<p><strong>ತಡಸ (ದುಂಡಶಿ):</strong> ಒಂದು ವಾರದಿಂದ ಬಿಡದೇ ಸುರಿಯುತ್ತಿರುವ ಮಳೆಗೆ ದುಂಡಶಿ ಹೋಬಳಿಯ ಕೆರೆ-ಕಟ್ಟೆ-ಹಳ್ಳಗಳು ತುಂಬಿ ಹರಿಯುತ್ತಿದ್ದು ಮಳೆ ಪ್ರಮಾಣ ಹೆಚ್ಚಾಗಿ ಗೋವಿನ ಜೋಳ, ಸೋಯಾಬೀನ್, ಶೇಂಗಾ ಬೆಳೆ ಹಾಳಾಗುವ ಆತಂಕ ಉಂಟಾಗಿದೆ.</p>.<p>ಕುನ್ನೂರು ಶ್ಯಾಡಂಬಿ ಗ್ರಾಮಗಳ ಮಧ್ಯದಲ್ಲಿರುವ ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿದ್ದು ಹಳ್ಳದ ಅಕ್ಕಪಕ್ಕದಲ್ಲಿರುವ ಭತ್ತದ ಗದ್ದೆ, ತೋಟಗಳು ಜಲಾವೃತ್ತವಾಗುವ ಸಾಧ್ಯತೆ ಇದೆ ಎಂದು ಅಡವಿಸೋಮಾಪುರ ಗ್ರಾಮದ ಪ್ರವೀಣ್ ಹೇಳಿದರು.</p>.<p>ಗೋವಿನ ಜೋಳ ಬೆಳೆಯು ಜವಳು ಹಿಡಿದು ಸಂಪೂರ್ಣ ಹಾನಿಗೊಳಗಾಗಿದ್ದು ಸ್ಥಳೀಯ ಶಾಸಕ, ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಪರಿಶೀಲನೆ ನಡೆಸಿಲ್ಲ. ಹಾನಿ ಸಮೀಕ್ಷೆಯೂ ನಡೆಯುತ್ತಿಲ್ ಎಂದು ರೈತರು ದೂರಿದ್ದಾರೆ.</p>.<p>ರೈತರಿಗೆ ಅಗತ್ಯ ಪ್ರಮಾಣದ ಯೂರಿಯಾ ಗೊಬ್ಬರ ಸಿಗದಂತಾಗಿದೆ. ಕೆಲ ಖಾಸಗಿ ಅಂಗಡಿಗಳಲ್ಲಿ ₹ 280 ಬೆಲೆಯ ಯೂರಿಯಾವನ್ನು ₹ 450ರಿಂದ ₹ 500ರವರೆಗೆ ಮಾರುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಯೂರಿಯಾ ಗೊಬ್ಬರ ಸಿಗುವಂತೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಡಸ (ದುಂಡಶಿ):</strong> ಒಂದು ವಾರದಿಂದ ಬಿಡದೇ ಸುರಿಯುತ್ತಿರುವ ಮಳೆಗೆ ದುಂಡಶಿ ಹೋಬಳಿಯ ಕೆರೆ-ಕಟ್ಟೆ-ಹಳ್ಳಗಳು ತುಂಬಿ ಹರಿಯುತ್ತಿದ್ದು ಮಳೆ ಪ್ರಮಾಣ ಹೆಚ್ಚಾಗಿ ಗೋವಿನ ಜೋಳ, ಸೋಯಾಬೀನ್, ಶೇಂಗಾ ಬೆಳೆ ಹಾಳಾಗುವ ಆತಂಕ ಉಂಟಾಗಿದೆ.</p>.<p>ಕುನ್ನೂರು ಶ್ಯಾಡಂಬಿ ಗ್ರಾಮಗಳ ಮಧ್ಯದಲ್ಲಿರುವ ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿದ್ದು ಹಳ್ಳದ ಅಕ್ಕಪಕ್ಕದಲ್ಲಿರುವ ಭತ್ತದ ಗದ್ದೆ, ತೋಟಗಳು ಜಲಾವೃತ್ತವಾಗುವ ಸಾಧ್ಯತೆ ಇದೆ ಎಂದು ಅಡವಿಸೋಮಾಪುರ ಗ್ರಾಮದ ಪ್ರವೀಣ್ ಹೇಳಿದರು.</p>.<p>ಗೋವಿನ ಜೋಳ ಬೆಳೆಯು ಜವಳು ಹಿಡಿದು ಸಂಪೂರ್ಣ ಹಾನಿಗೊಳಗಾಗಿದ್ದು ಸ್ಥಳೀಯ ಶಾಸಕ, ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಪರಿಶೀಲನೆ ನಡೆಸಿಲ್ಲ. ಹಾನಿ ಸಮೀಕ್ಷೆಯೂ ನಡೆಯುತ್ತಿಲ್ ಎಂದು ರೈತರು ದೂರಿದ್ದಾರೆ.</p>.<p>ರೈತರಿಗೆ ಅಗತ್ಯ ಪ್ರಮಾಣದ ಯೂರಿಯಾ ಗೊಬ್ಬರ ಸಿಗದಂತಾಗಿದೆ. ಕೆಲ ಖಾಸಗಿ ಅಂಗಡಿಗಳಲ್ಲಿ ₹ 280 ಬೆಲೆಯ ಯೂರಿಯಾವನ್ನು ₹ 450ರಿಂದ ₹ 500ರವರೆಗೆ ಮಾರುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಯೂರಿಯಾ ಗೊಬ್ಬರ ಸಿಗುವಂತೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>