<p>ಹಾವೇರಿ: ‘ವಂದೇ ಭಾರತ ಮಾದರಿಯಲ್ಲಿ ಹವಾನಿಯಂತ್ರಣ ರಹಿತ ‘ಅಮೃತ ಭಾರತ’ ರೈಲುಗಳು ಬೆಂಗಳೂರಿನ ಬಿಇಎಲ್ನಲ್ಲಿ ತಯಾರಾಗುತ್ತಿದ್ದು, ಶೀಘ್ರವೇ ಹಳಿಗೆ ಇಳಿಯಲಿವೆ’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.</p>.<p>ನಗರದಲ್ಲಿ ವಂದೇ ಭಾರತ ರೈಲು ನಿಲುಗಡೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಬೆಳಗಾವಿ, ಹಾವೇರಿ, ಹುಬ್ಬಳ್ಳಿ ಮತ್ತು ಇತರೆಡೆ ಅಮೃತ ಭಾರತ ರೈಲು ನಿಲುಗಡೆ ಆಗಲಿದೆ. ಇದು ಎಲ್ಲರಿಗೂ ಮೆಚ್ಚುಗೆ ಆಗಲಿದೆ’ ಎಂದರು.</p>.<p>‘ರಾಜ್ಯದಲ್ಲಿ 2024–25ರಲ್ಲಿ 61 ರೈಲು ನಿಲ್ದಾಣಗಳನ್ನು ಆಧುನೀಕರಣಗೊಳಿಸಲಾಗಿದೆ. 2025–26ರಲ್ಲೂ 61 ನಿಲ್ದಾಣಗಳ ಆಧುನೀಕರಣಕ್ಕೆ ಯೋಜನೆ ರೂಪಿಸಲಾಗಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣವನ್ನು ₹1,300 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಅಪಘಾತ ರಹಿತ ಸೇವೆಗಾಗಿ 10 ಸಾವಿರ ಕಿ.ಮೀ.ವರೆಗೂ ಸ್ವದೇಶಿ ನಿರ್ಮಿತ ಕವಚ ನಿರ್ಮಿಸಲಾಗುತ್ತಿದೆ’ ಎಂದರು.</p>.<p>‘ಹುಬ್ಬಳ್ಳಿ– ಅಂಕೋಲಾ ರೈಲು ಮಾರ್ಗದ ಡಿಪಿಎಆರ್ ಮುಗಿದಿದ್ದು, ಮುಂದಿನ ಪ್ರಕ್ರಿಯೆಗಳು ನಡೆಯಬೇಕಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ‘ವಂದೇ ಭಾರತ ಮಾದರಿಯಲ್ಲಿ ಹವಾನಿಯಂತ್ರಣ ರಹಿತ ‘ಅಮೃತ ಭಾರತ’ ರೈಲುಗಳು ಬೆಂಗಳೂರಿನ ಬಿಇಎಲ್ನಲ್ಲಿ ತಯಾರಾಗುತ್ತಿದ್ದು, ಶೀಘ್ರವೇ ಹಳಿಗೆ ಇಳಿಯಲಿವೆ’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.</p>.<p>ನಗರದಲ್ಲಿ ವಂದೇ ಭಾರತ ರೈಲು ನಿಲುಗಡೆಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಬೆಳಗಾವಿ, ಹಾವೇರಿ, ಹುಬ್ಬಳ್ಳಿ ಮತ್ತು ಇತರೆಡೆ ಅಮೃತ ಭಾರತ ರೈಲು ನಿಲುಗಡೆ ಆಗಲಿದೆ. ಇದು ಎಲ್ಲರಿಗೂ ಮೆಚ್ಚುಗೆ ಆಗಲಿದೆ’ ಎಂದರು.</p>.<p>‘ರಾಜ್ಯದಲ್ಲಿ 2024–25ರಲ್ಲಿ 61 ರೈಲು ನಿಲ್ದಾಣಗಳನ್ನು ಆಧುನೀಕರಣಗೊಳಿಸಲಾಗಿದೆ. 2025–26ರಲ್ಲೂ 61 ನಿಲ್ದಾಣಗಳ ಆಧುನೀಕರಣಕ್ಕೆ ಯೋಜನೆ ರೂಪಿಸಲಾಗಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣವನ್ನು ₹1,300 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಅಪಘಾತ ರಹಿತ ಸೇವೆಗಾಗಿ 10 ಸಾವಿರ ಕಿ.ಮೀ.ವರೆಗೂ ಸ್ವದೇಶಿ ನಿರ್ಮಿತ ಕವಚ ನಿರ್ಮಿಸಲಾಗುತ್ತಿದೆ’ ಎಂದರು.</p>.<p>‘ಹುಬ್ಬಳ್ಳಿ– ಅಂಕೋಲಾ ರೈಲು ಮಾರ್ಗದ ಡಿಪಿಎಆರ್ ಮುಗಿದಿದ್ದು, ಮುಂದಿನ ಪ್ರಕ್ರಿಯೆಗಳು ನಡೆಯಬೇಕಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>