ಹಾವೇರಿ ಜಿಲ್ಲೆಗೆ ಬರುವ ಪ್ರಯಾಣಿಕರ ಸಂಖ್ಯೆ ಅತ್ಯಂತ ಕಡಿಮೆ ಇದೆ. ಈ ಪ್ರಯಾಣಿಕರನ್ನು ಜಿಲ್ಲೆಯ ಮಾಕನೂರು ಚೆಕ್ಪೋಸ್ಟ್, ರಾಣೇಬೆನ್ನೂರು, ಹಾವೇರಿ ಹಾಗೂ ಶಿಗ್ಗಾವಿಗಳಲ್ಲಿ ಇಳಿಸಿಕೊಂಡು ಅಲ್ಲಿಂದ ‘ಕ್ವಾರೆಂಟೈನ್ ವಾಚ್ ಆ್ಯಪ್’ ನಲ್ಲಿ ನೋಂದಾಯಿಸಿಕೊಂಡು ಅವರವರ ಮನೆಗೆ ಕಳುಹಿಸಿಕೊಡಲು ಬಸ್ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಪ್ರತಿ ಪ್ರಯಾಣಿಕರು ಹೋಂ ಕ್ವಾರೆಂಟೈನ್ ಸೀಲ್ಹಾಕಿ 14 ದಿನ ಗೃಹ ಪ್ರತ್ಯೇಕತೆಯಲ್ಲಿ ಇರಿಸಿ ನಿಗಾ ವಹಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ ತಿಳಿಸಿದರು.