<p>ಹಾವೇರಿ: ‘ಹಾವೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕುಡಿಯುವ ನೀರು ಹಾಗೂ ಇತರೆ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ’ ಎಂದು ಆರೋಪಿಸಿದ ಶಾಸಕ ರುದ್ರಪ್ಪ ಲಮಾಣಿ ಅವರು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು.</p>.<p>ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ‘ಕರ್ನಾಟಕ ಜಲ ಮಂಡಳಿ, ನಗರಾಭಿವೃದ್ಧಿ ಕೋಶ, ನಗರಸಭೆ ಹಾಗೂ ಕೆಯುಐಡಿಎಫ್ಸಿ, ಕೆ.ಯು.ಡಬ್ಲ್ಯು.ಎಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಟೆಂಡರ್ನಲ್ಲಿ ನಿಗದಿಪಡಿಸಿದ್ದ ಅವಧಿ ಮುಗಿದರೂ ಕಾಮಗಾರಿ ಮುಗಿಸದಿರುವುದು ನಿಮ್ಮ ಬೇಜವಾಬ್ದಾರಿ ತೋರಿಸುತ್ತದೆ. ಕಾಮಗಾರಿ ಮುಗಿಸದಿರುವುದಕ್ಕೆ ನಿಮಗೆ ನಾಚಿಕೆಯಾಗಬೇಕು. ಕೆಲಸ ಮಾಡಲು ಸಾಧ್ಯವಿಲ್ಲದಿದ್ದರೆ, ಟೆಂಡರ್ನಲ್ಲಿ ಏಕೆ ಭಾಗವಹಿಸಬೇಕಿತ್ತು’ ಎಂದು ಶಾಸಕ ರುದ್ರಪ್ಪ ಅವರು ಗುತ್ತಿಗೆದಾರರಿಗೆ ಬಿಸಿ ಮುಟ್ಟಸಿದರು.</p>.<p>‘ಹಾವೇರಿ ನಗರಕ್ಕೆ ನಿರಂತರ ನೀರು ಸರಬರಾಜು ಮಾಡುವ ಯೋಜನೆಯ ಕಾಮಗಾರಿ ಆದೇಶ ಪಡೆದು 3 ವರ್ಷಗಳಾದರೂ ಭೌತಿಕವಾಗಿ ಪೂರ್ಣಗೊಂಡಿಲ್ಲ. ಇನ್ನು ಎಷ್ಟು ವರ್ಷಗಳಲ್ಲಿ ಕೆಲಸ ಮುಗಿಸುತ್ತೀರಿ? ಕೂಡಲೇ ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ ಕೆಲಸಕ್ಕೆ ವೇಗ ನೀಡಬೇಕು. ಇಲ್ಲದಿದ್ದರೆ, ನಾನು ಸಹಿವುದಿಲ್ಲ’ ಎಂದು ಖಡಕ್ ಎಚ್ಚರಿಕೆ ನೀಡಿದರು.</p>.<p>ಕಾಮಗಾರಿಗಳ ವಿವರಗಳನ್ನು ಸರಿಯಾಗಿ ನೀಡದ ಮತ್ತು ಮೇಲ್ವಿಚಾರಣೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧವೂ ಹರಿಹಾಯ್ದ ಶಾಸಕ, ‘ಕರ್ತವ್ಯ ಲೋಪ ಎಸಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>₹ 10 ಕೋಟಿ ಅನುದಾನ: ‘ಹಾವೇರಿ ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮುಖ್ಯಮಂತ್ರಿಯವರು ಹಾಗೂ ಸಚಿವರೊಂದಿಗೆ ಚರ್ಚಿಸಲಾಗಿದೆ. ನಗರದ ನೀರಿನ ವ್ಯವಸ್ಥೆ ಸರಿಪಡಿಸಲು ಸರ್ಕಾರದಿಂದ ₹ 10 ಕೋಟಿ ವಿಶೇಷ ಅನುದಾನ ನೀಡಲು ಒಪ್ಪಿಗೆ ದೊರೆತಿದೆ’ ಎಂದು ರುದ್ರಪ್ಪ ಹೇಳಿದರು.</p>.<p>ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಮುಖ್ಯ ಇಂಜಿನಿಯರ್ ಸುಭಾಷ್ ನಾಯಕವಾಡ್ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-22-964364080</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ‘ಹಾವೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕುಡಿಯುವ ನೀರು ಹಾಗೂ ಇತರೆ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ’ ಎಂದು ಆರೋಪಿಸಿದ ಶಾಸಕ ರುದ್ರಪ್ಪ ಲಮಾಣಿ ಅವರು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು.</p>.<p>ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ‘ಕರ್ನಾಟಕ ಜಲ ಮಂಡಳಿ, ನಗರಾಭಿವೃದ್ಧಿ ಕೋಶ, ನಗರಸಭೆ ಹಾಗೂ ಕೆಯುಐಡಿಎಫ್ಸಿ, ಕೆ.ಯು.ಡಬ್ಲ್ಯು.ಎಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಟೆಂಡರ್ನಲ್ಲಿ ನಿಗದಿಪಡಿಸಿದ್ದ ಅವಧಿ ಮುಗಿದರೂ ಕಾಮಗಾರಿ ಮುಗಿಸದಿರುವುದು ನಿಮ್ಮ ಬೇಜವಾಬ್ದಾರಿ ತೋರಿಸುತ್ತದೆ. ಕಾಮಗಾರಿ ಮುಗಿಸದಿರುವುದಕ್ಕೆ ನಿಮಗೆ ನಾಚಿಕೆಯಾಗಬೇಕು. ಕೆಲಸ ಮಾಡಲು ಸಾಧ್ಯವಿಲ್ಲದಿದ್ದರೆ, ಟೆಂಡರ್ನಲ್ಲಿ ಏಕೆ ಭಾಗವಹಿಸಬೇಕಿತ್ತು’ ಎಂದು ಶಾಸಕ ರುದ್ರಪ್ಪ ಅವರು ಗುತ್ತಿಗೆದಾರರಿಗೆ ಬಿಸಿ ಮುಟ್ಟಸಿದರು.</p>.<p>‘ಹಾವೇರಿ ನಗರಕ್ಕೆ ನಿರಂತರ ನೀರು ಸರಬರಾಜು ಮಾಡುವ ಯೋಜನೆಯ ಕಾಮಗಾರಿ ಆದೇಶ ಪಡೆದು 3 ವರ್ಷಗಳಾದರೂ ಭೌತಿಕವಾಗಿ ಪೂರ್ಣಗೊಂಡಿಲ್ಲ. ಇನ್ನು ಎಷ್ಟು ವರ್ಷಗಳಲ್ಲಿ ಕೆಲಸ ಮುಗಿಸುತ್ತೀರಿ? ಕೂಡಲೇ ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ ಕೆಲಸಕ್ಕೆ ವೇಗ ನೀಡಬೇಕು. ಇಲ್ಲದಿದ್ದರೆ, ನಾನು ಸಹಿವುದಿಲ್ಲ’ ಎಂದು ಖಡಕ್ ಎಚ್ಚರಿಕೆ ನೀಡಿದರು.</p>.<p>ಕಾಮಗಾರಿಗಳ ವಿವರಗಳನ್ನು ಸರಿಯಾಗಿ ನೀಡದ ಮತ್ತು ಮೇಲ್ವಿಚಾರಣೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧವೂ ಹರಿಹಾಯ್ದ ಶಾಸಕ, ‘ಕರ್ತವ್ಯ ಲೋಪ ಎಸಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.</p>.<p>₹ 10 ಕೋಟಿ ಅನುದಾನ: ‘ಹಾವೇರಿ ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮುಖ್ಯಮಂತ್ರಿಯವರು ಹಾಗೂ ಸಚಿವರೊಂದಿಗೆ ಚರ್ಚಿಸಲಾಗಿದೆ. ನಗರದ ನೀರಿನ ವ್ಯವಸ್ಥೆ ಸರಿಪಡಿಸಲು ಸರ್ಕಾರದಿಂದ ₹ 10 ಕೋಟಿ ವಿಶೇಷ ಅನುದಾನ ನೀಡಲು ಒಪ್ಪಿಗೆ ದೊರೆತಿದೆ’ ಎಂದು ರುದ್ರಪ್ಪ ಹೇಳಿದರು.</p>.<p>ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಮುಖ್ಯ ಇಂಜಿನಿಯರ್ ಸುಭಾಷ್ ನಾಯಕವಾಡ್ ಹಾಗೂ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-22-964364080</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>