<p>ಹುಬ್ಬಳ್ಳಿ: ‘ಹಾವೇರಿ ಜಿಲ್ಲೆಯ ಹೊಸರಿತ್ತಿಯಲ್ಲಿನ ರಾಷ್ಟ್ರೀಯ ಶಿಕ್ಷಣ ಸಮಿತಿಯ ಜಾಗವನ್ನು ನಿಯಮಾವಳಿ ಪ್ರಕಾರ ಮತ್ತೊಮ್ಮೆ ಹರಾಜು ಹಾಕಲಾಗುವುದು’ ಎಂದು ಸಮಿತಿಯ ಕಾರ್ಯದರ್ಶಿ ವೀರಣ್ಣ ಚಕ್ಕಿ ಹೇಳಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹೊಸರಿತ್ತಿಯಲ್ಲಿನ ಸಮಿತಿಯ ಒಟ್ಟು 12 ನಿವೇಶನಗಳನ್ನು ಸಮಿತಿಯ ಏಳು ಜನ ಮತ್ತು ಇತರ ಇಬ್ಬರು ಖರೀದಿಸಿದ್ದರು. ಅವರು ಸಹ ಹರಾಜು ಮಾಡಲು ಒಪ್ಪಿದ್ದಾರೆ’ ಎಂದರು.</p>.<p>‘ಸಮಿತಿಯಿಂದ ಪದವಿ ಕಾಲೇಜು ಕಟ್ಟಡ ನಿರ್ಮಿಸಲು ಹುಬ್ಬಳ್ಳಿಯಲ್ಲಿನ ಸಮಿತಿಯ ಜಾಗವವನ್ನು ಮಾರಾಟ ಮಾಡಲು ಉದ್ದೇಶಿಸಲಾಗಿತ್ತು. ತಾಂತ್ರಿಕ ಕಾರಣಗಳಿಂದ ಅದು ಸಾಧ್ಯವಾಗಲಿಲ್ಲ. ಹೀಗಾಗಿ, ಹೊಸರಿತ್ತಿಯ ಜಾಗ ಮಾರಾಟ ಮಾಡಿ, ಆ ಹಣದಲ್ಲಿ ಕಟ್ಟಡ ನಿರ್ಮಿಸಲಾಗಿದೆ’ ಎಂದು ಹೇಳಿದರು.</p>.<p>‘ಸಂಸ್ಥೆಯ ಆಸ್ತಿ ಮಾರಾಟ ಸಂಬಂಧ ದರ ನಿಗದಿ ಸಮಿತಿ ರಚಿಸಲಾಗಿತ್ತು. ಸಮಿತಿಯವರು ಚದರ ಅಡಿಗೆ ₹3 ಸಾವಿರ ದರ ನಿಗದಿಪಡಿಸಿದ್ದರು. ಆದರೆ ಜಾಗದ ದರ ಹೆಚ್ಚು ಇದ್ದು, ಸಂಸ್ಥೆಯ ಸದಸ್ಯರೇ ಕಡಿಮೆ ದರಕ್ಕೆ ಖರೀದಿಸಿದ್ದಾರೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿ, ಜಿಲ್ಲಾಧಿಕಾರಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಜಾಗದ ಮಾರಾಟ ವಿಷಯದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>ಸಮಿತಿ ಅಧ್ಯಕ್ಷ ರಾಜೇಂದ್ರಪ್ರಸಾದ ಹಳ್ಳಿಕೇರಿ, ಉಪ ಕಾರ್ಯದರ್ಶಿ ಗಿರೀಶ ಅಂಕಲಕೋಟಿ, ಪ್ರಭಣ್ಣ ಗೌರಿಮನಿ, ಸೋಮನಾಥ ಮಹಾಜನಶೆಟ್ರು, ರಮೇಶ ಏಕಬೋಟೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-24-947795702</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ಹಾವೇರಿ ಜಿಲ್ಲೆಯ ಹೊಸರಿತ್ತಿಯಲ್ಲಿನ ರಾಷ್ಟ್ರೀಯ ಶಿಕ್ಷಣ ಸಮಿತಿಯ ಜಾಗವನ್ನು ನಿಯಮಾವಳಿ ಪ್ರಕಾರ ಮತ್ತೊಮ್ಮೆ ಹರಾಜು ಹಾಕಲಾಗುವುದು’ ಎಂದು ಸಮಿತಿಯ ಕಾರ್ಯದರ್ಶಿ ವೀರಣ್ಣ ಚಕ್ಕಿ ಹೇಳಿದರು.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹೊಸರಿತ್ತಿಯಲ್ಲಿನ ಸಮಿತಿಯ ಒಟ್ಟು 12 ನಿವೇಶನಗಳನ್ನು ಸಮಿತಿಯ ಏಳು ಜನ ಮತ್ತು ಇತರ ಇಬ್ಬರು ಖರೀದಿಸಿದ್ದರು. ಅವರು ಸಹ ಹರಾಜು ಮಾಡಲು ಒಪ್ಪಿದ್ದಾರೆ’ ಎಂದರು.</p>.<p>‘ಸಮಿತಿಯಿಂದ ಪದವಿ ಕಾಲೇಜು ಕಟ್ಟಡ ನಿರ್ಮಿಸಲು ಹುಬ್ಬಳ್ಳಿಯಲ್ಲಿನ ಸಮಿತಿಯ ಜಾಗವವನ್ನು ಮಾರಾಟ ಮಾಡಲು ಉದ್ದೇಶಿಸಲಾಗಿತ್ತು. ತಾಂತ್ರಿಕ ಕಾರಣಗಳಿಂದ ಅದು ಸಾಧ್ಯವಾಗಲಿಲ್ಲ. ಹೀಗಾಗಿ, ಹೊಸರಿತ್ತಿಯ ಜಾಗ ಮಾರಾಟ ಮಾಡಿ, ಆ ಹಣದಲ್ಲಿ ಕಟ್ಟಡ ನಿರ್ಮಿಸಲಾಗಿದೆ’ ಎಂದು ಹೇಳಿದರು.</p>.<p>‘ಸಂಸ್ಥೆಯ ಆಸ್ತಿ ಮಾರಾಟ ಸಂಬಂಧ ದರ ನಿಗದಿ ಸಮಿತಿ ರಚಿಸಲಾಗಿತ್ತು. ಸಮಿತಿಯವರು ಚದರ ಅಡಿಗೆ ₹3 ಸಾವಿರ ದರ ನಿಗದಿಪಡಿಸಿದ್ದರು. ಆದರೆ ಜಾಗದ ದರ ಹೆಚ್ಚು ಇದ್ದು, ಸಂಸ್ಥೆಯ ಸದಸ್ಯರೇ ಕಡಿಮೆ ದರಕ್ಕೆ ಖರೀದಿಸಿದ್ದಾರೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿ, ಜಿಲ್ಲಾಧಿಕಾರಿಗೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಜಾಗದ ಮಾರಾಟ ವಿಷಯದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>ಸಮಿತಿ ಅಧ್ಯಕ್ಷ ರಾಜೇಂದ್ರಪ್ರಸಾದ ಹಳ್ಳಿಕೇರಿ, ಉಪ ಕಾರ್ಯದರ್ಶಿ ಗಿರೀಶ ಅಂಕಲಕೋಟಿ, ಪ್ರಭಣ್ಣ ಗೌರಿಮನಿ, ಸೋಮನಾಥ ಮಹಾಜನಶೆಟ್ರು, ರಮೇಶ ಏಕಬೋಟೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-24-947795702</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>