<p><strong>ಹಾವೇರಿ:</strong> ಇಲ್ಲಿಯ ಕೆರಿಮತ್ತಿಹಳ್ಳಿಯಲ್ಲಿರುವ ಹಾವೇರಿ ವಿಶ್ವವಿದ್ಯಾಲಯದಲ್ಲಿ ‘ವಿಶ್ವ ರಕ್ತದಾನಿಗಳ ದಿನ’ವನ್ನು ಅರ್ಥಪೂರ್ಣವಾಗಿ ಆಚರಿಸಿದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, 42 ಯೂನಿಟ್ ರಕ್ತದಾನ ಮಾಡಿದ್ದಾರೆ.</p>.<p>ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನೆಯ ವಿಶ್ವವಿದ್ಯಾಲಯ ಮಟ್ಟದ ನಾಯಕತ್ವ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿದ್ದ ಶಿಬಿರಾರ್ಥಿಗಳು ಹಾಗೂ ಶಿಕ್ಷಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಜೊತೆಗೆ, ರಕ್ತದಾನ ಮಾಡಿದವರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗಿದೆ.</p>.<p>ಶಿಬಿರದಲ್ಲಿ ಪಾಲ್ಗೊಂಡಿದ್ದ ಕುಲಪತಿ ಡಾ. ಸುರೇಶ್ ಜಂಗಮಶೆಟ್ಟಿ, ‘ಸಮುದಾಯಗಳ ಆರೋಗ್ಯ ಮತ್ತು ಯೋಗಕ್ಷೇಮ ಕಾಪಾಡುವಲ್ಲಿ ರಕ್ತದಾನ ಮಹತ್ವದ ಪಾತ್ರ ವಹಿಸುತ್ತದೆ’ ಎಂದರು.</p>.<p>ಹಾವೇರಿ ಜಿಲ್ಲಾ ರಕ್ತ ಬ್ಯಾಂಕ್ ವೈದ್ಯಾಧಿಕಾರಿ ಡಾ. ಬಸವರಾಜ ತಳವಾರ, ‘ಆರೋಗ್ಯ ಸೇವಾ ಕ್ಷೇತ್ರಕ್ಕೆ ಆರೋಗ್ಯಕರ ರಕ್ತದ ನಿರಂತರ ಪೂರೈಕೆ ಅಗತ್ಯವಾಗಿದೆ. ಸಮಾಜದ ಮುಂಚೂಣಿ ನಾಯಕರು, ಪ್ರತಿಯೊಬ್ಬರಲ್ಲಿ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.</p>.<p>ಕುಲಸಚಿವ ಪ್ರೊ. ಎಸ್.ಟಿ. ಬಾಗಲಕೋಟಿ, ಎನ್ಎಸ್ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಸಿ.ಎಸ್. ಕುಮ್ಮೂರ, ಕಾರ್ಯಕ್ರಮ ಅಧಿಕಾರಿ ಡಾ. ವಿಶ್ವನಾಥ ಚಿಂತಾಮಣಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಇಲ್ಲಿಯ ಕೆರಿಮತ್ತಿಹಳ್ಳಿಯಲ್ಲಿರುವ ಹಾವೇರಿ ವಿಶ್ವವಿದ್ಯಾಲಯದಲ್ಲಿ ‘ವಿಶ್ವ ರಕ್ತದಾನಿಗಳ ದಿನ’ವನ್ನು ಅರ್ಥಪೂರ್ಣವಾಗಿ ಆಚರಿಸಿದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, 42 ಯೂನಿಟ್ ರಕ್ತದಾನ ಮಾಡಿದ್ದಾರೆ.</p>.<p>ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನೆಯ ವಿಶ್ವವಿದ್ಯಾಲಯ ಮಟ್ಟದ ನಾಯಕತ್ವ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿದ್ದ ಶಿಬಿರಾರ್ಥಿಗಳು ಹಾಗೂ ಶಿಕ್ಷಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಜೊತೆಗೆ, ರಕ್ತದಾನ ಮಾಡಿದವರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಗಿದೆ.</p>.<p>ಶಿಬಿರದಲ್ಲಿ ಪಾಲ್ಗೊಂಡಿದ್ದ ಕುಲಪತಿ ಡಾ. ಸುರೇಶ್ ಜಂಗಮಶೆಟ್ಟಿ, ‘ಸಮುದಾಯಗಳ ಆರೋಗ್ಯ ಮತ್ತು ಯೋಗಕ್ಷೇಮ ಕಾಪಾಡುವಲ್ಲಿ ರಕ್ತದಾನ ಮಹತ್ವದ ಪಾತ್ರ ವಹಿಸುತ್ತದೆ’ ಎಂದರು.</p>.<p>ಹಾವೇರಿ ಜಿಲ್ಲಾ ರಕ್ತ ಬ್ಯಾಂಕ್ ವೈದ್ಯಾಧಿಕಾರಿ ಡಾ. ಬಸವರಾಜ ತಳವಾರ, ‘ಆರೋಗ್ಯ ಸೇವಾ ಕ್ಷೇತ್ರಕ್ಕೆ ಆರೋಗ್ಯಕರ ರಕ್ತದ ನಿರಂತರ ಪೂರೈಕೆ ಅಗತ್ಯವಾಗಿದೆ. ಸಮಾಜದ ಮುಂಚೂಣಿ ನಾಯಕರು, ಪ್ರತಿಯೊಬ್ಬರಲ್ಲಿ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.</p>.<p>ಕುಲಸಚಿವ ಪ್ರೊ. ಎಸ್.ಟಿ. ಬಾಗಲಕೋಟಿ, ಎನ್ಎಸ್ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಸಿ.ಎಸ್. ಕುಮ್ಮೂರ, ಕಾರ್ಯಕ್ರಮ ಅಧಿಕಾರಿ ಡಾ. ವಿಶ್ವನಾಥ ಚಿಂತಾಮಣಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>