<p>ಹಾವೇರಿ: ಜಿಲ್ಲೆಯಾದ್ಯಂತ ಶನಿವಾರ ರಾತ್ರಿ ಸುರಿದ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಅವಘಡಗಳು ಸಂಭವಿಸಿವೆ. ಶಿಗ್ಗಾವಿ ತಾಲ್ಲೂಕಿನ ಶಿಡ್ಲಾಪೂರ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ತಗಡಿನ ಚಾವಣಿಗಳು ಹಾರಿಹೋಗಿದ್ದು, ಎರಡೂ ಕೊಠಡಿಗಳು ಹಾಳಾಗಿವೆ.</p>.<p>ಶಾಲೆಗೆ ಭಾನುವಾರ ಭೇಟಿ ನೀಡಿದ್ದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ ದಂಡಿನ, ವಾಸ್ತವ ಸ್ಥಿತಿ ಅರಿತುಕೊಂಡರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಮೂಲಕ ಮಾಹಿತಿ ಪಡೆದುಕೊಂಡರು.</p>.<p>‘ಶನಿವಾರ ಸಂಜೆಯಿಂದ ರಾತ್ರಿಯವರೆಗೂ ಸುರಿದ ಮಳೆಯಿಂದಾಗಿ ಶಿಡ್ಲಾಪೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎರಡೂ ಕೊಠಡಿಗಳ ಚಾವಣಿ ಹಾರಿ ಹೋಗಿದ್ದವು. ಅದರ ವಸ್ತುಗಳನ್ನು ಸಾರ್ವಜನಿಕರ ಸಹಾಯದಿಂದ ಒಂದು ಕಡೆ ಸೇರಿಸಿ ಇರಿಸಲಾಗಿದೆ’ ಎಂದು ಮೋಹನ ದಂಡಿನ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಶಾಲೆಯಲ್ಲಿ 32 ಮಕ್ಕಳು ದಾಖಲಾಗಿ, ಕೊಠಡಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಇಬ್ಬರು ಕಾಯಂ ಶಿಕ್ಷಕರಿದ್ದಾರೆ. ಆದರೆ, ಈಗ ರಜೆ ಇದ್ದಿದ್ದರಿಂದ ಕೊಠಡಿಯಲ್ಲಿ ಯಾರೂ ಇರಲಿಲ್ಲ. ಹೀಗಾಗಿ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ’ ಎಂದರು.</p>.<p>‘ಶಾಲೆಯ ಎರಡೂ ಕೊಠಡಿಗಳು ಸಂಪೂರ್ಣವಾಗಿ ಹಾಳಾಗಿವೆ. ತರಗತಿ ನಡೆಸಲು ಯೋಗ್ಯವಾಗಿಲ್ಲ. ಗ್ರಾಮಕ್ಕೆ ಹೊಂದಿಕೊಂಡಿರುವ ಸರ್ಕಾರಿ ಜಾಗದಲ್ಲಿ 2 ಕೊಠಡಿಗಳನ್ನು ವಿವಿಧ ಯೋಜನೆಗಳಡಿ ನಿರ್ಮಿಸಲಾಗಿದೆ. ಅದೇ ಕೊಠಡಿಗೆ ಶಾಲೆಯ ತರಗತಿಗಳನ್ನು ಸ್ಥಳಾಂತರಿಸಲಾಗುವುದು. ಅಲ್ಲಿಯೇ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-22-1266503048</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ಜಿಲ್ಲೆಯಾದ್ಯಂತ ಶನಿವಾರ ರಾತ್ರಿ ಸುರಿದ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಅವಘಡಗಳು ಸಂಭವಿಸಿವೆ. ಶಿಗ್ಗಾವಿ ತಾಲ್ಲೂಕಿನ ಶಿಡ್ಲಾಪೂರ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ತಗಡಿನ ಚಾವಣಿಗಳು ಹಾರಿಹೋಗಿದ್ದು, ಎರಡೂ ಕೊಠಡಿಗಳು ಹಾಳಾಗಿವೆ.</p>.<p>ಶಾಲೆಗೆ ಭಾನುವಾರ ಭೇಟಿ ನೀಡಿದ್ದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ ದಂಡಿನ, ವಾಸ್ತವ ಸ್ಥಿತಿ ಅರಿತುಕೊಂಡರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಮೂಲಕ ಮಾಹಿತಿ ಪಡೆದುಕೊಂಡರು.</p>.<p>‘ಶನಿವಾರ ಸಂಜೆಯಿಂದ ರಾತ್ರಿಯವರೆಗೂ ಸುರಿದ ಮಳೆಯಿಂದಾಗಿ ಶಿಡ್ಲಾಪೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎರಡೂ ಕೊಠಡಿಗಳ ಚಾವಣಿ ಹಾರಿ ಹೋಗಿದ್ದವು. ಅದರ ವಸ್ತುಗಳನ್ನು ಸಾರ್ವಜನಿಕರ ಸಹಾಯದಿಂದ ಒಂದು ಕಡೆ ಸೇರಿಸಿ ಇರಿಸಲಾಗಿದೆ’ ಎಂದು ಮೋಹನ ದಂಡಿನ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಶಾಲೆಯಲ್ಲಿ 32 ಮಕ್ಕಳು ದಾಖಲಾಗಿ, ಕೊಠಡಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಇಬ್ಬರು ಕಾಯಂ ಶಿಕ್ಷಕರಿದ್ದಾರೆ. ಆದರೆ, ಈಗ ರಜೆ ಇದ್ದಿದ್ದರಿಂದ ಕೊಠಡಿಯಲ್ಲಿ ಯಾರೂ ಇರಲಿಲ್ಲ. ಹೀಗಾಗಿ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ’ ಎಂದರು.</p>.<p>‘ಶಾಲೆಯ ಎರಡೂ ಕೊಠಡಿಗಳು ಸಂಪೂರ್ಣವಾಗಿ ಹಾಳಾಗಿವೆ. ತರಗತಿ ನಡೆಸಲು ಯೋಗ್ಯವಾಗಿಲ್ಲ. ಗ್ರಾಮಕ್ಕೆ ಹೊಂದಿಕೊಂಡಿರುವ ಸರ್ಕಾರಿ ಜಾಗದಲ್ಲಿ 2 ಕೊಠಡಿಗಳನ್ನು ವಿವಿಧ ಯೋಜನೆಗಳಡಿ ನಿರ್ಮಿಸಲಾಗಿದೆ. ಅದೇ ಕೊಠಡಿಗೆ ಶಾಲೆಯ ತರಗತಿಗಳನ್ನು ಸ್ಥಳಾಂತರಿಸಲಾಗುವುದು. ಅಲ್ಲಿಯೇ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-22-1266503048</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>