<p><strong>ರಟ್ಟೀಹಳ್ಳಿ</strong>: ತಾಲ್ಲೂಕಿನ ಬುಳ್ಳಾಪೂರ ಗ್ರಾಮದ ಮನೆಯಲ್ಲಿ ಅಡುಗೆ ಅನಿಲದ ಬೆಂಕಿಯಿಂದ ಜೂನ್ 18ರಂದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ ಗಾಯಗೊಂಡಿದ್ದ ರೈತ ರಾಮಪ್ಪ ಹಾಲಪ್ಪ ಎಳೆಹೊಳೆ (55) ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.</p>.<p>ಬೆಂಕಿಯಿಂದಾಗಿ ಸುಟ್ಟ ಗಾಯಗಳಾಗಿದ್ದ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.</p>.<p>ಮೃತ ರೈತ ಕುಡುಪಲಿ ಕೆವಿ.ಜಿ. ಬ್ಯಾಂಕಿನಲ್ಲಿ ಬೆಳೆ ಸಾಲ ಅಂತಾ ₹3 ಲಕ್ಷ, ಕೈಗಡ ಸಾಲ ₹7 ಲಕ್ಷ ಪಡೆದಿದ್ದರು. ಕಳೆದ ಎರಡು ವರ್ಷಗಳಿಂದ ಬೆಳೆ ಸರಿಯಾಗಿ ಬಾರದೆ ಸಾಲವನ್ನು ಹೇಗೆ ತೀರಿಸಬೇಕು ಎನ್ನುವ ಚಿಂತೆಯಲ್ಲಿ ಮುಳುಗಿದ್ದರು ಎಂದು ಮೃತ ರೈತನ ಪತ್ನಿ ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಟ್ಟೀಹಳ್ಳಿ</strong>: ತಾಲ್ಲೂಕಿನ ಬುಳ್ಳಾಪೂರ ಗ್ರಾಮದ ಮನೆಯಲ್ಲಿ ಅಡುಗೆ ಅನಿಲದ ಬೆಂಕಿಯಿಂದ ಜೂನ್ 18ರಂದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿ ಗಾಯಗೊಂಡಿದ್ದ ರೈತ ರಾಮಪ್ಪ ಹಾಲಪ್ಪ ಎಳೆಹೊಳೆ (55) ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.</p>.<p>ಬೆಂಕಿಯಿಂದಾಗಿ ಸುಟ್ಟ ಗಾಯಗಳಾಗಿದ್ದ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.</p>.<p>ಮೃತ ರೈತ ಕುಡುಪಲಿ ಕೆವಿ.ಜಿ. ಬ್ಯಾಂಕಿನಲ್ಲಿ ಬೆಳೆ ಸಾಲ ಅಂತಾ ₹3 ಲಕ್ಷ, ಕೈಗಡ ಸಾಲ ₹7 ಲಕ್ಷ ಪಡೆದಿದ್ದರು. ಕಳೆದ ಎರಡು ವರ್ಷಗಳಿಂದ ಬೆಳೆ ಸರಿಯಾಗಿ ಬಾರದೆ ಸಾಲವನ್ನು ಹೇಗೆ ತೀರಿಸಬೇಕು ಎನ್ನುವ ಚಿಂತೆಯಲ್ಲಿ ಮುಳುಗಿದ್ದರು ಎಂದು ಮೃತ ರೈತನ ಪತ್ನಿ ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>