<p><strong>ಹಾವೇರಿ</strong>: ಜಿಲ್ಲೆಯ ಐವರು ಇನ್ಸ್ಪೆಕ್ಟರ್ ಸೇರಿದಂತೆ ರಾಜ್ಯದ 131 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಸಿಬ್ಬಂದಿ ಮಂಡಳಿಯು ಸೋಮವಾರ ಆದೇಶ ಹೊರಡಿಸಿದೆ.</p>.<p>ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪ್ರವೀಣ್ಕುಮಾರ ವಿ. ಅವರನ್ನು ಸಿರಾ ಶಹರ ಠಾಣೆಗೆ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ಧಾರವಾಡ ಶಹರ ಠಾಣೆಯ ನಾಗಯ್ಯ ಸಿ. ಕಾಡದೇವರು ಅವರನ್ನು ವರ್ಗಾವಣೆ ಮಾಡಲಾಗಿದೆ.</p>.<p>ರಾಣೆಬೆನ್ನೂರು ಶಹರ ವೃತ್ತದ ಇನ್ಸ್ಪೆಕ್ಟರ್ ಶಂಕರ್ ಎಸ್.ಕೆ. ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಚಿತ್ರದುರ್ಗ ಸೈಬರ್ ಕ್ರೈಂ ಠಾಣೆಯ ಎನ್. ವೆಂಕಟೇಶ್ ಅವರನ್ನು ವರ್ಗಾಯಿಸಲಾಗಿದೆ.</p>.<p>ಹಿರೇಕೆರೂರು ವೃತ್ತದ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದ ಬಸವರಾಜ ಪಿ.ಎಸ್. ಅವರನ್ನು ಹಾವೇರಿಯ ಡಿಎಸ್ಬಿ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಕರ್ನಾಟಕ ಲೋಕಾಯುಕ್ತದಲ್ಲಿದ್ದ ಮಂಜುನಾಥ ಪಂಡಿತ್ ಎನ್. ಅವರನ್ನು ಹಿರೇಕೆರೂರು ವೃತ್ತಕ್ಕೆ ವರ್ಗಾವಣೆ ಮಾಡಲಾಗಿದೆ.</p>.<p>ಬ್ಯಾಡಗಿ ವೃತ್ತದ ಮಹಾಂತೇಶ ಕೆ. ಲಂಬಿ ಅವರನ್ನು ಶಿವಮೊಗ್ಗ ಜಿಲ್ಲೆಯ ಸೊರಬ ವೃತ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಚಿತ್ರದುರ್ಗ ಹೊಳಲ್ಕೆರೆ ವೃತ್ತದ ಮಾರ್ತಾಂಡಪ್ಪ ಬಿ. ಚಿಕ್ಕಣ್ಣನವರ ಅವರನ್ನು ಬ್ಯಾಡಗಿ ವೃತ್ತದ ಇನ್ಸ್ಪೆಕ್ಟರ್ ಆಗಿ ವರ್ಗಾಯಿಸಲಾಗಿದೆ.</p>.<p>ಹಾವೇರಿಯ ಡಿ.ಎಸ್.ಬಿ ಇನ್ಸ್ಪೆಕ್ಟರ್ ಮುತ್ತನಗೌಡ ಗೌಡಪ್ಪಗೌಡರ ಅವರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಗೆ ವರ್ಗಾಯಿಸಿರುವುದನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಜಿಲ್ಲೆಯ ಐವರು ಇನ್ಸ್ಪೆಕ್ಟರ್ ಸೇರಿದಂತೆ ರಾಜ್ಯದ 131 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಸಿಬ್ಬಂದಿ ಮಂಡಳಿಯು ಸೋಮವಾರ ಆದೇಶ ಹೊರಡಿಸಿದೆ.</p>.<p>ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪ್ರವೀಣ್ಕುಮಾರ ವಿ. ಅವರನ್ನು ಸಿರಾ ಶಹರ ಠಾಣೆಗೆ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ಧಾರವಾಡ ಶಹರ ಠಾಣೆಯ ನಾಗಯ್ಯ ಸಿ. ಕಾಡದೇವರು ಅವರನ್ನು ವರ್ಗಾವಣೆ ಮಾಡಲಾಗಿದೆ.</p>.<p>ರಾಣೆಬೆನ್ನೂರು ಶಹರ ವೃತ್ತದ ಇನ್ಸ್ಪೆಕ್ಟರ್ ಶಂಕರ್ ಎಸ್.ಕೆ. ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಚಿತ್ರದುರ್ಗ ಸೈಬರ್ ಕ್ರೈಂ ಠಾಣೆಯ ಎನ್. ವೆಂಕಟೇಶ್ ಅವರನ್ನು ವರ್ಗಾಯಿಸಲಾಗಿದೆ.</p>.<p>ಹಿರೇಕೆರೂರು ವೃತ್ತದ ಸರ್ಕಲ್ ಇನ್ಸ್ಪೆಕ್ಟರ್ ಆಗಿದ್ದ ಬಸವರಾಜ ಪಿ.ಎಸ್. ಅವರನ್ನು ಹಾವೇರಿಯ ಡಿಎಸ್ಬಿ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಕರ್ನಾಟಕ ಲೋಕಾಯುಕ್ತದಲ್ಲಿದ್ದ ಮಂಜುನಾಥ ಪಂಡಿತ್ ಎನ್. ಅವರನ್ನು ಹಿರೇಕೆರೂರು ವೃತ್ತಕ್ಕೆ ವರ್ಗಾವಣೆ ಮಾಡಲಾಗಿದೆ.</p>.<p>ಬ್ಯಾಡಗಿ ವೃತ್ತದ ಮಹಾಂತೇಶ ಕೆ. ಲಂಬಿ ಅವರನ್ನು ಶಿವಮೊಗ್ಗ ಜಿಲ್ಲೆಯ ಸೊರಬ ವೃತ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಚಿತ್ರದುರ್ಗ ಹೊಳಲ್ಕೆರೆ ವೃತ್ತದ ಮಾರ್ತಾಂಡಪ್ಪ ಬಿ. ಚಿಕ್ಕಣ್ಣನವರ ಅವರನ್ನು ಬ್ಯಾಡಗಿ ವೃತ್ತದ ಇನ್ಸ್ಪೆಕ್ಟರ್ ಆಗಿ ವರ್ಗಾಯಿಸಲಾಗಿದೆ.</p>.<p>ಹಾವೇರಿಯ ಡಿ.ಎಸ್.ಬಿ ಇನ್ಸ್ಪೆಕ್ಟರ್ ಮುತ್ತನಗೌಡ ಗೌಡಪ್ಪಗೌಡರ ಅವರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಗೆ ವರ್ಗಾಯಿಸಿರುವುದನ್ನು ಆದೇಶದಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>