<p><strong>ಶಿಗ್ಗಾವಿ</strong>: ಸರ್ಕಾರಿ ಪ್ರೌಢಶಾಲೆ ನಿರ್ಮಾಣದ ಜಾಗಕ್ಕೆ ನಿರಾಕ್ಷೇಪಣ ಪತ್ರ ನೀಡಲು ಬನ್ನೂರ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಮುಗಳಿ ಗ್ರಾಮಸ್ಥರು ಶಿರಸ್ತೇದಾರ್ ವಿಶ್ವನಾಥ ತಿತ್ತಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.</p>.<p>ಗ್ರಾಮದಲ್ಲಿ 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆ ಮಂಜೂರಾಗಿದೆ. ಈ ಪ್ರೌಢಶಾಲೆ ತರಗತಿಗಳು ಪ್ರಾಥಮಿಕ ಶಾಲೆಯ ಕೊಠಡಿಗಳಲ್ಲಿ ಜರುಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರೌಢಶಾಲೆಗೆ ಪ್ರತ್ಯೇಕ ಕೊಠಡಿಗಳ ನಿರ್ಮಾಣದ ಅಗತ್ಯವಿದೆ. ಅದಕ್ಕಾಗಿ ಗ್ರಾಮದ ಸರ್ವೇ ನಂಬರ್ 95ರಲ್ಲಿ ಸಾಮಾಜಿಕ ಅರಣ್ಯ ಇಲಾಖೆಗೆ ಒಳಪಡುವ ಖಾಲಿ ಜಾಗವಿದೆ. ಈ ಜಾಗೆಯ ಎರಡೂವರೆ ಎಕರೆ ವಿಸ್ತೀರ್ಣದಷ್ಟು ಖುಲ್ಲಾ ಜಾಗೆಯನ್ನು ಪ್ರೌಢಶಾಲೆಗೆ ಒದಗಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಮೌಖಿಕವಾಗಿ ಒಪ್ಪಿರುವರು. ತಾವು ಬನ್ನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈ ಅರಣ್ಯ ಜಾಗೆಗೆ ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿಗಳಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರಾಕ್ಷೇಪಣ ಪತ್ರ ನೀಡುವಂತೆ ಸೂಚಿಸಬೇಕು ಆಗ್ರಹಿಸಿದರು.</p>.<p>ಗ್ರಾಮದ ಮುಖಂಡರಾದ ಬಸಪ್ಪ ಭದ್ರಶೆಟ್ಟಿ, ಯಲ್ಲಪ್ಪ ಅರಳಿಕಟ್ಟಿ, ಮಹಾದೇವಪ್ಪ ಕಾಮನಹಳ್ಳಿ, ಬಸನಗೌಡ ಪಾಟೀಲ, ನಿಂಗಪ್ಪ ಸಕ್ರಿ ಸೇರಿದಂತೆ ಗ್ರಾಮದ ಹಲವು ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-22-479262384</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ</strong>: ಸರ್ಕಾರಿ ಪ್ರೌಢಶಾಲೆ ನಿರ್ಮಾಣದ ಜಾಗಕ್ಕೆ ನಿರಾಕ್ಷೇಪಣ ಪತ್ರ ನೀಡಲು ಬನ್ನೂರ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಮುಗಳಿ ಗ್ರಾಮಸ್ಥರು ಶಿರಸ್ತೇದಾರ್ ವಿಶ್ವನಾಥ ತಿತ್ತಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.</p>.<p>ಗ್ರಾಮದಲ್ಲಿ 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆ ಮಂಜೂರಾಗಿದೆ. ಈ ಪ್ರೌಢಶಾಲೆ ತರಗತಿಗಳು ಪ್ರಾಥಮಿಕ ಶಾಲೆಯ ಕೊಠಡಿಗಳಲ್ಲಿ ಜರುಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರೌಢಶಾಲೆಗೆ ಪ್ರತ್ಯೇಕ ಕೊಠಡಿಗಳ ನಿರ್ಮಾಣದ ಅಗತ್ಯವಿದೆ. ಅದಕ್ಕಾಗಿ ಗ್ರಾಮದ ಸರ್ವೇ ನಂಬರ್ 95ರಲ್ಲಿ ಸಾಮಾಜಿಕ ಅರಣ್ಯ ಇಲಾಖೆಗೆ ಒಳಪಡುವ ಖಾಲಿ ಜಾಗವಿದೆ. ಈ ಜಾಗೆಯ ಎರಡೂವರೆ ಎಕರೆ ವಿಸ್ತೀರ್ಣದಷ್ಟು ಖುಲ್ಲಾ ಜಾಗೆಯನ್ನು ಪ್ರೌಢಶಾಲೆಗೆ ಒದಗಿಸಲು ಅರಣ್ಯ ಇಲಾಖೆಯ ಅಧಿಕಾರಿಗಳು ಮೌಖಿಕವಾಗಿ ಒಪ್ಪಿರುವರು. ತಾವು ಬನ್ನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈ ಅರಣ್ಯ ಜಾಗೆಗೆ ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿಗಳಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರಾಕ್ಷೇಪಣ ಪತ್ರ ನೀಡುವಂತೆ ಸೂಚಿಸಬೇಕು ಆಗ್ರಹಿಸಿದರು.</p>.<p>ಗ್ರಾಮದ ಮುಖಂಡರಾದ ಬಸಪ್ಪ ಭದ್ರಶೆಟ್ಟಿ, ಯಲ್ಲಪ್ಪ ಅರಳಿಕಟ್ಟಿ, ಮಹಾದೇವಪ್ಪ ಕಾಮನಹಳ್ಳಿ, ಬಸನಗೌಡ ಪಾಟೀಲ, ನಿಂಗಪ್ಪ ಸಕ್ರಿ ಸೇರಿದಂತೆ ಗ್ರಾಮದ ಹಲವು ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-22-479262384</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>