<p>ಹಾವೇರಿ: ಜಿಲ್ಲೆಯಾದ್ಯಂತ ಬಿಡುವು ನೀಡುತ್ತಲೇ ಮಳೆ ಸುರಿಯುತ್ತಿದೆ. ಮಂಗಳವಾರವೂ ಹಲವು ಕಡೆಗಳಲ್ಲಿ ಜೋರು ಮಳೆ ಸುರಿದು, ರಸ್ತೆಗಳಲ್ಲಿ ನೀರು ಹರಿಯಿತು.</p>.<p>ಹಲವು ದಿನಗಳಿಂದ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದೆ. ಆಗಾಗ ಬಿಸಿಲು ಕಾಣಿಸಿಕೊಳ್ಳುತ್ತಿತ್ತು. ಮಂಗಳವಾರ ಬೆಳಿಗ್ಗೆಯಿಂದಲೇ ಜಿಟಿಜಿಟಿಯಾಗಿ ಶುರುವಾದ ಮಳೆ, ಕ್ರಮೇಣ ಜೋರಾಗಿ ಅಬ್ಬರಿಸಿತು. ಬಿಡುವು ನೀಡುತ್ತಲೇ ತಡರಾತ್ರಿಯವರೆಗೂ ಮಳೆ ಆಯಿತು.</p>.<p>ಮಳೆ ನೀರು ರಸ್ತೆ ಮೇಲೆಯೇ ಹರಿಯಿತು. ನಗರದ ಹಲವು ಕಾಲುವೆಗಳಲ್ಲಿ ಹೂಳು ತುಂಬಿಕೊಂಡಿದ್ದರಿಂದ, ರಸ್ತೆಗಳು ಜಲಾವೃತಗೊಂಡ ಸ್ಥಿತಿಯಲ್ಲಿದ್ದವು.</p>.<p>ಬಸವೇಶ್ವರನಗರದ, ಹಳೇ ಪಿ.ಬಿ.ರಸ್ತೆ, ಎಂ.ಜಿ. ರಸ್ತೆ, ಅಶ್ವಿನಿನಗರ, ದಾನೇಶ್ವರಿನಗರ, ಮಂಜುನಾಥ ನಗರ, ಅಶ್ವಿನಿನಗರ, ಮೈಲಾರ ಮಹದೇವಪ್ಪ ವೃತ್ತ, ವಿದ್ಯಾನಗರ, ಉಜಾರಿ ಲಕಮಾಪುರ, ಹಾನಗಲ್ ರಸ್ತೆ, ಗುತ್ತಲ ರಸ್ತೆ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಜೋರು ಮಳೆ ಸುರಿಯಿತು.</p>.<p>ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣ ನೀರಿನಿಂದ ಜಲಾವೃತಗೊಂಡು ಕೆರೆಯಂತಾಗಿತ್ತು. ಬೆಳಿಗ್ಗೆ ವಾಯುವಿಹಾರಕ್ಕೆ ಬಂದಿದ್ದ ಜನರು, ಕ್ರೀಡಾಂಗಣದ ಅವ್ಯವಸ್ಥೆ ಕಂಡು ಬೇಸರ ವ್ಯಕ್ತಪಡಿಸಿದರು. ‘ಸಿಂಥೆಟಿಕ್ ಟ್ರ್ಯಾಕ್’ ನಿರ್ಮಿಸಬೇಕೆಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ಜಿಲ್ಲೆಯಾದ್ಯಂತ ಬಿಡುವು ನೀಡುತ್ತಲೇ ಮಳೆ ಸುರಿಯುತ್ತಿದೆ. ಮಂಗಳವಾರವೂ ಹಲವು ಕಡೆಗಳಲ್ಲಿ ಜೋರು ಮಳೆ ಸುರಿದು, ರಸ್ತೆಗಳಲ್ಲಿ ನೀರು ಹರಿಯಿತು.</p>.<p>ಹಲವು ದಿನಗಳಿಂದ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣವಿದೆ. ಆಗಾಗ ಬಿಸಿಲು ಕಾಣಿಸಿಕೊಳ್ಳುತ್ತಿತ್ತು. ಮಂಗಳವಾರ ಬೆಳಿಗ್ಗೆಯಿಂದಲೇ ಜಿಟಿಜಿಟಿಯಾಗಿ ಶುರುವಾದ ಮಳೆ, ಕ್ರಮೇಣ ಜೋರಾಗಿ ಅಬ್ಬರಿಸಿತು. ಬಿಡುವು ನೀಡುತ್ತಲೇ ತಡರಾತ್ರಿಯವರೆಗೂ ಮಳೆ ಆಯಿತು.</p>.<p>ಮಳೆ ನೀರು ರಸ್ತೆ ಮೇಲೆಯೇ ಹರಿಯಿತು. ನಗರದ ಹಲವು ಕಾಲುವೆಗಳಲ್ಲಿ ಹೂಳು ತುಂಬಿಕೊಂಡಿದ್ದರಿಂದ, ರಸ್ತೆಗಳು ಜಲಾವೃತಗೊಂಡ ಸ್ಥಿತಿಯಲ್ಲಿದ್ದವು.</p>.<p>ಬಸವೇಶ್ವರನಗರದ, ಹಳೇ ಪಿ.ಬಿ.ರಸ್ತೆ, ಎಂ.ಜಿ. ರಸ್ತೆ, ಅಶ್ವಿನಿನಗರ, ದಾನೇಶ್ವರಿನಗರ, ಮಂಜುನಾಥ ನಗರ, ಅಶ್ವಿನಿನಗರ, ಮೈಲಾರ ಮಹದೇವಪ್ಪ ವೃತ್ತ, ವಿದ್ಯಾನಗರ, ಉಜಾರಿ ಲಕಮಾಪುರ, ಹಾನಗಲ್ ರಸ್ತೆ, ಗುತ್ತಲ ರಸ್ತೆ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಜೋರು ಮಳೆ ಸುರಿಯಿತು.</p>.<p>ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣ ನೀರಿನಿಂದ ಜಲಾವೃತಗೊಂಡು ಕೆರೆಯಂತಾಗಿತ್ತು. ಬೆಳಿಗ್ಗೆ ವಾಯುವಿಹಾರಕ್ಕೆ ಬಂದಿದ್ದ ಜನರು, ಕ್ರೀಡಾಂಗಣದ ಅವ್ಯವಸ್ಥೆ ಕಂಡು ಬೇಸರ ವ್ಯಕ್ತಪಡಿಸಿದರು. ‘ಸಿಂಥೆಟಿಕ್ ಟ್ರ್ಯಾಕ್’ ನಿರ್ಮಿಸಬೇಕೆಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>