<p><strong>ಹಾವೇರಿ</strong>: ‘ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ಸೇವನೆಯು ಜೀವನ ರಕ್ಷಣೆಯ ಸಂಜೀವಿನಿಯಾಗಿದೆ. ನವಣೆ, ಸಾಮೆ, ಹಾರಕ, ಬರಗು, ಊದಲು, ರಾಗಿ ಮತ್ತು ಜೋಳ ಬಳಕೆಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಮಧುಮೇಹಿಗಳಿಗೆ ಇವು ಸಿದ್ದೌಷಧಗಳು’ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.</p>.<p>ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ಅಂತರರಾಷ್ಟ್ರೀಯ ವಾಣಿಜ್ಯ ಮೇಳ–2026’ರ ಅಂಗವಾಗಿ ಕೃಷಿ ಇಲಾಖೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ‘ಸಿರಿಧಾನ್ಯ ಜಾಥಾ ಕಾರ್ಯಕ್ರಮ’ದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಆರೋಗ್ಯಯುತ ಜೀವನಕ್ಕೆ ಆಹಾರ ಕ್ರಮ ಅತೀ ಮುಖ್ಯ. ಸರಿಯಾದ ಆಹಾರ ಪದ್ಧತಿಯಿಂದ ಸಮತೋಲನ ಜೀವನ ನಡೆಸಲು ಸಾಧ್ಯ. ಆಹಾರಗಳಲ್ಲಿ ಸಿರಿಧಾನ್ಯಗಳ ಪಾತ್ರ ಬಹುಮುಖ್ಯವಾಗಿದೆ. ಇಂದಿನ ಪೀಳಿಗೆ ಫಾಸ್ಟ್ ಫುಡ್ನಿಂದ ಕುಗ್ಗುತ್ತಿದೆ. ಅವರಲ್ಲಿ ಆಹಾರದ ಜಾಗೃತಿ ಮೂಡಿಸಬೇಕಿದೆ’ ಎಂದರು.</p>.<p>ಶಿವಬಸವ ಸ್ವಾಮೀಜಿ, ಮೃತ್ಯುಂಜಯ ಸ್ವಾಮೀಜಿ, ಶಿವಲಿಂಗ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿ.ಪಂ. ಸಿಇಒ ರುಚಿ ಬಿಂದಲ್, ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ ಎಲ್. ಇದ್ದರು.</p>.<p>ಹಾವೇರಿಯ ಪ್ರವಾಸಿ ಮಂದಿರದಿಂದ ನಗರದ ವಿವಿಧ ರಸ್ತೆಗಳಲ್ಲಿ ಸಿರಿಧಾನ್ಯ ಜಾಗೃತಿ ನಡಿಗೆ ನಡೆಯಿತು.</p>.<p>ಸಿರಿಧಾನ್ಯಗಳಿಂದ ತಯಾರಿಸಿದ ತಿನಿಸುಗಳ ಸ್ಪರ್ಧೆ ನಡೆಯಿತು. ಸಿರಿಧಾನ್ಯ ಸಿಹಿ ತಿನಿಸು ವಿಭಾಗದಲ್ಲಿ ಶೇಕಣ್ಣ ಬತ್ತಿಕೊಪ್ಪ (ಪ್ರಥಮ), ರತ್ನಾ ಬುಡ್ಡನಗೌಡ್ರ (ದ್ವಿತೀಯ) ಹಾಗೂ ಲಕ್ಷ್ಮೀ ಕಮ್ಮಾರ (ತೃತೀಯ) ಸ್ಥಾನ ಪಡೆದರು.</p>.<p>ಸಿರಿಧಾನ್ಯ ಖಾರ ತಿನಿಸು ವಿಭಾಗದಲ್ಲಿ ಈರಣ್ಣ ಹುಲಗಚ್ಚ (ಪ್ರಥಮ), ಮಧುರಾ ನವುಲಿ (ದ್ವಿತೀಯ), ಸೃಷ್ಟಿ ಕೆಂಡದಮಠ (ತೃತೀಯ), ಮರೆತುಹೊದ ಖಾದ್ಯ ವಿಭಾಗದಲ್ಲಿ ಮಾಲತೇಶ ಶಿಡಗನಾಳ (ಪ್ರಥಮ), ರೂಪಾ ತೋಟದ (ದ್ವಿತೀಯ) ಹಾಗೂ ಗೀತಾ ಹಡಪದ (ತೃತೀಯ) ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ‘ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ಸೇವನೆಯು ಜೀವನ ರಕ್ಷಣೆಯ ಸಂಜೀವಿನಿಯಾಗಿದೆ. ನವಣೆ, ಸಾಮೆ, ಹಾರಕ, ಬರಗು, ಊದಲು, ರಾಗಿ ಮತ್ತು ಜೋಳ ಬಳಕೆಯಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಮಧುಮೇಹಿಗಳಿಗೆ ಇವು ಸಿದ್ದೌಷಧಗಳು’ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.</p>.<p>ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ಅಂತರರಾಷ್ಟ್ರೀಯ ವಾಣಿಜ್ಯ ಮೇಳ–2026’ರ ಅಂಗವಾಗಿ ಕೃಷಿ ಇಲಾಖೆ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ‘ಸಿರಿಧಾನ್ಯ ಜಾಥಾ ಕಾರ್ಯಕ್ರಮ’ದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ಆರೋಗ್ಯಯುತ ಜೀವನಕ್ಕೆ ಆಹಾರ ಕ್ರಮ ಅತೀ ಮುಖ್ಯ. ಸರಿಯಾದ ಆಹಾರ ಪದ್ಧತಿಯಿಂದ ಸಮತೋಲನ ಜೀವನ ನಡೆಸಲು ಸಾಧ್ಯ. ಆಹಾರಗಳಲ್ಲಿ ಸಿರಿಧಾನ್ಯಗಳ ಪಾತ್ರ ಬಹುಮುಖ್ಯವಾಗಿದೆ. ಇಂದಿನ ಪೀಳಿಗೆ ಫಾಸ್ಟ್ ಫುಡ್ನಿಂದ ಕುಗ್ಗುತ್ತಿದೆ. ಅವರಲ್ಲಿ ಆಹಾರದ ಜಾಗೃತಿ ಮೂಡಿಸಬೇಕಿದೆ’ ಎಂದರು.</p>.<p>ಶಿವಬಸವ ಸ್ವಾಮೀಜಿ, ಮೃತ್ಯುಂಜಯ ಸ್ವಾಮೀಜಿ, ಶಿವಲಿಂಗ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿ.ಪಂ. ಸಿಇಒ ರುಚಿ ಬಿಂದಲ್, ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ ಎಲ್. ಇದ್ದರು.</p>.<p>ಹಾವೇರಿಯ ಪ್ರವಾಸಿ ಮಂದಿರದಿಂದ ನಗರದ ವಿವಿಧ ರಸ್ತೆಗಳಲ್ಲಿ ಸಿರಿಧಾನ್ಯ ಜಾಗೃತಿ ನಡಿಗೆ ನಡೆಯಿತು.</p>.<p>ಸಿರಿಧಾನ್ಯಗಳಿಂದ ತಯಾರಿಸಿದ ತಿನಿಸುಗಳ ಸ್ಪರ್ಧೆ ನಡೆಯಿತು. ಸಿರಿಧಾನ್ಯ ಸಿಹಿ ತಿನಿಸು ವಿಭಾಗದಲ್ಲಿ ಶೇಕಣ್ಣ ಬತ್ತಿಕೊಪ್ಪ (ಪ್ರಥಮ), ರತ್ನಾ ಬುಡ್ಡನಗೌಡ್ರ (ದ್ವಿತೀಯ) ಹಾಗೂ ಲಕ್ಷ್ಮೀ ಕಮ್ಮಾರ (ತೃತೀಯ) ಸ್ಥಾನ ಪಡೆದರು.</p>.<p>ಸಿರಿಧಾನ್ಯ ಖಾರ ತಿನಿಸು ವಿಭಾಗದಲ್ಲಿ ಈರಣ್ಣ ಹುಲಗಚ್ಚ (ಪ್ರಥಮ), ಮಧುರಾ ನವುಲಿ (ದ್ವಿತೀಯ), ಸೃಷ್ಟಿ ಕೆಂಡದಮಠ (ತೃತೀಯ), ಮರೆತುಹೊದ ಖಾದ್ಯ ವಿಭಾಗದಲ್ಲಿ ಮಾಲತೇಶ ಶಿಡಗನಾಳ (ಪ್ರಥಮ), ರೂಪಾ ತೋಟದ (ದ್ವಿತೀಯ) ಹಾಗೂ ಗೀತಾ ಹಡಪದ (ತೃತೀಯ) ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>