯರು ಉಳಿತಾಯ ಮಾಡುತ್ತಿದ್ದಾರೆ. ಡಿಜಿಟಲ್ ಹಣಕಾಸು ವ್ಯವಹಾರದಿಂದ ಬೆಳೆ ವಿಮೆ, ಪಿಂಚಣಿ, ಬೆಳೆ ಪರಿಹಾರದ ಹಣ ನೇರವಾಗಿ ಫಲಾನುಭವಿ ಖಾತೆಗೆ ಜಮೆಯಾಗುತ್ತದೆ. ಇದರಿಂದ ದುಡಿಯುವ ವರ್ಗಕ್ಕೆ ಅನುಕೂಲವಾಗಿದೆ’ ಎಂದರು.</p>.<p>‘ಸ್ವಾತಂತ್ರ್ಯ ದೊರೆತ ಸಮಯದಲ್ಲಿ ದೇಶದ ಜನಸಂಖ್ಯೆ 33 ಕೋಟಿ ಇತ್ತು. ಆಹಾರದ ಕೊರತೆಯೂ ಇತ್ತು. ಅಮೆರಿಕಾ ಸೇರಿದಂತೆ ವಿವಿಧ ದೇಶಗಳಿಂದ ಆಹಾರ ಆಮದು ಮಾಡಿಕೊಳ್ಳಲಾಗುತ್ತಿತ್ತು. ಇಂದು ದೇಶದ ಜನಸಂಖ್ಯೆ 133 ಕೋಟಿಯಿದೆ. ಅಷ್ಟಾದರೂ ಆಹಾರದ ಕೊರತೆ ಇಲ್ಲ. ಇದಕ್ಕೆ ರೈತರು ಹಾಗೂ ದುಡಿಯುವ ವರ್ಗವೇ ಕಾರಣ’ ಎಂದರು.</p>.<p><strong>ಜಿಲ್ಲೆಗೆ ಡಿಸಿಸಿ ಬ್ಯಾಂಕ್:</strong> ‘ನಬಾರ್ಡ್ ಯೋಜನೆಯ ಮೊತ್ತ ಡಿಸಿಸಿ ಬ್ಯಾಂಕ್ಗೆ ಬರುತ್ತದೆ. ಧಾರವಾಡ ಡಿಸಿಸಿ ಬ್ಯಾಂಕ್ ವ್ಯಾಪ್ತಿಯಲ್ಲಿರುವ ಹಾವೇರಿ ಜಿಲ್ಲೆಗೆ ಪ್ರತ್ಯೇಕ ಬ್ಯಾಂಕ್ ಮಾಡಲು ಕೇಂದ್ರ ಸಚಿವ ಅಮಿತ್ ಶಾ ಅವರು ಮುಂದಾಗಿದ್ದಾರೆ. ಅವರ ದೂರದೃಷ್ಟಿಕೋನದಿಂದ ಜಿಲ್ಲೆಗೊಂದು ಡಿಸಿಸಿ ಬ್ಯಾಂಕ್ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಆರ್.ಬಿ.ಐ.ಗೆ ಪ್ರಸ್ತಾವ ಸಲ್ಲಿಕೆಯಾಗಿದೆ’ ಎಂದು ಬೊಮ್ಮಾಯಿ ಹೇಳಿದರು.</p>.<p>‘ದುಡಿಯುವ ವರ್ಗದ ಆರ್ಥಿಕ ಸ್ಥಿತಿ ಸುಧಾರಿಸಿದರೆ ಮಾತ್ರ, ನಾಡಿನ ಹಾಗೂ ದೇಶದ ಆರ್ಥಿಕತೆ ಸುಧಾರಿಸುತ್ತದೆ. ಹೀಗಾಗಿಯೇ ಪಿ.ಎಂ. ಸ್ವನಿಧಿ, ವಿಶ್ವಕರ್ಮ ಸೇರಿದಂತೆ ವಿವಿಧ ಯೋಜನೆಗಳಡಿ ಸಾಲ ನೀಡಲಾಗುತ್ತಿದೆ. ಸಾಲ ಪಡೆದವರು ಸ್ವಾಭಿಮಾನದ ಬದುಕು ನಡೆಸಬೇಕು. ಆರ್ಥಿಕವಾಗಿ ಸದೃಢರಾಗಬೇಕು. ಮಕ್ಕಳ ಶಿಕ್ಷಣ ಮತ್ತು ಆರೋಗ್ಯಕ್ಕೆ ಒತ್ತು ನೀಡಬೇಕು’ ಎಂದರು.</p>.<p>ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ‘ಸಾಲ ತೆಗೆದುಕೊಳ್ಳುವುದು ಹಾಗೂ ಕೊಡುವುದು ಬಹಳ ಹಳೇ ಪದ್ಧತಿಯಾಗಿದೆ. ಪೌರಾಣಿಕವಾಗಿ ನೋಡುವುದಾದರೆ, ತಿರುಪತಿ ತಿಮ್ಮಪ್ಪನಿಗೆ ಕುಬೇರ ಸಾಲ ನೀಡಿದ್ದಾಗಿ ಪ್ರತೀತಿ ಇದೆ. ದೇಶದ ಆರ್ಥಿಕ ಸದೃಢತೆಗೆ ಬ್ಯಾಂಕ್ಗಳ ಪಾತ್ರ ಪ್ರಮುಖವಾಗಿದೆ. ಜನರಿಗೆ ಸಾಲ ಸಿಕ್ಕರೆ, ಅವರ ಆರ್ಥಿಕ ಚಟುವಟಿಕೆ ಸುಧಾರಣೆಗೆ ಸಹಾಯವಾಗುತ್ತದೆ. ಗ್ರಾಹಕರು ಬ್ಯಾಂಕಿಗೆ ಸಾಲ ಕೇಳಲು ಬಂದಾಗ, ಅವರ ಸಮಸ್ಯೆ ಆಲಿಸಬೇಕು. ಧನಾತ್ಮಕವಾಗಿ ಆಲೋಚನೆ ಮಾಡಬೇಕು. ಕೃಷಿ ಸೇರಿದಂತೆ ಆದ್ಯತಾ ವಲಯಕ್ಕೆ ಸಾಲ ನೀಡುವ ಪ್ರಮಾಣ ಹೆಚ್ಚಾಗಬೇಕು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ರುಚಿ ಬಿಂದಲ್, ಬ್ಯಾಂಕ್ ಆಫ್ ಬರೋಡಾ ಶಿವಮೊಗ್ಗದ ವಲಯದ ಪ್ರಾದೇಶಿಕ ಉಪ ವ್ಯವಸ್ಥಾಪಕ ದೀಪಕ ಶಹಕರ್, ಮಂಗಳೂರು ವಲಯದ ಉಪ ವ್ಯವಸ್ಥಾಪಕ ರಾಜೇಶ ಶರ್ಮಾ, ಶಿವಮೊಗ್ಗ ವಲಯದ ಪ್ರಾದೇಶಿಕ ವ್ಯವಸ್ಥಾಪಕ ಪಂಕಜಕುಮಾರ ಸಮನ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾವೇರಿಯ ಪ್ರಾದೇಶಿಕ ವ್ಯವಸ್ಥಾಪಕ ನವೀನ ಬಿ., ನಬಾರ್ಡನ ಡಿ.ಡಿ.ಎಂ ರಂಗನಾಥ ಎಸ್., ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಪ್ರಭುದೇವ ಹಾಗೂ ಇತರರು ಇದ್ದರು.</p>.<div><blockquote>ರೈತರು ಮತ್ತು ದುಡಿಯುವ ವರ್ಗ ಆಧುನಿಕ ಯುಗದ ಕುಬೇರರು. ಕೇವಲ ಅನುದಾನ ಮಂಜೂರು ಮಾಡುವುದರಿಂದ ದೇಶದ ಆರ್ಥಿಕತೆ ಹೆಚ್ಚಾಗುವುದಿಲ್ಲ. ದುಡಿಯುವ ವರ್ಗದವರ ಕೆಲಸ ಹಾಗೂ ಉತ್ಪಾದನೆಯಿಂದ ಮಾತ್ರ ಸರ್ಕಾರಕ್ಕೆ ಆದಾಯ ಬರುತ್ತದೆ </blockquote><span class="attribution">ಬಸವರಾಜ ಬೊಮ್ಮಾಯಿ ಸಂಸದ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>