<p><strong>ಹಾವೇರಿ:</strong> ಜಿಲ್ಲೆಯ ರಾಣೆಬೆನ್ನೂರು ಪಟ್ಟಣದಲ್ಲಿಯೂ ಸರ್ಕಾರಿ ಜಾಗ ಹಾಗೂ ಸಾರ್ವಜನಿಕ ರಸ್ತೆಯಲ್ಲಿರುವ ಮರಗಳನ್ನು ಅಕ್ರಮವಾಗಿ ಕಡಿದು ಹಾಕಲಾಗುತ್ತಿದೆ. ಈ ಬಗ್ಗೆ ದೂರು ನೀಡಿದರೂ ಅರಣ್ಯ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲವೆಂದು ಪರಿಸರ ಪ್ರೇಮಿಗಳು ದೂರುತ್ತಿದ್ದಾರೆ.</p>.<p>ರಾಣೆಬೆನ್ನೂರಿನ ವಾಗೀಶನಗರದ ಅಂಚೆ ಕಚೇರಿ ಬಳಿಯೇ ಬೃಹತ್ ಮರವೊಂದನ್ನು ಇತ್ತೀಚೆಗೆ ಕಡಿದು ಹಾಕಲಾಗಿದೆ. ಇದನ್ನು ಪ್ರಶ್ನಿಸಿದ್ದ ‘ಪರಿಸರಕ್ಕಾಗಿ ನಾವು’ ಪರಿಸರ ಕಾರ್ಯಕರ್ತರ ರಾಜ್ಯ ಸಂಘಟನೆಯ ಪದಾಧಿಕಾರಿಗಳು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಆದರೆ, ಇದುವರೆಗೂ ತಪ್ಪಿತಸ್ಥರ ವಿರುದ್ಧ ಕ್ರಮವಾಗಿಲ್ಲ.</p>.<p>‘ಹಾವೇರಿ ಜಿಲ್ಲೆಯ ಹಲವು ಕಡೆಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ಮರಗಳನ್ನು ರಾಜಾರೋಷವಾಗಿ ಕಡಿಯುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಾಗಲಿ, ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಾಗಲಿ ಪ್ರಶ್ನಿಸುತ್ತಿಲ್ಲ. ಮರ ಕಡಿದರೆ ತಪ್ಪಿತಸ್ಥರ ವಿರುದ್ಧ ₹ 1 ಲಕ್ಷದವರೆಗೂ ದಂಡ ವಿಧಿಸಲು ಅವಕಾಶವಿದೆ. ಆದರೆ, ಅಧಿಕಾರಿಗಳು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ’ ಎಂದು ಸಂಘಟನೆಯ ಪದಾಧಿಕಾರಿಗಳು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯ ರಾಣೆಬೆನ್ನೂರು ಪಟ್ಟಣದಲ್ಲಿಯೂ ಸರ್ಕಾರಿ ಜಾಗ ಹಾಗೂ ಸಾರ್ವಜನಿಕ ರಸ್ತೆಯಲ್ಲಿರುವ ಮರಗಳನ್ನು ಅಕ್ರಮವಾಗಿ ಕಡಿದು ಹಾಕಲಾಗುತ್ತಿದೆ. ಈ ಬಗ್ಗೆ ದೂರು ನೀಡಿದರೂ ಅರಣ್ಯ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲವೆಂದು ಪರಿಸರ ಪ್ರೇಮಿಗಳು ದೂರುತ್ತಿದ್ದಾರೆ.</p>.<p>ರಾಣೆಬೆನ್ನೂರಿನ ವಾಗೀಶನಗರದ ಅಂಚೆ ಕಚೇರಿ ಬಳಿಯೇ ಬೃಹತ್ ಮರವೊಂದನ್ನು ಇತ್ತೀಚೆಗೆ ಕಡಿದು ಹಾಕಲಾಗಿದೆ. ಇದನ್ನು ಪ್ರಶ್ನಿಸಿದ್ದ ‘ಪರಿಸರಕ್ಕಾಗಿ ನಾವು’ ಪರಿಸರ ಕಾರ್ಯಕರ್ತರ ರಾಜ್ಯ ಸಂಘಟನೆಯ ಪದಾಧಿಕಾರಿಗಳು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಆದರೆ, ಇದುವರೆಗೂ ತಪ್ಪಿತಸ್ಥರ ವಿರುದ್ಧ ಕ್ರಮವಾಗಿಲ್ಲ.</p>.<p>‘ಹಾವೇರಿ ಜಿಲ್ಲೆಯ ಹಲವು ಕಡೆಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ಮರಗಳನ್ನು ರಾಜಾರೋಷವಾಗಿ ಕಡಿಯುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಾಗಲಿ, ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಾಗಲಿ ಪ್ರಶ್ನಿಸುತ್ತಿಲ್ಲ. ಮರ ಕಡಿದರೆ ತಪ್ಪಿತಸ್ಥರ ವಿರುದ್ಧ ₹ 1 ಲಕ್ಷದವರೆಗೂ ದಂಡ ವಿಧಿಸಲು ಅವಕಾಶವಿದೆ. ಆದರೆ, ಅಧಿಕಾರಿಗಳು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ’ ಎಂದು ಸಂಘಟನೆಯ ಪದಾಧಿಕಾರಿಗಳು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>