<p><strong>ಹಾವೇರಿ</strong>: ತೀವ್ರ ಕುತೂಹಲ ಕೆರಳಿಸಿದ್ದ ನಗರಸಭೆಯ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಸಂಜೀವಕುಮಾರ ನೀರಲಗಿ ಹಾಗೂ ಉಪಾಧ್ಯಕ್ಷೆಯಾಗಿ ಜಾಹೀದಾಬಾನು ಜಮಾದಾರ ಅವಿರೋಧವಾಗಿ ಆಯ್ಕೆಯಾದರು.</p>.<p>ಶನಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ ಬೆಳವಡಿ ಅವರು ನಾಮಪತ್ರ ಹಿಂಪಡೆದ ಕಾರಣ ಕಾಂಗ್ರೆಸ್ ಅಭ್ಯರ್ಥಿ ಸಂಜೀವಕುಮಾರ ನೀರಲಗಿ ಅವಿರೋಧವಾಗಿ ಆಯ್ಕೆಯಾದರು.</p>.<p>ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಜಾಹೀದಾಬಾನು ಜಮಾದಾರ ಏಕೈಕ ನಾಮಪತ್ರ ಸಲ್ಲಿಸಿದ್ದರು.</p>.<p>31 ವಾರ್ಡ್ ಗಳ ಹಾವೇರಿ ನಗರಸಭೆಯಲ್ಲಿ 15 ಕಾಂಗ್ರೆಸ್, 09 ಬಿಜೆಪಿ ಹಾಗೂ 07 ಪಕ್ಷೇತರ ಸದಸ್ಯರು ಇದ್ದರು. ಇವರಲ್ಲಿ 4 ಪಕ್ಷೇತರರು ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ ಕಾರಣ ಕಾಂಗ್ರೆಸ್ ಸಂಖ್ಯಾಬಲ 19 ಕ್ಕೆ ಏರಿಕೆಯಾಯಿತು.</p>.<p>ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಹೂಗಳನ್ನು ಎರಚಿ ಸಂಭ್ರಮ ಆಚರಿಸಿದರು.</p>.<p><strong>144 ಸೆಕ್ಷನ್ ಜಾರಿ:</strong> ಚುನಾವಣೆ ಸಂಬಂಧ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಚುನಾವಣೆ ನಡೆಯುವ ಪ್ರದೇಶದ 500 ಮೀಟರ್ ಸುತ್ತಮುತ್ತ ಪ್ರತಿಬಂಧಕಾಜ್ಞೆ (144 ಸೆಕ್ಷನ್) ಜಾರಿಗೊಳಿಸಿ ತಹಶೀಲ್ದಾರ್ ಶಂಕರ ಜಿ.ಎಸ್. ಆದೇಶ ಹೊರಡಿಸಿದ್ದರು. ಈ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ತೀವ್ರ ಕುತೂಹಲ ಕೆರಳಿಸಿದ್ದ ನಗರಸಭೆಯ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಸಂಜೀವಕುಮಾರ ನೀರಲಗಿ ಹಾಗೂ ಉಪಾಧ್ಯಕ್ಷೆಯಾಗಿ ಜಾಹೀದಾಬಾನು ಜಮಾದಾರ ಅವಿರೋಧವಾಗಿ ಆಯ್ಕೆಯಾದರು.</p>.<p>ಶನಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ ಬೆಳವಡಿ ಅವರು ನಾಮಪತ್ರ ಹಿಂಪಡೆದ ಕಾರಣ ಕಾಂಗ್ರೆಸ್ ಅಭ್ಯರ್ಥಿ ಸಂಜೀವಕುಮಾರ ನೀರಲಗಿ ಅವಿರೋಧವಾಗಿ ಆಯ್ಕೆಯಾದರು.</p>.<p>ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಜಾಹೀದಾಬಾನು ಜಮಾದಾರ ಏಕೈಕ ನಾಮಪತ್ರ ಸಲ್ಲಿಸಿದ್ದರು.</p>.<p>31 ವಾರ್ಡ್ ಗಳ ಹಾವೇರಿ ನಗರಸಭೆಯಲ್ಲಿ 15 ಕಾಂಗ್ರೆಸ್, 09 ಬಿಜೆಪಿ ಹಾಗೂ 07 ಪಕ್ಷೇತರ ಸದಸ್ಯರು ಇದ್ದರು. ಇವರಲ್ಲಿ 4 ಪಕ್ಷೇತರರು ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ ಕಾರಣ ಕಾಂಗ್ರೆಸ್ ಸಂಖ್ಯಾಬಲ 19 ಕ್ಕೆ ಏರಿಕೆಯಾಯಿತು.</p>.<p>ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಹೂಗಳನ್ನು ಎರಚಿ ಸಂಭ್ರಮ ಆಚರಿಸಿದರು.</p>.<p><strong>144 ಸೆಕ್ಷನ್ ಜಾರಿ:</strong> ಚುನಾವಣೆ ಸಂಬಂಧ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಚುನಾವಣೆ ನಡೆಯುವ ಪ್ರದೇಶದ 500 ಮೀಟರ್ ಸುತ್ತಮುತ್ತ ಪ್ರತಿಬಂಧಕಾಜ್ಞೆ (144 ಸೆಕ್ಷನ್) ಜಾರಿಗೊಳಿಸಿ ತಹಶೀಲ್ದಾರ್ ಶಂಕರ ಜಿ.ಎಸ್. ಆದೇಶ ಹೊರಡಿಸಿದ್ದರು. ಈ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>