<p><strong>ಹಾವೇರಿ:</strong> ಸಹಕಾರಿ ಕ್ಷೇತ್ರದಲ್ಲಿ ಇಪ್ಪತ್ತೈದು ವರ್ಷ ಪೂರೈಸಿರುವ ಸುಕೋ ಬ್ಯಾಂಕ್ ತನ್ನ ಬೆಳ್ಳಿ ಹಬ್ಬದ ಅಂಗವಾಗಿ ನಗರದ ಶಿವಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜ.8 ರಂದು ಸಂಜೆ 5.30ಕ್ಕೆ ‘ಸುಕೋ ಸಂಜೆ’ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬ್ಯಾಂಕ್ ಅಧ್ಯಕ್ಷ ಮೋಹಿತ್ ಮಸ್ಕಿ ಹೇಳಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,ಬ್ಯಾಂಕ್ನ ಬೆಳ್ಳಿ ಹಬ್ಬದ ಸಂಭ್ರಮವನ್ನು ನಮ್ಮ ಎಲ್ಲಾ 28 ಶಾಖೆಗಳ ಗ್ರಾಹಕರೊಂದಿಗೆ ಸಂಭ್ರಮಿಸುವ ಉದ್ದೇಶದಿಂದ ಪ್ರತಿ ಶಾಖೆಯಲ್ಲೂ `ಸುಕೋ ಸಂಜೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾಂಸ್ಕೃತಿಕ ಸಂಜೆಯಲ್ಲಿ ಹಾಸ್ಯನಟ ಯಶವಂತ ಸರದೇಶಪಾಂಡೆ ಅವರ ಏಕವ್ಯಕ್ತಿ ಅಭಿನಯದ ‘ರಾಶಿಚಕ್ರ’ ಹಾಸ್ಯ ರಂಗಪ್ರಯೋಗ ಪ್ರದರ್ಶನಗೊಳ್ಳಲಿದೆ ಎಂದರು.</p>.<p>ಶಾಸಕರಾದ ನೆಹರು ಓಲೇಕಾರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುಕೋ ಬ್ಯಾಂಕ್ ಕೇವಲ ವ್ಯವಹಾರಕ್ಕೆ ಮಾತ್ರ ಸೀಮಿತಗೊಳ್ಳದೇ, ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುತ್ತಿದೆ. ಅಲ್ಲದೆ, ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಕ್ರಿಯವಾಗಿದೆ. 2018-19ರ ಆರ್ಥಿಕ ಸಾಲಿನಲ್ಲಿ ಒಟ್ಟು ₹1,125 ಕೋಟಿ ವ್ಯವಹಾರ ನಡೆಸಿ, ₹4.5 ಕೋಟಿ ನಿವ್ವಳ ಗಳಿಕೆ ಮಾಡಿದೆ ಎಂದರು.</p>.<p>ಬೆಳ್ಳಿ ಹಬ್ಬದ ಅಂಗವಾಗಿ ‘ಸುಕೋ ಸೋಲಾರ್ ಶಕ್ತಿ’ ಎಂಬ ಯೋಜನೆಯನ್ನು ತರಲಾಗಿದೆ. ಇದರ ಅಡಿಯಲ್ಲಿ ಆಯ್ದ ಸೋಲಾರ್ ಮಾರಾಟಗಾರರಿಂದ ಗ್ರಾಹಕರಿಗೆ ಮಾರುಕಟ್ಟೆ ಬೆಲೆಗಿಂತಲೂ ಶೇ 15 ರಿಂದ 20 ಕಡಿಮೆ ಬೆಲೆಯಲ್ಲಿ ಸೋಲಾರ್ ಪ್ಯಾನಲ್ಗಳನ್ನು ಒದಗಿಸಲಿದೆ ಎಂದರು.</p>.<p>1 ಕಿಲೋ ವ್ಯಾಟ್ ಉತ್ಪಾದಿಸುವ ಸೋಲಾರ್ ಅಳವಡಿಸಿಕೊಂಡು ₹872 ತಿಂಗಳ ಕಂತುಗಳಲ್ಲಿ ಸಾಲ ಮರುಪಾವತಿಸಲು ಅನುಕೂಲ ಕಲ್ಪಿಸಿದೆ. ಇದರ ಲಾಭವನ್ನು ಸುಕೋ ಬ್ಯಾಂಕ್ ಗ್ರಾಹಕರು ಪಡೆದುಕೊಳ್ಳಬಹುದಾಗಿದೆ ಎಂದರು. ರಾಣೆಬೆನ್ನೂರು ಶಾಖೆಯ ವ್ಯವಸ್ಥಾಪಕ ಮಧುಚಂದ್ರ, ನವೀನರಾಜ್ ಕಟ್ಟೀಮನಿಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಸಹಕಾರಿ ಕ್ಷೇತ್ರದಲ್ಲಿ ಇಪ್ಪತ್ತೈದು ವರ್ಷ ಪೂರೈಸಿರುವ ಸುಕೋ ಬ್ಯಾಂಕ್ ತನ್ನ ಬೆಳ್ಳಿ ಹಬ್ಬದ ಅಂಗವಾಗಿ ನಗರದ ಶಿವಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜ.8 ರಂದು ಸಂಜೆ 5.30ಕ್ಕೆ ‘ಸುಕೋ ಸಂಜೆ’ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬ್ಯಾಂಕ್ ಅಧ್ಯಕ್ಷ ಮೋಹಿತ್ ಮಸ್ಕಿ ಹೇಳಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,ಬ್ಯಾಂಕ್ನ ಬೆಳ್ಳಿ ಹಬ್ಬದ ಸಂಭ್ರಮವನ್ನು ನಮ್ಮ ಎಲ್ಲಾ 28 ಶಾಖೆಗಳ ಗ್ರಾಹಕರೊಂದಿಗೆ ಸಂಭ್ರಮಿಸುವ ಉದ್ದೇಶದಿಂದ ಪ್ರತಿ ಶಾಖೆಯಲ್ಲೂ `ಸುಕೋ ಸಂಜೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾಂಸ್ಕೃತಿಕ ಸಂಜೆಯಲ್ಲಿ ಹಾಸ್ಯನಟ ಯಶವಂತ ಸರದೇಶಪಾಂಡೆ ಅವರ ಏಕವ್ಯಕ್ತಿ ಅಭಿನಯದ ‘ರಾಶಿಚಕ್ರ’ ಹಾಸ್ಯ ರಂಗಪ್ರಯೋಗ ಪ್ರದರ್ಶನಗೊಳ್ಳಲಿದೆ ಎಂದರು.</p>.<p>ಶಾಸಕರಾದ ನೆಹರು ಓಲೇಕಾರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುಕೋ ಬ್ಯಾಂಕ್ ಕೇವಲ ವ್ಯವಹಾರಕ್ಕೆ ಮಾತ್ರ ಸೀಮಿತಗೊಳ್ಳದೇ, ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುತ್ತಿದೆ. ಅಲ್ಲದೆ, ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಕ್ರಿಯವಾಗಿದೆ. 2018-19ರ ಆರ್ಥಿಕ ಸಾಲಿನಲ್ಲಿ ಒಟ್ಟು ₹1,125 ಕೋಟಿ ವ್ಯವಹಾರ ನಡೆಸಿ, ₹4.5 ಕೋಟಿ ನಿವ್ವಳ ಗಳಿಕೆ ಮಾಡಿದೆ ಎಂದರು.</p>.<p>ಬೆಳ್ಳಿ ಹಬ್ಬದ ಅಂಗವಾಗಿ ‘ಸುಕೋ ಸೋಲಾರ್ ಶಕ್ತಿ’ ಎಂಬ ಯೋಜನೆಯನ್ನು ತರಲಾಗಿದೆ. ಇದರ ಅಡಿಯಲ್ಲಿ ಆಯ್ದ ಸೋಲಾರ್ ಮಾರಾಟಗಾರರಿಂದ ಗ್ರಾಹಕರಿಗೆ ಮಾರುಕಟ್ಟೆ ಬೆಲೆಗಿಂತಲೂ ಶೇ 15 ರಿಂದ 20 ಕಡಿಮೆ ಬೆಲೆಯಲ್ಲಿ ಸೋಲಾರ್ ಪ್ಯಾನಲ್ಗಳನ್ನು ಒದಗಿಸಲಿದೆ ಎಂದರು.</p>.<p>1 ಕಿಲೋ ವ್ಯಾಟ್ ಉತ್ಪಾದಿಸುವ ಸೋಲಾರ್ ಅಳವಡಿಸಿಕೊಂಡು ₹872 ತಿಂಗಳ ಕಂತುಗಳಲ್ಲಿ ಸಾಲ ಮರುಪಾವತಿಸಲು ಅನುಕೂಲ ಕಲ್ಪಿಸಿದೆ. ಇದರ ಲಾಭವನ್ನು ಸುಕೋ ಬ್ಯಾಂಕ್ ಗ್ರಾಹಕರು ಪಡೆದುಕೊಳ್ಳಬಹುದಾಗಿದೆ ಎಂದರು. ರಾಣೆಬೆನ್ನೂರು ಶಾಖೆಯ ವ್ಯವಸ್ಥಾಪಕ ಮಧುಚಂದ್ರ, ನವೀನರಾಜ್ ಕಟ್ಟೀಮನಿಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>