<p><strong>ಹಾವೇರಿ</strong>: ಕೊರೊನಾ ವೈರಸ್ ಸೋಂಕು ಹರಡುವುದು ತಡೆಗಟ್ಟಲು ಪೊಲೀಸ್ ಇಲಾಖೆ ವತಿಯಿಂದ ಮಾರುಕಟ್ಟೆಯಲ್ಲಿ ಗುಂಪು ಗುಂಪಾಗಿ ತರಕಾರಿ, ಹಣ್ಣು ಮಾರಾಟ ನಿರ್ಬಂಧಿಸಿದ್ದು, ತಳ್ಳು ಗಾಡಿಯಲ್ಲಿ ಮಾರಾಟ ಮಾಡುವಂತೆ ವ್ಯಾಪಾರಿಗಳಿಗೆಮನವಿ ಮಾಡಿದ್ದಾರೆ.</p>.<p>ನಗರದ ನಾಗರಿಕರು ಅನಾವಶ್ಯಕವಾಗಿ ಮನೆಯಿಂದ ಹೊರಗೆ ತಿರುಗಬಾರದು, ಜೀವನಾವಶ್ಯಕ ವಸ್ತುಗಳನ್ನು ಸಮೀಪದ ನಿಗದಿತ ಸ್ಥಳದಲ್ಲಿಯೇ ಖರೀದಿಸಬೇಕು. ಖರೀದಿಗೆ ಬಂದ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.</p>.<p>ನಗರದ ಲಾಲ್ಬಹದ್ದೂರ ಶಾಸ್ತ್ರಿ ಮಾರುಕಟ್ಟೆಯಲ್ಲಿ ಗುರುವಾರ ವಾರದ ಸಂತೆಯಲ್ಲಿ ಸಾರ್ವಜನಿಕರು ತರಕಾರಿ ಖರೀದಿಗೆ ಮುಗಿಬಿದ್ದರು. ಜನ ಸೇರುತ್ತಿದ್ದಂತೆ ಪೊಲೀಸರು ಅಂಗಡಿಗಳನ್ನು ತೆರವುಗೊಳಿಸಲು ಮುಂದಾದರೂ.</p>.<p class="Subhead"><strong>ಎಲ್ಲೆಲ್ಲೂ ಸಾಮಾಜಿಕ ಅಂತರ</strong></p>.<p>ನಗರದಲ್ಲಿರುವ ವಿವಿಧ ದಿನಸಿ, ಹಾಲು ಹಾಗೂ ಔಷಧಿ ಅಂಗಡಿಗಳ ಮುಂದೆ ಮೂರರಿಂದನಾಲ್ಕು ಅಡಿ ಅಂತರದಲ್ಲಿ ನಿಲ್ಲುವಂತೆ ಗೆರೆಗಳನ್ನು ಎಳೆದು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಸಾರ್ವಜನಿಕರು ಅದರಲ್ಲಿ ನಿಂತು ಸಾಮಾಗ್ರಿಗಳನ್ನು ಖರೀದಿಸುತ್ತಿರುವುದು ಕಂಡು ಬಂದಿತು.</p>.<p class="Subhead"><strong>ತರಕಾರಿ ಬೆಲೆ ಏರಿಕೆ</strong></p>.<p>ಕೊರೊನಾ ವೈರಸ್ನಿಂದಾಗಿ ಬೇರೆ ಜಿಲ್ಲೆಗಳ ತರಕಾರಿ ಪೂರೈಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ರೈತರು ಬೆಳೆದ ತರಕಾರಿ ಮಾರುಕಟ್ಟೆಗೆ ಆವಕವಾಗುತ್ತಿರುವುದರಿಂದ ಬೆಲೆ ಏರಿಕೆಯಾಗಿದೆ. ಬೇಡಿಕೆಗೆ ತಕ್ಕಂತೆ ತರಕಾರಿ ಪೂರೈಕೆಯಾಗುತ್ತಿದೆ ಎಂದು ವ್ಯಾಪಾರಿ ತೌಸಿಫ್ ಕೋಣನತಂಬಗಿ ತಿಳಿಸಿದರು.</p>.<p>ಹಿಂದಿನ ವಾರ ₹10ರಂತೆ ಮಾರಾಟವಾಗುತ್ತಿದ್ದ ಟೊಮೆಟೊ ಈ ವಾರ ₹15 ರಂತೆ ಮಾರಾಟವಾಗುತ್ತಿದೆ. ಈರುಳ್ಳಿ ₹40 ರಂತೆ ಹಾಗೂಹೀರೇಕಾಯಿ, ಚವಳಿಕಾಯಿ, ಹಾಗಲಕಾಯಿ, ಬೀನ್ಸ್ ₹60 ರಂತೆ ಮಾರಾಟವಾಗುತ್ತಿದೆ. ಕ್ಯಾಬೇಜ್, ನುಗ್ಗೆಕಾಯಿ, ಬದನೆಕಾಯಿ ಹೆಚ್ಚಾಗಿ ಆವಕವಾಗುತ್ತಿದೆ. ಮೆಣಸು, ಸೌತೆಕಾಯಿ, ಡೊಣ್ಣ ಮೆಣಸುಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿದೆ ಎಂದು ಅವರು ವಿವರಿಸಿದರು.</p>.<p class="Subhead"><strong>ಫೀಲ್ಡ್ಗೆ ಇಳಿದ ಎಸ್ಪಿ</strong></p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು ಅವರು ತಮ್ಮ ಸಿಬ್ಬಂದಿಯೊಂದಿಗೆ ಬೆಳಿಗ್ಗೆಲಾಲ್ಬಹದ್ಧೂರಶಾಸ್ತ್ರಿ ಮಾರುಕಟ್ಟೆಗೆ ಇಳಿದು ತರಕಾರಿ ವ್ಯಾಪಾರಿಗಳೊಂದಿಗೆ ಚರ್ಚಿಸಿದರು.ತರಕಾರಿ ಖರೀದಿಗೆ ಬರುವವರಲ್ಲಿ ಅಂತರ ಕಾಯ್ದುಕೊಳ್ಳಬೇಕು. ಇಲ್ಲವೇ, ತಳ್ಳುಗಾಡಿಯಲ್ಲಿ ವಾರ್ಡ್ಗಳಿಗೆ ಹೋಗಿ ತರಕಾರಿ ಮಾರಾಟ ಮಾಡಬೇಕು ಎಂದು ಸಲಹೆ ನೀಡಿದರು.</p>.<p class="Subhead"><strong>ಬಿಕೋ ಎನ್ನುತ್ತಿರುವ ಮಾರುಕಟ್ಟೆ</strong></p>.<p>ಗುರುವಾರ ಬಂದರೆ ನಗರದ ಎಂ.ಜಿ.ರಸ್ತೆ, ತರಕಾರಿ ಮಾರುಕಟ್ಟೆ, ಹೂವಿನ ಮಾರುಕಟ್ಟೆಯಲ್ಲಿ ಹೆಚ್ಚಿನ ಜನರು ಸೇರುತ್ತಿದ್ದರು. ಕೊರೊನಾ ವೈರಸ್ ಸೋಂಕು ತಡೆಗೆ ಲಾಕ್ಡೌನ್ ರಾಜ್ಯವೇ ಆಗಿರುವುದರಿಂದ ವ್ಯಾಪಾರಿಗಳು ಹಾಗೂ ರೈತರು ಇಲ್ಲದೆ ಬಿಕೋ ಎನ್ನುತ್ತಿತ್ತು.</p>.<p class="Subhead"><strong>ವ್ಯಾಪಾರಕ್ಕೆ ಸಮಯ ನಿಗದಿ</strong></p>.<p>ಕೊರೊನಾ ವೈರಸ್ ಸೋಂಕು ಹರಡುವಿಕೆಯನ್ನು ತಡೆಯುವುದಕ್ಕಾಗಿ ಎಲ್ಲೆಡೆ ಲಾಕ್ಡೌನ್ ಮಾಡಲಾಗಿದೆ. ಆದರೂ ಸಹ ಸಾರ್ವಜನಿಕರು ನೆಪ ಮಾಡಿಕೊಂಡು ರಸ್ತೆಯ ಮೇಲೆ ಓಡಾಡುತ್ತಿದ್ದಾರೆ. ಅದನ್ನು ತಪ್ಪಿಸುವುದಕ್ಕಾಗಿ ಹಣ್ಣು, ತರಕಾರಿ, ಹಾಲು ಖರೀದಿಗೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಪೊಲೀಸರು ಸಮಯ ನಿಗದಿ ಪಡಿಸಿದ್ದಾರೆ ಎಂದು ವ್ಯಾಪಾರಿ ತೌಸಿಫ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಕೊರೊನಾ ವೈರಸ್ ಸೋಂಕು ಹರಡುವುದು ತಡೆಗಟ್ಟಲು ಪೊಲೀಸ್ ಇಲಾಖೆ ವತಿಯಿಂದ ಮಾರುಕಟ್ಟೆಯಲ್ಲಿ ಗುಂಪು ಗುಂಪಾಗಿ ತರಕಾರಿ, ಹಣ್ಣು ಮಾರಾಟ ನಿರ್ಬಂಧಿಸಿದ್ದು, ತಳ್ಳು ಗಾಡಿಯಲ್ಲಿ ಮಾರಾಟ ಮಾಡುವಂತೆ ವ್ಯಾಪಾರಿಗಳಿಗೆಮನವಿ ಮಾಡಿದ್ದಾರೆ.</p>.<p>ನಗರದ ನಾಗರಿಕರು ಅನಾವಶ್ಯಕವಾಗಿ ಮನೆಯಿಂದ ಹೊರಗೆ ತಿರುಗಬಾರದು, ಜೀವನಾವಶ್ಯಕ ವಸ್ತುಗಳನ್ನು ಸಮೀಪದ ನಿಗದಿತ ಸ್ಥಳದಲ್ಲಿಯೇ ಖರೀದಿಸಬೇಕು. ಖರೀದಿಗೆ ಬಂದ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.</p>.<p>ನಗರದ ಲಾಲ್ಬಹದ್ದೂರ ಶಾಸ್ತ್ರಿ ಮಾರುಕಟ್ಟೆಯಲ್ಲಿ ಗುರುವಾರ ವಾರದ ಸಂತೆಯಲ್ಲಿ ಸಾರ್ವಜನಿಕರು ತರಕಾರಿ ಖರೀದಿಗೆ ಮುಗಿಬಿದ್ದರು. ಜನ ಸೇರುತ್ತಿದ್ದಂತೆ ಪೊಲೀಸರು ಅಂಗಡಿಗಳನ್ನು ತೆರವುಗೊಳಿಸಲು ಮುಂದಾದರೂ.</p>.<p class="Subhead"><strong>ಎಲ್ಲೆಲ್ಲೂ ಸಾಮಾಜಿಕ ಅಂತರ</strong></p>.<p>ನಗರದಲ್ಲಿರುವ ವಿವಿಧ ದಿನಸಿ, ಹಾಲು ಹಾಗೂ ಔಷಧಿ ಅಂಗಡಿಗಳ ಮುಂದೆ ಮೂರರಿಂದನಾಲ್ಕು ಅಡಿ ಅಂತರದಲ್ಲಿ ನಿಲ್ಲುವಂತೆ ಗೆರೆಗಳನ್ನು ಎಳೆದು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಸಾರ್ವಜನಿಕರು ಅದರಲ್ಲಿ ನಿಂತು ಸಾಮಾಗ್ರಿಗಳನ್ನು ಖರೀದಿಸುತ್ತಿರುವುದು ಕಂಡು ಬಂದಿತು.</p>.<p class="Subhead"><strong>ತರಕಾರಿ ಬೆಲೆ ಏರಿಕೆ</strong></p>.<p>ಕೊರೊನಾ ವೈರಸ್ನಿಂದಾಗಿ ಬೇರೆ ಜಿಲ್ಲೆಗಳ ತರಕಾರಿ ಪೂರೈಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ರೈತರು ಬೆಳೆದ ತರಕಾರಿ ಮಾರುಕಟ್ಟೆಗೆ ಆವಕವಾಗುತ್ತಿರುವುದರಿಂದ ಬೆಲೆ ಏರಿಕೆಯಾಗಿದೆ. ಬೇಡಿಕೆಗೆ ತಕ್ಕಂತೆ ತರಕಾರಿ ಪೂರೈಕೆಯಾಗುತ್ತಿದೆ ಎಂದು ವ್ಯಾಪಾರಿ ತೌಸಿಫ್ ಕೋಣನತಂಬಗಿ ತಿಳಿಸಿದರು.</p>.<p>ಹಿಂದಿನ ವಾರ ₹10ರಂತೆ ಮಾರಾಟವಾಗುತ್ತಿದ್ದ ಟೊಮೆಟೊ ಈ ವಾರ ₹15 ರಂತೆ ಮಾರಾಟವಾಗುತ್ತಿದೆ. ಈರುಳ್ಳಿ ₹40 ರಂತೆ ಹಾಗೂಹೀರೇಕಾಯಿ, ಚವಳಿಕಾಯಿ, ಹಾಗಲಕಾಯಿ, ಬೀನ್ಸ್ ₹60 ರಂತೆ ಮಾರಾಟವಾಗುತ್ತಿದೆ. ಕ್ಯಾಬೇಜ್, ನುಗ್ಗೆಕಾಯಿ, ಬದನೆಕಾಯಿ ಹೆಚ್ಚಾಗಿ ಆವಕವಾಗುತ್ತಿದೆ. ಮೆಣಸು, ಸೌತೆಕಾಯಿ, ಡೊಣ್ಣ ಮೆಣಸುಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿದೆ ಎಂದು ಅವರು ವಿವರಿಸಿದರು.</p>.<p class="Subhead"><strong>ಫೀಲ್ಡ್ಗೆ ಇಳಿದ ಎಸ್ಪಿ</strong></p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು ಅವರು ತಮ್ಮ ಸಿಬ್ಬಂದಿಯೊಂದಿಗೆ ಬೆಳಿಗ್ಗೆಲಾಲ್ಬಹದ್ಧೂರಶಾಸ್ತ್ರಿ ಮಾರುಕಟ್ಟೆಗೆ ಇಳಿದು ತರಕಾರಿ ವ್ಯಾಪಾರಿಗಳೊಂದಿಗೆ ಚರ್ಚಿಸಿದರು.ತರಕಾರಿ ಖರೀದಿಗೆ ಬರುವವರಲ್ಲಿ ಅಂತರ ಕಾಯ್ದುಕೊಳ್ಳಬೇಕು. ಇಲ್ಲವೇ, ತಳ್ಳುಗಾಡಿಯಲ್ಲಿ ವಾರ್ಡ್ಗಳಿಗೆ ಹೋಗಿ ತರಕಾರಿ ಮಾರಾಟ ಮಾಡಬೇಕು ಎಂದು ಸಲಹೆ ನೀಡಿದರು.</p>.<p class="Subhead"><strong>ಬಿಕೋ ಎನ್ನುತ್ತಿರುವ ಮಾರುಕಟ್ಟೆ</strong></p>.<p>ಗುರುವಾರ ಬಂದರೆ ನಗರದ ಎಂ.ಜಿ.ರಸ್ತೆ, ತರಕಾರಿ ಮಾರುಕಟ್ಟೆ, ಹೂವಿನ ಮಾರುಕಟ್ಟೆಯಲ್ಲಿ ಹೆಚ್ಚಿನ ಜನರು ಸೇರುತ್ತಿದ್ದರು. ಕೊರೊನಾ ವೈರಸ್ ಸೋಂಕು ತಡೆಗೆ ಲಾಕ್ಡೌನ್ ರಾಜ್ಯವೇ ಆಗಿರುವುದರಿಂದ ವ್ಯಾಪಾರಿಗಳು ಹಾಗೂ ರೈತರು ಇಲ್ಲದೆ ಬಿಕೋ ಎನ್ನುತ್ತಿತ್ತು.</p>.<p class="Subhead"><strong>ವ್ಯಾಪಾರಕ್ಕೆ ಸಮಯ ನಿಗದಿ</strong></p>.<p>ಕೊರೊನಾ ವೈರಸ್ ಸೋಂಕು ಹರಡುವಿಕೆಯನ್ನು ತಡೆಯುವುದಕ್ಕಾಗಿ ಎಲ್ಲೆಡೆ ಲಾಕ್ಡೌನ್ ಮಾಡಲಾಗಿದೆ. ಆದರೂ ಸಹ ಸಾರ್ವಜನಿಕರು ನೆಪ ಮಾಡಿಕೊಂಡು ರಸ್ತೆಯ ಮೇಲೆ ಓಡಾಡುತ್ತಿದ್ದಾರೆ. ಅದನ್ನು ತಪ್ಪಿಸುವುದಕ್ಕಾಗಿ ಹಣ್ಣು, ತರಕಾರಿ, ಹಾಲು ಖರೀದಿಗೆ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಪೊಲೀಸರು ಸಮಯ ನಿಗದಿ ಪಡಿಸಿದ್ದಾರೆ ಎಂದು ವ್ಯಾಪಾರಿ ತೌಸಿಫ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>