<p><strong>ಹಾವೇರಿ</strong>: ಹಾವೇರಿ ಜಿಲ್ಲೆಯ ಶಿಗ್ಗಾವಿ ಬಳಿಯ ತಡಸ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.</p><p>ತಿಮ್ಮಾಪುರ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ ಅಪಘಾತ ಆಗಿದೆ. ಬೆಂಗಳೂರಿನ ನಿವಾಸಿಗಳು ಎನ್ನಲಾದ ತಂದೆ-ತಾಯಿ ಹಾಗೂ ಅವರಿಬ್ಬರ ಮಕ್ಕಳು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.</p><p>ರಾಷ್ಟ್ರೀಯ ಹೆದ್ದಾರಿಯಲ್ಲಿ ಅತೀ ವೇಗವಾಗಿ ಹೊರಟಿದ್ದ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಇದರಿಂದಾಗಿ, ಒಂದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿಯೇ ಅವರಿಬ್ಬರು ಅಸುನೀಗಿದ್ದಾರೆ.</p><p>ಇನ್ನೊಂದು ಕಾರಿನಲ್ಲಿದ್ದ ಚಾಲಕ ಹಾಗೂ ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p><p>'ಅಪಘಾತದಿಂದ ಒಂದು ಕಾರು ನಜ್ಜುಗುಜ್ಜಾಗಿದೆ' ಎಂದು ಪೊಲೀಸರು ತಿಳಿಸಿದರು.</p><p>ಬೆಂಗಳೂರು ಚಾಮರಾಜಪೇಟೆಯ ಚಂದ್ರಮ್ಮ (59), ಅವರ ಮಗಳು ದಾವಣಗೆರೆ ಜಿಲ್ಲೆಯ ಹರಿಹರದ ಮೀನಾ (38), ಕಾರು ಚಾಲಕ ಮಹೇಶಕುಮಾರ ಸಿ. (41) ಹಾಗೂ ಹರಿಹರದ ಧನ್ವೀರ್ (11) ಮೃತಪಟ್ಟವರು.</p>.ಜಮ್ಮುವಿನ ಪೂಂಛ್ ಬಳಿ ಸೇನಾ ವಾಹನ ಅಪಘಾತ: ಕರ್ನಾಟಕದ ಮೂವರು ಯೋಧರ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಹಾವೇರಿ ಜಿಲ್ಲೆಯ ಶಿಗ್ಗಾವಿ ಬಳಿಯ ತಡಸ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.</p><p>ತಿಮ್ಮಾಪುರ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ ಅಪಘಾತ ಆಗಿದೆ. ಬೆಂಗಳೂರಿನ ನಿವಾಸಿಗಳು ಎನ್ನಲಾದ ತಂದೆ-ತಾಯಿ ಹಾಗೂ ಅವರಿಬ್ಬರ ಮಕ್ಕಳು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.</p><p>ರಾಷ್ಟ್ರೀಯ ಹೆದ್ದಾರಿಯಲ್ಲಿ ಅತೀ ವೇಗವಾಗಿ ಹೊರಟಿದ್ದ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಇದರಿಂದಾಗಿ, ಒಂದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿಯೇ ಅವರಿಬ್ಬರು ಅಸುನೀಗಿದ್ದಾರೆ.</p><p>ಇನ್ನೊಂದು ಕಾರಿನಲ್ಲಿದ್ದ ಚಾಲಕ ಹಾಗೂ ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p><p>'ಅಪಘಾತದಿಂದ ಒಂದು ಕಾರು ನಜ್ಜುಗುಜ್ಜಾಗಿದೆ' ಎಂದು ಪೊಲೀಸರು ತಿಳಿಸಿದರು.</p><p>ಬೆಂಗಳೂರು ಚಾಮರಾಜಪೇಟೆಯ ಚಂದ್ರಮ್ಮ (59), ಅವರ ಮಗಳು ದಾವಣಗೆರೆ ಜಿಲ್ಲೆಯ ಹರಿಹರದ ಮೀನಾ (38), ಕಾರು ಚಾಲಕ ಮಹೇಶಕುಮಾರ ಸಿ. (41) ಹಾಗೂ ಹರಿಹರದ ಧನ್ವೀರ್ (11) ಮೃತಪಟ್ಟವರು.</p>.ಜಮ್ಮುವಿನ ಪೂಂಛ್ ಬಳಿ ಸೇನಾ ವಾಹನ ಅಪಘಾತ: ಕರ್ನಾಟಕದ ಮೂವರು ಯೋಧರ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>