<p>ಹಾವೇರಿ: ‘ರಟ್ಟೀಹಳ್ಳಿಯಲ್ಲಿ ಗುರುವಾರ ಸಂಜೆ ನಡೆದ ಹಿಂದೂ ಮಹಾಸಭಾದ ಗಣಪತಿ ಮೂರ್ತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ನನ್ನ ಮೇಲೆ ಜಿಲ್ಲಾಧಿಕಾರಿಯವರು ನಿರ್ಬಂಧ ಹೇರಿದ್ದಾರೆ. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗುವುದು’ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಟ್ಟೀಹಳ್ಳಿ ಕರ್ನಾಟಕದ ಭಾಗವೋ ಅಥವಾ ಪಾಕಿಸ್ತಾನವೋ. ನಾನು ಭಾಗವಹಿಸಿದ ಕಾರ್ಯಕ್ರಮಗಳಲ್ಲಿ ಎಲ್ಲೂ ಗಲಭೆ ಆಗಿಲ್ಲ. 28 ಪ್ರಕರಣಗಳಲ್ಲಿ ನಿರ್ದೋಷಿಯಾಗಿದ್ದೇನೆ. ಎರಡು ಪ್ರಕರಣಗಳ ವಿಚಾರಣೆ ಮಾತ್ರ ಬಾಕಿ ಇದೆ’ ಎಂದರು.</p>.<p>‘ಕಾಂಗ್ರೆಸ್ ನೇತೃತ್ವದ ಸರ್ಕಾರ, ಮುಸ್ಲಿಂ ಸಮುದಾಯದವರಿಗೆ ಕುಮ್ಮಕ್ಕು ನೀಡುತ್ತಿದೆ. ರಟ್ಟೀಹಳ್ಳಿ ಅಂತಹ ಸಣ್ಣ ಊರಲ್ಲಿ ನನಗೆ ನಿಷೇಧ ಹೇರುತ್ತಿದೆ’ ಎಂದರು.</p>.<p>ಉಪ ಚುನಾವಣೆ ಬಗ್ಗೆ ಶೀಘ್ರ ನಿರ್ಧಾರ: ‘ಶಿಗ್ಗಾವಿ– ಸವಣೂರು ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತಿಳಿಸಲಾಗುವುದು’ ಎಂದು ಮುತಾಲಿಕ್ ಹೇಳಿದರು.</p>.<p>ಗಲಭೆಗೆ ಬೇಜವಾಬ್ದಾರಿ ಕಾರಣ: ‘ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಳೆದ ಬಾರಿಯೂ ಗಲಾಟೆ ಆಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಪೊಲೀಸ್ ಎಸ್ಪಿ, ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು. ಇವರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯೇ ಗಲಭೆಗೆ ಕಾರಣ’ ಎಂದು ಮುತಾಲಿಕ್ ದೂರಿದರು.</p>.<p>‘ಮಸೀದಿ ಎದುರು ಶಾಂತ ರೀತಿಯಾಗಿ ಹೊರಟಿದ್ದ ಗಣಪತಿ ವಿಸರ್ಜನಾ ಮೆರವಣಿಗೆ ಮೇಲೆ ಚಪ್ಪಲಿ, ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಜೊತೆಗೆ, ಗಲಭೆ ಸೃಷ್ಟಿಸಲಾಗಿದೆ. ಗಲಭೆಯ ಹೊಣೆ ಹೊತ್ತು ಚಲುವರಾಯಸ್ವಾಮಿ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಕಾಂಗ್ರೆಸ್ ತನ್ನ ಅಧಿಕಾರದ ದಾಹಕ್ಕಾಗಿ ಹಿಂದೂಗಳನ್ನು ಬಲಿಪಶು ಮಾಡುತ್ತಿದೆ. ನಾಗಮಂಗಲಕ್ಕೆ ಶುಕ್ರವಾರ ಭೇಟಿ ನೀಡಿ, ಅಲ್ಲಿಯ ವಸ್ತುಸ್ಥಿತಿ ತಿಳಿದುಕೊಳ್ಳುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ‘ರಟ್ಟೀಹಳ್ಳಿಯಲ್ಲಿ ಗುರುವಾರ ಸಂಜೆ ನಡೆದ ಹಿಂದೂ ಮಹಾಸಭಾದ ಗಣಪತಿ ಮೂರ್ತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ನನ್ನ ಮೇಲೆ ಜಿಲ್ಲಾಧಿಕಾರಿಯವರು ನಿರ್ಬಂಧ ಹೇರಿದ್ದಾರೆ. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗುವುದು’ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಟ್ಟೀಹಳ್ಳಿ ಕರ್ನಾಟಕದ ಭಾಗವೋ ಅಥವಾ ಪಾಕಿಸ್ತಾನವೋ. ನಾನು ಭಾಗವಹಿಸಿದ ಕಾರ್ಯಕ್ರಮಗಳಲ್ಲಿ ಎಲ್ಲೂ ಗಲಭೆ ಆಗಿಲ್ಲ. 28 ಪ್ರಕರಣಗಳಲ್ಲಿ ನಿರ್ದೋಷಿಯಾಗಿದ್ದೇನೆ. ಎರಡು ಪ್ರಕರಣಗಳ ವಿಚಾರಣೆ ಮಾತ್ರ ಬಾಕಿ ಇದೆ’ ಎಂದರು.</p>.<p>‘ಕಾಂಗ್ರೆಸ್ ನೇತೃತ್ವದ ಸರ್ಕಾರ, ಮುಸ್ಲಿಂ ಸಮುದಾಯದವರಿಗೆ ಕುಮ್ಮಕ್ಕು ನೀಡುತ್ತಿದೆ. ರಟ್ಟೀಹಳ್ಳಿ ಅಂತಹ ಸಣ್ಣ ಊರಲ್ಲಿ ನನಗೆ ನಿಷೇಧ ಹೇರುತ್ತಿದೆ’ ಎಂದರು.</p>.<p>ಉಪ ಚುನಾವಣೆ ಬಗ್ಗೆ ಶೀಘ್ರ ನಿರ್ಧಾರ: ‘ಶಿಗ್ಗಾವಿ– ಸವಣೂರು ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತಿಳಿಸಲಾಗುವುದು’ ಎಂದು ಮುತಾಲಿಕ್ ಹೇಳಿದರು.</p>.<p>ಗಲಭೆಗೆ ಬೇಜವಾಬ್ದಾರಿ ಕಾರಣ: ‘ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕಳೆದ ಬಾರಿಯೂ ಗಲಾಟೆ ಆಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಪೊಲೀಸ್ ಎಸ್ಪಿ, ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು. ಇವರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯೇ ಗಲಭೆಗೆ ಕಾರಣ’ ಎಂದು ಮುತಾಲಿಕ್ ದೂರಿದರು.</p>.<p>‘ಮಸೀದಿ ಎದುರು ಶಾಂತ ರೀತಿಯಾಗಿ ಹೊರಟಿದ್ದ ಗಣಪತಿ ವಿಸರ್ಜನಾ ಮೆರವಣಿಗೆ ಮೇಲೆ ಚಪ್ಪಲಿ, ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಜೊತೆಗೆ, ಗಲಭೆ ಸೃಷ್ಟಿಸಲಾಗಿದೆ. ಗಲಭೆಯ ಹೊಣೆ ಹೊತ್ತು ಚಲುವರಾಯಸ್ವಾಮಿ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>‘ಕಾಂಗ್ರೆಸ್ ತನ್ನ ಅಧಿಕಾರದ ದಾಹಕ್ಕಾಗಿ ಹಿಂದೂಗಳನ್ನು ಬಲಿಪಶು ಮಾಡುತ್ತಿದೆ. ನಾಗಮಂಗಲಕ್ಕೆ ಶುಕ್ರವಾರ ಭೇಟಿ ನೀಡಿ, ಅಲ್ಲಿಯ ವಸ್ತುಸ್ಥಿತಿ ತಿಳಿದುಕೊಳ್ಳುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>