‘ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಂಜುನಾಥ ಅಲಿಯಾಸ್ಮಲ್ಲಿಕ್ ಪಾಟೀಲನನ್ನು ಮೇ 19ರಂದು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಈತನ ಹೇಳಿಕೆಯ ಆಧಾರದ ಮೇಲೆ 8 ಸಿಬ್ಬಂದಿಯನ್ನೊಳಗೊಂಡ ವಿಶೇಷ ತಂಡ ಬಿಹಾರದಲ್ಲಿ ಶೋಧ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ, ಹಾವೇರಿಗೆ ಕರೆ ತರುತ್ತಿದೆ. ತನಿಖಾ ತಂಡದ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಿಜಿಪಿ ಪ್ರವೀಣ್ ಸೂದ್ ಅವರು ತಂಡಕ್ಕೆ ₹1 ಲಕ್ಷ ಬಹುಮಾನ ಘೋಷಿಸಿದ್ದಾರೆ’ ಎಂದು ಎಎಸ್ಪಿ ವಿಜಯಕುಮಾರ ಸಂತೋಷ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ.