<p>ರಾಣೆಬೆನ್ನೂರು: ತಾಲ್ಲೂಕಿನ ಸುಣಕಲ್ಲಬಿದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡದ ಹೊಸಹಳ್ಳಿ ಗ್ರಾಮದ ನಿವಾಸಿ ಮಲ್ಲಪ್ಪ ಚಾಪೇರ (70) ಗುರುವಾರ ನಿಧನರಾದರು.</p>.<p>ಬದು ನಿರ್ಮಾಣ ಕೆಲಸದ ಸ್ಥಳದಲ್ಲಿ ಗುರುವಾರ ಬೆಳಿಗ್ಗೆ 6 ಗಂಟೆಗೆ ನರೇಗಾ ನಿಯಮಗಳ ಪ್ರಕಾರ ಮೊದಲ ಜಿ.ಪಿ. ಎಸ್ ಮಾಡಿಸುವಾಗ ಹೃದಯಘಾತವಾಯಿತು ಎಂದು ಮಹಾತ್ಮಾಗಾಂಧೀಜಿ ಜಿಲ್ಲಾ ಕೂಲಿ ಕಾರ್ಮಿಕರ ಸಂಘಟನೆ ಪ್ರತಿನಿಧಿಗಳು ತಿಳಿಸಿದ್ದಾರೆ. ಚಿಕಿತ್ಸೆಗೆಂದು ಬ್ಯಾಡಗಿ ಮತ್ತು ಹಾವೇರಿ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.</p>.<p>ಈ ಘಟನೆ ಬಗ್ಗೆ ಜಿಲ್ಲಾ ಸಂಘಟನೆ ಮೂಲಕ ಸಂಬಂಧಿಸಿದ ಮೇಲಧಿಕಾರಿಗಳು ಮತ್ತು ಬ್ಯಾಡಗಿ ಕ್ಷೇತ್ರದ ಶಾಸಕರ ಗಮನಕ್ಕೆ ತರಲಾಗಿದೆ. ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ನರೇಗಾ ಜಿಲ್ಲಾ ಕಾರ್ಮಿಕರ ಸಂಘಟನೆ ಮುಖಂಡರು ಆಗ್ರಹ ಪಡಿಸಿದ್ದಾರೆ.</p>.<p>ಗದಗ: ನಗರದ ನಿವಾಸಿ ಡಾ.ಸಿದ್ಧಲಿಂಗೇಶ ಶಿವಾನಂದ ಪಟ್ಟಣಶೆಟ್ಟರ (36) ಗುರುವಾರ ಹೃದಯಾಘಾತದಿಂದ ನಿಧನರಾದರು.</p>.<p>ಅವರಿಗೆ ತಂದೆ, ತಾಯಿ, ಸಹೋದರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 11 ಗಂಟೆಗೆ ಅಂಜುಮನ್ ಪಾಲಿಟೆಕ್ನಿಕ್ ಕಾಲೇಜು ಹತ್ತಿರದ ಜಮೀನಿನಲ್ಲಿ ಜರುಗಲಿದೆ.</p>.<p>ಮೃತರು ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಶಿವಾನಂದ .ಎಸ್. ಪಟ್ಟಣಶೆಟ್ಟರ ಅವರ ಪುತ್ರ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-22-1503434370</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಣೆಬೆನ್ನೂರು: ತಾಲ್ಲೂಕಿನ ಸುಣಕಲ್ಲಬಿದರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡದ ಹೊಸಹಳ್ಳಿ ಗ್ರಾಮದ ನಿವಾಸಿ ಮಲ್ಲಪ್ಪ ಚಾಪೇರ (70) ಗುರುವಾರ ನಿಧನರಾದರು.</p>.<p>ಬದು ನಿರ್ಮಾಣ ಕೆಲಸದ ಸ್ಥಳದಲ್ಲಿ ಗುರುವಾರ ಬೆಳಿಗ್ಗೆ 6 ಗಂಟೆಗೆ ನರೇಗಾ ನಿಯಮಗಳ ಪ್ರಕಾರ ಮೊದಲ ಜಿ.ಪಿ. ಎಸ್ ಮಾಡಿಸುವಾಗ ಹೃದಯಘಾತವಾಯಿತು ಎಂದು ಮಹಾತ್ಮಾಗಾಂಧೀಜಿ ಜಿಲ್ಲಾ ಕೂಲಿ ಕಾರ್ಮಿಕರ ಸಂಘಟನೆ ಪ್ರತಿನಿಧಿಗಳು ತಿಳಿಸಿದ್ದಾರೆ. ಚಿಕಿತ್ಸೆಗೆಂದು ಬ್ಯಾಡಗಿ ಮತ್ತು ಹಾವೇರಿ ಸರ್ಕಾರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.</p>.<p>ಈ ಘಟನೆ ಬಗ್ಗೆ ಜಿಲ್ಲಾ ಸಂಘಟನೆ ಮೂಲಕ ಸಂಬಂಧಿಸಿದ ಮೇಲಧಿಕಾರಿಗಳು ಮತ್ತು ಬ್ಯಾಡಗಿ ಕ್ಷೇತ್ರದ ಶಾಸಕರ ಗಮನಕ್ಕೆ ತರಲಾಗಿದೆ. ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ನರೇಗಾ ಜಿಲ್ಲಾ ಕಾರ್ಮಿಕರ ಸಂಘಟನೆ ಮುಖಂಡರು ಆಗ್ರಹ ಪಡಿಸಿದ್ದಾರೆ.</p>.<p>ಗದಗ: ನಗರದ ನಿವಾಸಿ ಡಾ.ಸಿದ್ಧಲಿಂಗೇಶ ಶಿವಾನಂದ ಪಟ್ಟಣಶೆಟ್ಟರ (36) ಗುರುವಾರ ಹೃದಯಾಘಾತದಿಂದ ನಿಧನರಾದರು.</p>.<p>ಅವರಿಗೆ ತಂದೆ, ತಾಯಿ, ಸಹೋದರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 11 ಗಂಟೆಗೆ ಅಂಜುಮನ್ ಪಾಲಿಟೆಕ್ನಿಕ್ ಕಾಲೇಜು ಹತ್ತಿರದ ಜಮೀನಿನಲ್ಲಿ ಜರುಗಲಿದೆ.</p>.<p>ಮೃತರು ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಶಿವಾನಂದ .ಎಸ್. ಪಟ್ಟಣಶೆಟ್ಟರ ಅವರ ಪುತ್ರ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-22-1503434370</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>