ಹಾನಗಲ್: 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ನಿಯಮಾವಳಿ ಅನ್ವಯ ಈಗಾಗಲೇ ಸರ್ಕಾರ ಅರ್ಹ ರೈತರಿಗೆ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ. ಪರಿಹಾರ ಹಣ ಜಮೆ ಆಗದೇ ಇದ್ದ ರೈತರು ತಕ್ಷಣವೇ ನಾಡಕಚೇರಿ ಇಲ್ಲವೇ ತಹಶೀಲ್ದಾರ್ ಕಚೇರಿಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಶಾಸಕ ಶ್ರೀನಿವಾಸ ಮಾನೆ ತಿಳಿಸಿದ್ದಾರೆ.