ಹಾವೇರಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಹಾಗೂ ಡಿಸಿಸಿ ಬ್ಯಾಂಕ್ ಕನಸು ಕಂಡಿದ್ದೆ. ಹೋರಾಟವನ್ನೂ ಮಾಡಿದ್ದೆ. ಸಿ.ಎಂ. ಆಗಿದ್ದಾಗ ಹಾಲು ಒಕ್ಕೂಟ ಆಯಿತು. ಈಗ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಕನಸು ಈಡೇರುತ್ತಿದೆ
ಬಸವರಾಜ ಬೊಮ್ಮಾಯಿ ಸಂಸದ
ಕೇಂದ್ರ ಸರ್ಕಾರವು ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಘೋಷಣೆ ಮಾಡಿದರೆ ಬ್ಯಾಂಕ್ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ಸಿಗುವ ಭರವಸೆಯಿದೆ. ಅನುದಾನ ತರಲು ಒಗ್ಗಟ್ಟಿನಿಂದ ಪ್ರಯತ್ನಿಸುತ್ತೇವೆ
ಕೊಟ್ರೇಶಪ್ಪ ಬಸೇಗಣ್ಣಿ ಕೆಸಿಸಿ ಬ್ಯಾಂಕ್ ನಿರ್ದೇಶಕ
ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆಗೆ ಪ್ರಕ್ರಿಯೆ ಆರಂಭಿಸಿರುವುದು ಸ್ವಾಗತಾರ್ಹ. ಇದು ಕೇವಲ ಘೋಷಣೆಯಾಗದೇ ಅನುಷ್ಠಾನಕ್ಕೆ ಬರಬೇಕು. ರೈತರಿಗೆ ₹ 5 ಲಕ್ಷವರೆಗೂ ಸಾಲ ಸಿಗಬೇಕು