2019ರ ಆಗಸ್ಟ್ನಲ್ಲಿ ಸುರಿದ ಅತಿವೃಷ್ಟಿ ಮತ್ತು ನೆರೆಯಿಂದ ಮನೆಯ ಗೋಡೆಗಳು ಕುಸಿದು ಬಿದ್ದು, ಚಾವಣಿಯಲ್ಲಿ ಬಿರುಕು ಮೂಡಿದ್ದವು. ಇವರ ಮನೆಯನ್ನು ಪರಿಶೀಲಿಸಿದ ಗ್ರಾಮ ಪಂಚಾಯ್ತಿ ಸಿಬ್ಬಂದಿ, ಶೇ 15ರಿಂದ 25ರಷ್ಟು ಹಾನಿಯಾಗಿದೆ ಎಂದು ಸಮೀಕ್ಷೆ ಮಾಡಿದ್ದರು. ನಂತರ ನೆರೆ ಪರಿಹಾರಧನಕ್ಕೆ ಅರ್ಹರಾಗಿದ್ದೀರಿ ಎಂದು ಅಕ್ಟೋಬರ್ನಲ್ಲಿ ಕಾಮಗಾರಿ ಆದೇಶ ಪತ್ರ ಕೂಡ ನೀಡಿದ್ದರು. ಆದರೆ, ಇದುವರೆಗೂ ಒಂದೇ ಒಂದು ರೂಪಾಯಿ ಕೂಡ ಇವರ ಕುಟುಂಬಕ್ಕೆ ಸಿಕ್ಕಿಲ್ಲ.