<p><strong>ಹಾವೇರಿ: </strong>ರಾಣೆಬೆನ್ನೂರು ತಾಲ್ಲೂಕಿನ ಚೌಡಯ್ಯದಾನಪುರ ಗ್ರಾಮದ ಸಮೀಪ ತುಂಗಭದ್ರಾ ನದಿಯಲ್ಲಿ ಭಾನುವಾರ ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲಾಗಿದ್ದಾರೆ.</p>.<p>ಹಾವೇರಿ ತಾಲ್ಲೂಕಿನ ಗುತ್ತಲ ಪಟ್ಟಣದ ಫಕ್ಕಿರೇಶ ಹೊನ್ನಪ್ಪ ಮಣ್ಣೂರ (23) ಮತ್ತು ಯಲ್ಲಪ್ಪ ಫಕ್ಕೀರಪ್ಪ ಕುಂಬಾರ (34) ನೀರುಪಾಲಾದವರು.</p>.<p>ನದಿಯಲ್ಲಿ ಸ್ವಲ್ಪ ಮೀನುಗಳನ್ನು ಹಿಡಿದು, ದಂಡೆಗೆ ತಂದು ಸುರಿದಿದ್ದಾರೆ. ನಂತರ ಸ್ನಾನ ಮಾಡಲು ನದಿಗೆ ಇಳಿದ ಸಂದರ್ಭ ಒಬ್ಬ ಯುವಕ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಆತನನ್ನು ರಕ್ಷಿಸಲು ಹೋದ ಮತ್ತೊಬ್ಬ ಯುವಕ ಕೂಡ ನೀರು ಪಾಲಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಯುವಕರ ಪತ್ತೆಗಾಗಿ ಸ್ಥಳೀಯರು ಮತ್ತು ಮುಳುಗು ತಜ್ಞರ ನೆರವಿನೊಂದಿಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ. ಇದುವರೆಗೂ ಯುವಕರ ಬಗ್ಗೆ ಸುಳಿವು ಸಿಕ್ಕಿಲ್ಲ.</p>.<p>ಅಕ್ರಮ ಮರಳು ಗಣಿಗಾರಿಕೆಯಿಂದಾಗಿ ನದಿ ತೀರದಲ್ಲಿ ಆಳವಾದ ಗುಂಡಿಗಳು ಸೃಷ್ಟಿಯಾಗಿವೆ. ನೀರಿನ ಆಳದ ಬಗ್ಗೆ ಸ್ಪಷ್ಟ ಅರಿವಿಲ್ಲದ ಯುವಕರು ನೀರಿಗಿಳಿದು ಜೀವ ತೆತ್ತಿದ್ದಾರೆ. ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯುವಲ್ಲಿ ಪೊಲೀಸರು ಮತ್ತು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.</p>.<p>ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ರಾಣೆಬೆನ್ನೂರು ತಾಲ್ಲೂಕಿನ ಚೌಡಯ್ಯದಾನಪುರ ಗ್ರಾಮದ ಸಮೀಪ ತುಂಗಭದ್ರಾ ನದಿಯಲ್ಲಿ ಭಾನುವಾರ ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲಾಗಿದ್ದಾರೆ.</p>.<p>ಹಾವೇರಿ ತಾಲ್ಲೂಕಿನ ಗುತ್ತಲ ಪಟ್ಟಣದ ಫಕ್ಕಿರೇಶ ಹೊನ್ನಪ್ಪ ಮಣ್ಣೂರ (23) ಮತ್ತು ಯಲ್ಲಪ್ಪ ಫಕ್ಕೀರಪ್ಪ ಕುಂಬಾರ (34) ನೀರುಪಾಲಾದವರು.</p>.<p>ನದಿಯಲ್ಲಿ ಸ್ವಲ್ಪ ಮೀನುಗಳನ್ನು ಹಿಡಿದು, ದಂಡೆಗೆ ತಂದು ಸುರಿದಿದ್ದಾರೆ. ನಂತರ ಸ್ನಾನ ಮಾಡಲು ನದಿಗೆ ಇಳಿದ ಸಂದರ್ಭ ಒಬ್ಬ ಯುವಕ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಆತನನ್ನು ರಕ್ಷಿಸಲು ಹೋದ ಮತ್ತೊಬ್ಬ ಯುವಕ ಕೂಡ ನೀರು ಪಾಲಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಯುವಕರ ಪತ್ತೆಗಾಗಿ ಸ್ಥಳೀಯರು ಮತ್ತು ಮುಳುಗು ತಜ್ಞರ ನೆರವಿನೊಂದಿಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ. ಇದುವರೆಗೂ ಯುವಕರ ಬಗ್ಗೆ ಸುಳಿವು ಸಿಕ್ಕಿಲ್ಲ.</p>.<p>ಅಕ್ರಮ ಮರಳು ಗಣಿಗಾರಿಕೆಯಿಂದಾಗಿ ನದಿ ತೀರದಲ್ಲಿ ಆಳವಾದ ಗುಂಡಿಗಳು ಸೃಷ್ಟಿಯಾಗಿವೆ. ನೀರಿನ ಆಳದ ಬಗ್ಗೆ ಸ್ಪಷ್ಟ ಅರಿವಿಲ್ಲದ ಯುವಕರು ನೀರಿಗಿಳಿದು ಜೀವ ತೆತ್ತಿದ್ದಾರೆ. ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯುವಲ್ಲಿ ಪೊಲೀಸರು ಮತ್ತು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.</p>.<p>ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>