<p><strong>ಚಿತ್ರದುರ್ಗ: </strong>ಚುನಾವಣೆ ಪ್ರಕ್ರಿಯಲ್ಲಿ ಸೆಕ್ಟರ್ ಮತ್ತು ನೋಡಲ್ ಅಧಿಕಾರಿಗಳ ಪಾತ್ರ ಬಹಳ ಮುಖ್ಯವಾಗಿದ್ದು, ಈ ಅಧಿಕಾರಿಗಳು ಜವಾಬ್ದಾರಿಯಿಂದ ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಸೂಚಿಸಿದರು.</p>.<p>ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳಿಗಾಗಿ ಚುನಾವಣೆ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸೆಕ್ಟರ್ ಅಧಿಕಾರಿಗಳಿಗೆ ಈಗಾಗಲೇ ಒಂದು ಹಂತದ ತರಬೇತಿ ನೀಡಲಾಗಿದೆ. ತಾವು ನಿಯೋಜನೆಗೊಂಡಿರುವ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆ<br /> ಗಳಿಗೆ ಭೇಟಿ ನೀಡಿ ಚುನಾವಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಶೀಲಿಸಬೇಕು. ಚುನಾವಣೆಯಲ್ಲಿ ಯಾವುದೇ ರೀತಿ ಲೋಪವಾಗದಂತೆ ಶಿಸ್ತಿನಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.</p>.<p>ಪ್ರತಿ ಗ್ರಾಮ, ನಗರ, ಪಟ್ಟಣ, ಪ್ರದೇಶಗಳಲ್ಲಿ ಮತದಾನದ ಮಹತ್ವದ ಬಗ್ಗೆ ಜನಸಾಮಾನ್ಯರಿಗೆ ಅರ್ಥವಾಗುವಂತೆ ಜಾಗೃತಿ ಮೂಡಿಸಬೇಕು. ಮತದಾರರು ಆಮಿಷಕ್ಕೆ ಈಡಾಗದಂತೆ ಹಾಗೂ ಚುನಾವಣೆಯಲ್ಲಿ ನಿರ್ಭಯವಾಗಿ ಮತದಾನ ಮಾಡುವಂತೆ ಅರಿವು ಮೂಡಿಸುವ ಜವಾಬ್ದಾರಿ ಸೆಕ್ಟರ್ ಅಧಿಕಾರಿಗಳದ್ದು ಎಂದು ಹೇಳಿದರು.</p>.<p>ಆಯಾ, ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು ಹಾಗೂ ಇತರೆ ಸೌಕರ್ಯಗಳ ಬಗ್ಗೆ ಪರಿಶೀಲಿಸಬೇಕು. ಸಮಸ್ಯೆ ಕಂಡುಬಂದರೆ, ತಕ್ಷಣ ಚುನಾವಣಾಧಿಕಾರಿ ಮೂಲಕ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದು ಸೂಚಿಸಿದರು.</p>.<p>ಮುಂದಿನ ತರಬೇತಿ ಕಾರ್ಯಾಗಾರದಲ್ಲಿ ಅಧಿಕಾರಿಗಳಿಗೆ ಏನಾದರೂ ಸಮಸ್ಯೆಗಳಿದ್ದರೆ, ಗೊಂದಲಗಳಿದ್ದರೆ ಮೇಲಧಿಕಾರಿಗಳನ್ನು ಸಂಪರ್ಕಿಸಿ ಬಗೆಹರಿಸಿಕೊಳ್ಳಬೇಕು. ಒಮ್ಮೆ ಚುನಾವಣಾ ವೆಬ್ಸೈಟ್ ಅವಲೋಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>‘ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಎನ್.ರವಿಂದ್ರ, ‘ ಚುನಾವಣೆ ಘೋಷಣೆಯಾದ ದಿನದಿಂದ ಸೆಕ್ಟರ್ ಅಧಿಕಾರಿಗಳು ಮತಗಟ್ಟೆಗಳ ಬಗ್ಗೆ ಗಮನಹರಿಸಬೇಕು. ಮತದಾರರಿಗೆ ಮತಚಲಾಯಿಸಲು ಬೇಕಾದ ಪೂರಕ ವಾತಾವರಣವನ್ನು ನಿರ್ಮಿಸಬೇಕು. ವೃದ್ಧರು ಮತ್ತು ಅಂಗವಿಕಲರು ಮತಗಟ್ಟೆಗೆ ಬರುವಂತಹ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.</p>.<p>ಈ ಬಾರಿ ಹೊಸದಾಗಿ ವಿವಿಪ್ಯಾಟ್ ಯಂತ್ರ ಅಳವಡಿಸಲಾಗುತ್ತಿದೆ. ಈ ಯಂತ್ರದ ಮೂಲಕ ಮತದಾರರು ತಾವು ಯಾರಿಗೆ ಮತದಾನ ಮಾಡಿದ್ದೇವೆ ಎಂದು ನೋಡಬಹದು. ಸುಮಾರು 7 ಸೆಕೆಂಡ್ವರೆಗೆ ಯಾರಿಗೆ ಮತದಾನ ಮಾಡಲಾಗಿದೆ ಎಂಬುದನ್ನು ತಿಳಿಯಲು ಸಾಧ್ಯವಿದೆ. ಈ ಮೂಲಕ ಮತ ಚಲಾವಣೆಯಾದ ಬಗ್ಗೆ ಖಾತರಿ ಮಾಡಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.</p>.<p>ಚುನಾವಣೆ ನೋಡಲ್ ಎಂಸಿಸಿ ನೋಡಲ್ ಅಧಿಕಾರಿ ಮಂಜುನಾಥ ಮಾತನಾಡಿ, ‘ಈ ತಂಡದಲ್ಲಿ 200 ಕ್ಕೂ ಹೆಚ್ಚು ಮಂದಿ ದಿನದ 24 ಗಂಟೆ ಕಾಲ ಕಾರ್ಯನಿರ್ವಹಿಸಲಿದ್ದಾರೆ. ಯಾವುದೇ ಲೋಪದೋಷ ಕಂಡು ಬಂದಲ್ಲಿ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ತಿಳಿಸಬೇಕು’ ಎಂದು ಅಧಿಕಾರಿಗಳಿಗೆ ತಿಳಿಸಿದರು.</p>.<p>ಡಿವೈಎಸ್ಪಿ ನಾಗರಾಜ್ ಮಾತನಾಡಿ, ‘ಮತಗಟ್ಟೆಯಲ್ಲಿ ಶಾಂತಿಯುತ ಮತದಾನ ನಡೆಯಲು ಬೇಕಾದ ವ್ಯವಸ್ಥೆ ಮಾಡಲಾಗಿದೆ. ಭಯ-ಭೀತಿ ಬಿಟ್ಟು ಸ್ವತಂತ್ರವಾಗಿ ಮತ ಚಲಾಯಿಸುವುದಕ್ಕೆ ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದೆ. ಈಗಾಗಲೇ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗುತ್ತಿದ್ದು ಸಿಬ್ಬಂದಿಯು ದಿನದ 24 ಗಂಟೆಗಳ ಕಾಲ ಕಾರ್ಯಚರಣೆಯಲ್ಲಿರುವರು’ ಎಂದು ತಿಳಿಸಿದರು. ಕಾರ್ಯಾಗಾರದಲ್ಲಿ ಉಪವಿಭಾಗಾಧಿಕಾರಿ ವಿಜಯ ಕುಮಾರ್, ಚುನಾವಣಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಚುನಾವಣೆ ಪ್ರಕ್ರಿಯಲ್ಲಿ ಸೆಕ್ಟರ್ ಮತ್ತು ನೋಡಲ್ ಅಧಿಕಾರಿಗಳ ಪಾತ್ರ ಬಹಳ ಮುಖ್ಯವಾಗಿದ್ದು, ಈ ಅಧಿಕಾರಿಗಳು ಜವಾಬ್ದಾರಿಯಿಂದ ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಸೂಚಿಸಿದರು.</p>.<p>ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ನೋಡಲ್ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳಿಗಾಗಿ ಚುನಾವಣೆ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸೆಕ್ಟರ್ ಅಧಿಕಾರಿಗಳಿಗೆ ಈಗಾಗಲೇ ಒಂದು ಹಂತದ ತರಬೇತಿ ನೀಡಲಾಗಿದೆ. ತಾವು ನಿಯೋಜನೆಗೊಂಡಿರುವ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆ<br /> ಗಳಿಗೆ ಭೇಟಿ ನೀಡಿ ಚುನಾವಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಶೀಲಿಸಬೇಕು. ಚುನಾವಣೆಯಲ್ಲಿ ಯಾವುದೇ ರೀತಿ ಲೋಪವಾಗದಂತೆ ಶಿಸ್ತಿನಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.</p>.<p>ಪ್ರತಿ ಗ್ರಾಮ, ನಗರ, ಪಟ್ಟಣ, ಪ್ರದೇಶಗಳಲ್ಲಿ ಮತದಾನದ ಮಹತ್ವದ ಬಗ್ಗೆ ಜನಸಾಮಾನ್ಯರಿಗೆ ಅರ್ಥವಾಗುವಂತೆ ಜಾಗೃತಿ ಮೂಡಿಸಬೇಕು. ಮತದಾರರು ಆಮಿಷಕ್ಕೆ ಈಡಾಗದಂತೆ ಹಾಗೂ ಚುನಾವಣೆಯಲ್ಲಿ ನಿರ್ಭಯವಾಗಿ ಮತದಾನ ಮಾಡುವಂತೆ ಅರಿವು ಮೂಡಿಸುವ ಜವಾಬ್ದಾರಿ ಸೆಕ್ಟರ್ ಅಧಿಕಾರಿಗಳದ್ದು ಎಂದು ಹೇಳಿದರು.</p>.<p>ಆಯಾ, ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು ಹಾಗೂ ಇತರೆ ಸೌಕರ್ಯಗಳ ಬಗ್ಗೆ ಪರಿಶೀಲಿಸಬೇಕು. ಸಮಸ್ಯೆ ಕಂಡುಬಂದರೆ, ತಕ್ಷಣ ಚುನಾವಣಾಧಿಕಾರಿ ಮೂಲಕ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಎಂದು ಸೂಚಿಸಿದರು.</p>.<p>ಮುಂದಿನ ತರಬೇತಿ ಕಾರ್ಯಾಗಾರದಲ್ಲಿ ಅಧಿಕಾರಿಗಳಿಗೆ ಏನಾದರೂ ಸಮಸ್ಯೆಗಳಿದ್ದರೆ, ಗೊಂದಲಗಳಿದ್ದರೆ ಮೇಲಧಿಕಾರಿಗಳನ್ನು ಸಂಪರ್ಕಿಸಿ ಬಗೆಹರಿಸಿಕೊಳ್ಳಬೇಕು. ಒಮ್ಮೆ ಚುನಾವಣಾ ವೆಬ್ಸೈಟ್ ಅವಲೋಕಿಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>‘ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಎನ್.ರವಿಂದ್ರ, ‘ ಚುನಾವಣೆ ಘೋಷಣೆಯಾದ ದಿನದಿಂದ ಸೆಕ್ಟರ್ ಅಧಿಕಾರಿಗಳು ಮತಗಟ್ಟೆಗಳ ಬಗ್ಗೆ ಗಮನಹರಿಸಬೇಕು. ಮತದಾರರಿಗೆ ಮತಚಲಾಯಿಸಲು ಬೇಕಾದ ಪೂರಕ ವಾತಾವರಣವನ್ನು ನಿರ್ಮಿಸಬೇಕು. ವೃದ್ಧರು ಮತ್ತು ಅಂಗವಿಕಲರು ಮತಗಟ್ಟೆಗೆ ಬರುವಂತಹ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.</p>.<p>ಈ ಬಾರಿ ಹೊಸದಾಗಿ ವಿವಿಪ್ಯಾಟ್ ಯಂತ್ರ ಅಳವಡಿಸಲಾಗುತ್ತಿದೆ. ಈ ಯಂತ್ರದ ಮೂಲಕ ಮತದಾರರು ತಾವು ಯಾರಿಗೆ ಮತದಾನ ಮಾಡಿದ್ದೇವೆ ಎಂದು ನೋಡಬಹದು. ಸುಮಾರು 7 ಸೆಕೆಂಡ್ವರೆಗೆ ಯಾರಿಗೆ ಮತದಾನ ಮಾಡಲಾಗಿದೆ ಎಂಬುದನ್ನು ತಿಳಿಯಲು ಸಾಧ್ಯವಿದೆ. ಈ ಮೂಲಕ ಮತ ಚಲಾವಣೆಯಾದ ಬಗ್ಗೆ ಖಾತರಿ ಮಾಡಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.</p>.<p>ಚುನಾವಣೆ ನೋಡಲ್ ಎಂಸಿಸಿ ನೋಡಲ್ ಅಧಿಕಾರಿ ಮಂಜುನಾಥ ಮಾತನಾಡಿ, ‘ಈ ತಂಡದಲ್ಲಿ 200 ಕ್ಕೂ ಹೆಚ್ಚು ಮಂದಿ ದಿನದ 24 ಗಂಟೆ ಕಾಲ ಕಾರ್ಯನಿರ್ವಹಿಸಲಿದ್ದಾರೆ. ಯಾವುದೇ ಲೋಪದೋಷ ಕಂಡು ಬಂದಲ್ಲಿ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ತಿಳಿಸಬೇಕು’ ಎಂದು ಅಧಿಕಾರಿಗಳಿಗೆ ತಿಳಿಸಿದರು.</p>.<p>ಡಿವೈಎಸ್ಪಿ ನಾಗರಾಜ್ ಮಾತನಾಡಿ, ‘ಮತಗಟ್ಟೆಯಲ್ಲಿ ಶಾಂತಿಯುತ ಮತದಾನ ನಡೆಯಲು ಬೇಕಾದ ವ್ಯವಸ್ಥೆ ಮಾಡಲಾಗಿದೆ. ಭಯ-ಭೀತಿ ಬಿಟ್ಟು ಸ್ವತಂತ್ರವಾಗಿ ಮತ ಚಲಾಯಿಸುವುದಕ್ಕೆ ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದೆ. ಈಗಾಗಲೇ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗುತ್ತಿದ್ದು ಸಿಬ್ಬಂದಿಯು ದಿನದ 24 ಗಂಟೆಗಳ ಕಾಲ ಕಾರ್ಯಚರಣೆಯಲ್ಲಿರುವರು’ ಎಂದು ತಿಳಿಸಿದರು. ಕಾರ್ಯಾಗಾರದಲ್ಲಿ ಉಪವಿಭಾಗಾಧಿಕಾರಿ ವಿಜಯ ಕುಮಾರ್, ಚುನಾವಣಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>