ಗ್ರಾಮದಲ್ಲಿಮೂರು ತಿಂಗಳಿನಿಂದ ಸೃಷ್ಟಿಯಾಗಿರುವ ‘ಕ್ಷೌರ ವಿವಾದ’ವನ್ನುಇತ್ಯರ್ಥಪಡಿಸಲು ಪೊಲೀಸರು, ತಹಶೀಲ್ದಾರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗುರುವಾರ ಮೂರು ಶಾಂತಿ ಸಭೆಗಳನ್ನು ನಡೆಸಿದರು. ಆದರೆ, ಎರಡೂ ಬಣಗಳ ನಡುವೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗದ ಕಾರಣ, ವಿವಾದ ಇನ್ನೂ ಬೂದಿ ಮುಚ್ಚಿದ ಕೆಂಡದಂತೆಯೇ ಇದೆ.