<p><strong>ಹಾವೇರಿ:</strong> ಇಲ್ಲಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಬೆಳಿಗ್ಗೆ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.</p><p>ನಂತರ, ಪೊಲೀಸ್ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಗೌರವ ರಕ್ಷೆ ಸ್ವೀಕರಿಸಿದರು.</p><p>ಸಮಾರಂಭದಲ್ಲಿ ವಿವಿಧ ದಳಗಳಿಂದ ಪಥಸಂಚಲನ ನಡೆಯಿತು. ಅತ್ಯುತ್ತಮ ಪಥಸಂಚಲನ ನಡೆಸಿದ ದಳಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.</p><p>ನಾಗೇಂದ್ರನಮಟ್ಟಿ ಪಿಎಂಶ್ರೀ ಉರ್ದು ಶಾಲೆ, ಮುನ್ಸಿಪಲ್ ಪ್ರೌಢಶಾಲೆ ವಿದ್ಯಾರ್ಥಿಗಳು, ದೇಶ ಪ್ರೇಮ ಗೀತೆಗೆ ಆಕರ್ಷಕ ನೃತ್ಯ ಪ್ರದರ್ಶಿಸಿದರು.</p><p>ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.</p><p>ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಿವಾನಂದ ಪಾಟೀಲ, 'ಸಂವಿಧಾನದ ಮೂಲಕ ಸಮಾನತೆಯ ರಥವನ್ನು ಇಲ್ಲಿಯವರೆಗೂ ಮುಂದಕ್ಕೆ ಎಳೆದುಕೊಂಡು ಬಂದಿದ್ದೇವೆ. ಇನ್ನು ಮುಂದೆಯೂ ಮುಂದಕ್ಕೆ ಎಳೆದುಕೊಂಡು ಹೋಗಬೇಕು. ಹಿಂದಕ್ಕೆ ತಳ್ಳುವ ಕೆಲಸ ಮಾಡಬಾರದು' ಎಂದರು.</p><p>'ಸಂವಿಧಾನದ ಶ್ರೇಷ್ಠತೆ, ಆಶಯಗಳನ್ನು ಪಾಲಿಸುವ ಹೊಣೆಗಾರಿಕೆ ನಮ್ಮದು. ಏಕತೆ, ಭ್ರಾತೃತ್ವ, ಜಾತ್ಯಾತೀತ ಮೌಲ್ಯಗಳನ್ನು ಎತ್ತಿ ಹಿಡಿಯಲು ನಾವೆಲ್ಲರೂ ಸಂಕಲ್ಪ ಮಾಡೋಣ' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಇಲ್ಲಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಬೆಳಿಗ್ಗೆ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.</p><p>ನಂತರ, ಪೊಲೀಸ್ ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಗೌರವ ರಕ್ಷೆ ಸ್ವೀಕರಿಸಿದರು.</p><p>ಸಮಾರಂಭದಲ್ಲಿ ವಿವಿಧ ದಳಗಳಿಂದ ಪಥಸಂಚಲನ ನಡೆಯಿತು. ಅತ್ಯುತ್ತಮ ಪಥಸಂಚಲನ ನಡೆಸಿದ ದಳಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.</p><p>ನಾಗೇಂದ್ರನಮಟ್ಟಿ ಪಿಎಂಶ್ರೀ ಉರ್ದು ಶಾಲೆ, ಮುನ್ಸಿಪಲ್ ಪ್ರೌಢಶಾಲೆ ವಿದ್ಯಾರ್ಥಿಗಳು, ದೇಶ ಪ್ರೇಮ ಗೀತೆಗೆ ಆಕರ್ಷಕ ನೃತ್ಯ ಪ್ರದರ್ಶಿಸಿದರು.</p><p>ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.</p><p>ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಿವಾನಂದ ಪಾಟೀಲ, 'ಸಂವಿಧಾನದ ಮೂಲಕ ಸಮಾನತೆಯ ರಥವನ್ನು ಇಲ್ಲಿಯವರೆಗೂ ಮುಂದಕ್ಕೆ ಎಳೆದುಕೊಂಡು ಬಂದಿದ್ದೇವೆ. ಇನ್ನು ಮುಂದೆಯೂ ಮುಂದಕ್ಕೆ ಎಳೆದುಕೊಂಡು ಹೋಗಬೇಕು. ಹಿಂದಕ್ಕೆ ತಳ್ಳುವ ಕೆಲಸ ಮಾಡಬಾರದು' ಎಂದರು.</p><p>'ಸಂವಿಧಾನದ ಶ್ರೇಷ್ಠತೆ, ಆಶಯಗಳನ್ನು ಪಾಲಿಸುವ ಹೊಣೆಗಾರಿಕೆ ನಮ್ಮದು. ಏಕತೆ, ಭ್ರಾತೃತ್ವ, ಜಾತ್ಯಾತೀತ ಮೌಲ್ಯಗಳನ್ನು ಎತ್ತಿ ಹಿಡಿಯಲು ನಾವೆಲ್ಲರೂ ಸಂಕಲ್ಪ ಮಾಡೋಣ' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>