<p><strong>ಸವಣೂರು (ಹಾವೇರಿ):</strong> ಪಟ್ಟಣದಲ್ಲಿ ಪಡಿತರ ಪಡೆಯಲು ಆರು ದಿನಗಳಿಂದ ಸರ್ವರ್ ಸಮಸ್ಯೆ ಉಂಟಾಗುತ್ತಿದ್ದು, ಇದರಿಂದ ಆಕ್ರೋಶಗೊಂಡ ಜನರು ತಹಶೀಲ್ದಾರ್ ಕಚೇರಿ ಎದುರು ಶುಕ್ರವಾರ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ಪಡಿತರ ಪಡೆಯಲೆಂದು ಜನರು ನ್ಯಾಯಬೆಲೆ ಅಂಗಡಿಗಳ ಮುಂದೆ ನಿರಂತರವಾಗಿ ಸರದಿಯಲ್ಲಿ ನಿಲ್ಲುತ್ತಿದ್ದಾರೆ. ಆದರೆ, ಸರ್ವರ್ ಸಮಸ್ಯೆ ಇರುವುದಾಗಿ ಸಿಬ್ಬಂದಿ ಹೇಳುತ್ತಿದ್ದಾರೆ. ಇದರಿಂದ ಜನರು ನೊಂದುಕೊಂಡು, ಮನೆಗಳಿಗೆ ವಾಪಸು ಹೋಗುವಂತಾಗಿದೆ. ಐದಾರು ದಿನ ಕಾದರೂ ಪಡಿತರ ಸಿಗದಿದ್ದಕ್ಕೆ ಜನರು ಆಕ್ರೋಶಗೊಂಡಿದ್ದಾರೆ.</p>.<p>‘ಸರ್ವರ್ ಸಮಸ್ಯೆಯಿದೆ. ನಿಮ್ಮ ಪಡಿತರದ ಬಿಲ್ ಆಗಿಲ್ಲ’ ಎಂಬ ಕಾರಣ ನೀಡಿ ನ್ಯಾಯಬೆಲೆ ಅಂಗಡಿಯವರು, ಜನರನ್ನು ವಾಪಸು ಕಳುಹಿಸುತ್ತಿದ್ದಾರೆ. ಇದರಿಂದ ಆಕ್ರೋಶಗೊಂಡ ಜನರು, ಶುಕ್ರವಾರ ತಹಶೀಲ್ದಾರ್ ಕಚೇರಿಗೆ ಬಂದು ಮುತ್ತಿಗೆ ಹಾಕಿದರು. ಸರ್ವರ್ ಸಮಸ್ಯೆ ಸರಿಪಡಿಸುವಂತೆ ಅಗ್ರಹಿಸಿದರು.</p>.<p>‘ಬೆಳಿಗ್ಗೆ 9 ಗಂಟೆಯವರೆಗೆ ಮಾತ್ರ ಸರ್ವರ್ ಸರಿಯಾಗಿರುತ್ತದೆ. ವಿತರಕರು ಬೆಳಿಗ್ಗೆ 9 ಗಂಟೆಗೆ ಅಂಗಡಿಗೆ ಬರುತ್ತಾರೆ. ಆ ನಂತರ, ಸರ್ವರ್ ಇಲ್ಲವೆಂದು ಹೇಳುತ್ತಿದ್ದಾರೆ. ನಾವು ನಿತ್ಯವೂ ನ್ಯಾಯಬೆಲೆ ಅಂಗಡಿಗಳಿಗೆ ಅಲೆದಾಡುವಂತಾಗಿದೆ. ಪಡಿತರ ವಿತರಣೆಗೆ ಕೇವಲ ಎರಡು ದಿನಗಳು ಮಾತ್ರ ಬಾಕಿ ಇರುವಾಗಲೂ ಅಧಿಕಾರಿಗಳು ಸಮಸ್ಯೆ ಪರಿಹರಿಸದೇ ನಿರ್ಲಕ್ಷ್ಯ ತೋರುತ್ತಿದ್ದಾರೆ’ ಎಂದು ಜನರು ದೂರಿದರು.</p>.<p>ಪ್ರತಿಭಟನಕಾರರ ಜೊತೆ ಮಾತುಕತೆ ನಡೆಸಿದ ತಹಶೀಲ್ದಾರ್ ರವಿಕುಮಾರ ಕೊರವರ, ‘ಸರ್ವರ್ ಸಮಸ್ಯೆ ಕುರಿತು ಈಗಾಗಲೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಕೆಲ ತಾಂತ್ರಿಕ ಕಾರಣಗಳಿಂದ ಸಮಸ್ಯೆಯಾಗಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಈ ತಿಂಗಳ ಕೊನೆಯ ದಿನದವರೆಗೆ ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಪಡಿತರ ವಿತರಣೆ ಮಾಡಲು ಸ್ಥಳದಲ್ಲಿದ್ದ ನ್ಯಾಯಬೆಲೆ ಅಂಗಡಿ ವಿತರಕರಿಗೆ ಸೂಚಿಸಲಾಗಿದೆ’ ಎಂದರು. ನಂತರ, ಜನರು ಪ್ರತಿಭಟನೆ ಕೈಬಿಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-22-1478342753</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವಣೂರು (ಹಾವೇರಿ):</strong> ಪಟ್ಟಣದಲ್ಲಿ ಪಡಿತರ ಪಡೆಯಲು ಆರು ದಿನಗಳಿಂದ ಸರ್ವರ್ ಸಮಸ್ಯೆ ಉಂಟಾಗುತ್ತಿದ್ದು, ಇದರಿಂದ ಆಕ್ರೋಶಗೊಂಡ ಜನರು ತಹಶೀಲ್ದಾರ್ ಕಚೇರಿ ಎದುರು ಶುಕ್ರವಾರ ದಿಢೀರ್ ಪ್ರತಿಭಟನೆ ನಡೆಸಿದರು.</p>.<p>ಪಡಿತರ ಪಡೆಯಲೆಂದು ಜನರು ನ್ಯಾಯಬೆಲೆ ಅಂಗಡಿಗಳ ಮುಂದೆ ನಿರಂತರವಾಗಿ ಸರದಿಯಲ್ಲಿ ನಿಲ್ಲುತ್ತಿದ್ದಾರೆ. ಆದರೆ, ಸರ್ವರ್ ಸಮಸ್ಯೆ ಇರುವುದಾಗಿ ಸಿಬ್ಬಂದಿ ಹೇಳುತ್ತಿದ್ದಾರೆ. ಇದರಿಂದ ಜನರು ನೊಂದುಕೊಂಡು, ಮನೆಗಳಿಗೆ ವಾಪಸು ಹೋಗುವಂತಾಗಿದೆ. ಐದಾರು ದಿನ ಕಾದರೂ ಪಡಿತರ ಸಿಗದಿದ್ದಕ್ಕೆ ಜನರು ಆಕ್ರೋಶಗೊಂಡಿದ್ದಾರೆ.</p>.<p>‘ಸರ್ವರ್ ಸಮಸ್ಯೆಯಿದೆ. ನಿಮ್ಮ ಪಡಿತರದ ಬಿಲ್ ಆಗಿಲ್ಲ’ ಎಂಬ ಕಾರಣ ನೀಡಿ ನ್ಯಾಯಬೆಲೆ ಅಂಗಡಿಯವರು, ಜನರನ್ನು ವಾಪಸು ಕಳುಹಿಸುತ್ತಿದ್ದಾರೆ. ಇದರಿಂದ ಆಕ್ರೋಶಗೊಂಡ ಜನರು, ಶುಕ್ರವಾರ ತಹಶೀಲ್ದಾರ್ ಕಚೇರಿಗೆ ಬಂದು ಮುತ್ತಿಗೆ ಹಾಕಿದರು. ಸರ್ವರ್ ಸಮಸ್ಯೆ ಸರಿಪಡಿಸುವಂತೆ ಅಗ್ರಹಿಸಿದರು.</p>.<p>‘ಬೆಳಿಗ್ಗೆ 9 ಗಂಟೆಯವರೆಗೆ ಮಾತ್ರ ಸರ್ವರ್ ಸರಿಯಾಗಿರುತ್ತದೆ. ವಿತರಕರು ಬೆಳಿಗ್ಗೆ 9 ಗಂಟೆಗೆ ಅಂಗಡಿಗೆ ಬರುತ್ತಾರೆ. ಆ ನಂತರ, ಸರ್ವರ್ ಇಲ್ಲವೆಂದು ಹೇಳುತ್ತಿದ್ದಾರೆ. ನಾವು ನಿತ್ಯವೂ ನ್ಯಾಯಬೆಲೆ ಅಂಗಡಿಗಳಿಗೆ ಅಲೆದಾಡುವಂತಾಗಿದೆ. ಪಡಿತರ ವಿತರಣೆಗೆ ಕೇವಲ ಎರಡು ದಿನಗಳು ಮಾತ್ರ ಬಾಕಿ ಇರುವಾಗಲೂ ಅಧಿಕಾರಿಗಳು ಸಮಸ್ಯೆ ಪರಿಹರಿಸದೇ ನಿರ್ಲಕ್ಷ್ಯ ತೋರುತ್ತಿದ್ದಾರೆ’ ಎಂದು ಜನರು ದೂರಿದರು.</p>.<p>ಪ್ರತಿಭಟನಕಾರರ ಜೊತೆ ಮಾತುಕತೆ ನಡೆಸಿದ ತಹಶೀಲ್ದಾರ್ ರವಿಕುಮಾರ ಕೊರವರ, ‘ಸರ್ವರ್ ಸಮಸ್ಯೆ ಕುರಿತು ಈಗಾಗಲೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಕೆಲ ತಾಂತ್ರಿಕ ಕಾರಣಗಳಿಂದ ಸಮಸ್ಯೆಯಾಗಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಈ ತಿಂಗಳ ಕೊನೆಯ ದಿನದವರೆಗೆ ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಪಡಿತರ ವಿತರಣೆ ಮಾಡಲು ಸ್ಥಳದಲ್ಲಿದ್ದ ನ್ಯಾಯಬೆಲೆ ಅಂಗಡಿ ವಿತರಕರಿಗೆ ಸೂಚಿಸಲಾಗಿದೆ’ ಎಂದರು. ನಂತರ, ಜನರು ಪ್ರತಿಭಟನೆ ಕೈಬಿಟ್ಟರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-22-1478342753</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>