<p>ಹಾವೇರಿ: ಶಿಗ್ಗಾವಿ ತಾಲ್ಲೂಕಿನ ಹುಲಿಕಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಡುಗೆ ಕೊಠಡಿಯಲ್ಲಿದ್ದ ಎಲ್ಪಿಜಿ ಸಿಲಿಂಡರ್ ಕಳ್ಳತನವಾಗಿದ್ದು, ಈ ಸಂಬಂಧ ಬಂಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಶಾಲೆಯ ಶಿಕ್ಷಕ ಪ್ರಶಾಂತ ವಡಕನಗೌಡ ಮರಿಗೌಡ್ರ ಅವರು ಸಿಲಿಂಡರ್ ಕಳ್ಳತನ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಬಂಕಾಪುರ– ಹುನಗುಂದ ರಸ್ತೆಗೆ ಹೊಂದಿಕೊಂಡು ಶಾಲೆಯಿದೆ. ಅಡುಗೆ ಕೊಠಡಿಗೆ ಹಾಕಿದ್ದ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ₹ 2,400 ಮೌಲ್ಯದ ಎಚ್.ಪಿ. ಕಂಪನಿಯ ಸಿಲಿಂಡರ್ ಕದ್ದೊಯ್ದಿದ್ದಾರೆ’ ಎಂದರು.</p>.<p>ಬ್ಯಾಡಗಿ: ತಾಲ್ಲೂಕಿನ ಹೊಸ ಶಿಡೇನೂರ ಗ್ರಾಮದ ಮನೆಯಲ್ಲಿ ಬುಧವಾರ ಅಭಿಷೇಕ ಅಶೋಕ ತೆವರಿ (22) ಹೊಸ ಪ್ಯಾನ್ ಜೋಡಿಸಲು ಮುಂದಾದಾಗ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.</p>.<p>ಯುಪಿಎಸ್ ಅಳವಡಿಸಿದ್ದರಿಂದಅದನ್ನು ಗಮನಿಸದೆ ಪ್ಯಾನ್ ಜೋಡಿಸಲು ಮುಂದಾದಾಗ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-22-1093383222</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ಶಿಗ್ಗಾವಿ ತಾಲ್ಲೂಕಿನ ಹುಲಿಕಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಡುಗೆ ಕೊಠಡಿಯಲ್ಲಿದ್ದ ಎಲ್ಪಿಜಿ ಸಿಲಿಂಡರ್ ಕಳ್ಳತನವಾಗಿದ್ದು, ಈ ಸಂಬಂಧ ಬಂಕಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಶಾಲೆಯ ಶಿಕ್ಷಕ ಪ್ರಶಾಂತ ವಡಕನಗೌಡ ಮರಿಗೌಡ್ರ ಅವರು ಸಿಲಿಂಡರ್ ಕಳ್ಳತನ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಬಂಕಾಪುರ– ಹುನಗುಂದ ರಸ್ತೆಗೆ ಹೊಂದಿಕೊಂಡು ಶಾಲೆಯಿದೆ. ಅಡುಗೆ ಕೊಠಡಿಗೆ ಹಾಕಿದ್ದ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ₹ 2,400 ಮೌಲ್ಯದ ಎಚ್.ಪಿ. ಕಂಪನಿಯ ಸಿಲಿಂಡರ್ ಕದ್ದೊಯ್ದಿದ್ದಾರೆ’ ಎಂದರು.</p>.<p>ಬ್ಯಾಡಗಿ: ತಾಲ್ಲೂಕಿನ ಹೊಸ ಶಿಡೇನೂರ ಗ್ರಾಮದ ಮನೆಯಲ್ಲಿ ಬುಧವಾರ ಅಭಿಷೇಕ ಅಶೋಕ ತೆವರಿ (22) ಹೊಸ ಪ್ಯಾನ್ ಜೋಡಿಸಲು ಮುಂದಾದಾಗ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.</p>.<p>ಯುಪಿಎಸ್ ಅಳವಡಿಸಿದ್ದರಿಂದಅದನ್ನು ಗಮನಿಸದೆ ಪ್ಯಾನ್ ಜೋಡಿಸಲು ಮುಂದಾದಾಗ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-22-1093383222</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>