<p><strong>ಹಾವೇರಿ: ‘ಸ</strong>ಮಾಜದಲ್ಲಿ ಯಾವುದೂ ಏಕಾಏಕಿ ಸುಲಭವಾಗಿ ಸಿಗುವುದಿಲ್ಲ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯಾವುದೇ ಸಮಸ್ಯೆ ಹಾಗೂ ಸವಾಲು ಬಂದರೂ ಅವುಗಳನ್ನು ಧೈರ್ಯವಾಗಿ ಎದುರಿಸಬೇಕು. ನಿರ್ದಿಷ್ಟ ಗುರಿ ಇಟ್ಟುಕೊಂಡು, ಅದನ್ನು ತಲುಪುವ ಶಪಥ ಮಾಡಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್ ಹೇಳಿದರು.</p>.<p>ನಗರದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ‘ಪಿಯು ದ್ವಿತೀಯ ವರ್ಷದ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿ ಜೀವನವು, ಭವಿಷ್ಯವನ್ನು ಕಟ್ಟಿಕೊಳ್ಳಲು ಅತ್ಯಂತ ಶ್ರೇಷ್ಠ ಸಮಯವಾಗಿದೆ. ಈ ಸಮಯದಲ್ಲಿ ಉನ್ನತ ಗುರಿಯೊಂದಿಗೆ ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ, ಸುಲಭವಾಗಿ ಗುರಿ ತಲುಪಬಹುದು’ ಎಂದರು.</p>.<p>‘ನಮ್ಮ ಕನಸುಗಳನ್ನು ಬೆನ್ನತ್ತಿ ಹೋಗುವಾಗ, ಕುಟುಂಬದ ಆರ್ಥಿಕ ಪರಿಸ್ಥಿತಿಯು ಗಂಭೀರವಾದ ಪರಿಣಾಮ ಬೀರುತ್ತದೆ. ಆದರೆ, ಶಿಸ್ತುಬದ್ಧ ಅಧ್ಯಯನದಿಂದ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದರೆ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಬಹುದು. ಜೀವನದಲ್ಲಿ ಸಾಧನೆ ಮಾಡಿದ ಸಾಧಕರನ್ನು ಪ್ರೇರಣೆಯಾಗಿ ಇಟ್ಟುಕೊಂಡು, ಅಧ್ಯಯನದಲ್ಲಿ ಮುನ್ನಡೆಯಬೇಕು’ ಎಂದರು.</p>.<p>ಉಪನ್ಯಾಸ ನೀಡಿದ ಡಾ. ಉಮಾ ಬಳಿಗಾರ, ‘ಪಿಯುಸಿ ನಂತರ ವಿವಿಧ ಕೋರ್ಸ್ಗಳನ್ನು ಮಾಡಬಹುದು. ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ತಕ್ಕಂತೆ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು, ಆಯಾ ಕ್ಷೇತ್ರಗಳಲ್ಲಿ ಹೆಸರು ಮಾಡಬೇಕು’ ಎಂದರು.</p>.<p>ಪಿಯು ದ್ವಿತೀಯ ವರ್ಷದ ಪರೀಕ್ಷೆಯ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.</p>.<p>ಪ್ರಭಾಕರರಾವ್ ಮಂಗಳೂರು ಅಧ್ಯಕ್ಷತೆ ವಹಿಸಿದ್ದರು. ಶೇಖರ ಭಜಂತ್ರಿ, ಸತೀಶ ಕುಲಕರ್ಣಿ, ಮಲ್ಲೇಶ ಕರಿಗಾರ, ಮಂಜುನಾಥ ಹಟ್ಟಿ, ಫಕೀರಮ್ಮ ಬಾರ್ಕಿ, ರವಿಕುಮಾರ, ಸಾವಿತ್ರಿ ಬಾರ್ಕಿ, ಅನಿತಾ ಹರನಗಿರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-22-900935746</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: ‘ಸ</strong>ಮಾಜದಲ್ಲಿ ಯಾವುದೂ ಏಕಾಏಕಿ ಸುಲಭವಾಗಿ ಸಿಗುವುದಿಲ್ಲ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಯಾವುದೇ ಸಮಸ್ಯೆ ಹಾಗೂ ಸವಾಲು ಬಂದರೂ ಅವುಗಳನ್ನು ಧೈರ್ಯವಾಗಿ ಎದುರಿಸಬೇಕು. ನಿರ್ದಿಷ್ಟ ಗುರಿ ಇಟ್ಟುಕೊಂಡು, ಅದನ್ನು ತಲುಪುವ ಶಪಥ ಮಾಡಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್ ಹೇಳಿದರು.</p>.<p>ನಗರದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ‘ಪಿಯು ದ್ವಿತೀಯ ವರ್ಷದ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿ ಜೀವನವು, ಭವಿಷ್ಯವನ್ನು ಕಟ್ಟಿಕೊಳ್ಳಲು ಅತ್ಯಂತ ಶ್ರೇಷ್ಠ ಸಮಯವಾಗಿದೆ. ಈ ಸಮಯದಲ್ಲಿ ಉನ್ನತ ಗುರಿಯೊಂದಿಗೆ ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ, ಸುಲಭವಾಗಿ ಗುರಿ ತಲುಪಬಹುದು’ ಎಂದರು.</p>.<p>‘ನಮ್ಮ ಕನಸುಗಳನ್ನು ಬೆನ್ನತ್ತಿ ಹೋಗುವಾಗ, ಕುಟುಂಬದ ಆರ್ಥಿಕ ಪರಿಸ್ಥಿತಿಯು ಗಂಭೀರವಾದ ಪರಿಣಾಮ ಬೀರುತ್ತದೆ. ಆದರೆ, ಶಿಸ್ತುಬದ್ಧ ಅಧ್ಯಯನದಿಂದ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದರೆ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಬಹುದು. ಜೀವನದಲ್ಲಿ ಸಾಧನೆ ಮಾಡಿದ ಸಾಧಕರನ್ನು ಪ್ರೇರಣೆಯಾಗಿ ಇಟ್ಟುಕೊಂಡು, ಅಧ್ಯಯನದಲ್ಲಿ ಮುನ್ನಡೆಯಬೇಕು’ ಎಂದರು.</p>.<p>ಉಪನ್ಯಾಸ ನೀಡಿದ ಡಾ. ಉಮಾ ಬಳಿಗಾರ, ‘ಪಿಯುಸಿ ನಂತರ ವಿವಿಧ ಕೋರ್ಸ್ಗಳನ್ನು ಮಾಡಬಹುದು. ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ತಕ್ಕಂತೆ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಂಡು, ಆಯಾ ಕ್ಷೇತ್ರಗಳಲ್ಲಿ ಹೆಸರು ಮಾಡಬೇಕು’ ಎಂದರು.</p>.<p>ಪಿಯು ದ್ವಿತೀಯ ವರ್ಷದ ಪರೀಕ್ಷೆಯ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.</p>.<p>ಪ್ರಭಾಕರರಾವ್ ಮಂಗಳೂರು ಅಧ್ಯಕ್ಷತೆ ವಹಿಸಿದ್ದರು. ಶೇಖರ ಭಜಂತ್ರಿ, ಸತೀಶ ಕುಲಕರ್ಣಿ, ಮಲ್ಲೇಶ ಕರಿಗಾರ, ಮಂಜುನಾಥ ಹಟ್ಟಿ, ಫಕೀರಮ್ಮ ಬಾರ್ಕಿ, ರವಿಕುಮಾರ, ಸಾವಿತ್ರಿ ಬಾರ್ಕಿ, ಅನಿತಾ ಹರನಗಿರಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-22-900935746</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>