<p><strong>ಹಿರೇಕೆರೂರು:</strong> ‘ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಕಾಂಪೌಂಡ್ ಬಿದ್ದು ಹಾಳಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಗಿರೀಶ ಬಾರ್ಕಿ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಕರವೇ ತಾಲ್ಲೂಕು ಘಟಕದಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮಂಗಳವಾರ ಪ್ರತಿಭಟಿಸಿ ತಹಶೀಲ್ದಾರ್ ಎಂ. ರೇಣುಕಾ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.</p>.<p>‘ಕೆಲವು ಅಂಗಡಿಗಳ ನಾಮಫಲಕದಲ್ಲಿ ಸರ್ಕಾರದ ಆದೇಶ ಪಾಲಿಸುತ್ತಿಲ್ಲ. ಸಭೆ, ಸಮಾರಂಭ, ಹಬ್ಬದ ಸಂದರ್ಭದಲ್ಲಿ ಹಾಕುವ ಬ್ಯಾನರ್ಗಳಲ್ಲೂ ನಿಯಮ ಪಾಲಿಸಬೇಕು’ ಎಂದು ಹೇಳಿದರು.</p>.<p>‘ಪಟ್ಟಣದ ಬಸ್ ನಿಲ್ದಾಣಕ್ಕೆ ವರಕವಿ ಸರ್ವಜ್ಞ ಬಸ್ ನಿಲ್ದಾಣ ಎಂದು ನಾಮಕರಣ ಮಾಡಬೇಕು ಮತ್ತು ಜನಸಂಖ್ಯೆ ಆಧಾರದ ಮೇಲೆ ಬೇರೆ ಕಡೆ ಬಸ್ ನಿಲ್ದಾಣವನ್ನು ನಿರ್ಮಾಣ ಕಾರ್ಯವಾಗಬೇಕು’ ಎಂದರು.</p>.<p>ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಮಾರುತಿ ಪೂಜಾರ, ಅಬ್ಬು ಕೋಡಮಗ್ಗಿ, ಕರಿಯಪ್ಪ ಕೊರವರ, ಯಲ್ಲಪ್ಪ ಕಟೆಕರ, ಬಿ.ಎಚ್. ಬಣಕಾರ, ರವಿ ಬನ್ನಿಹಟ್ಟಿ, ರಾಮನಗೌಡ ಪಾಟೀಲ, ಅಶೋಕ ಬಾವಾಪುರ, ರವಿ ಲಮಾಣಿ ಚನ್ನಳ್ಳಿ, ಅಶೋಕ ಮಡಿವಾಳ, ಜಾಫರಸಾಬ್, ಚಂದ್ರಕಾಂತ ಲಮಾಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಕೆರೂರು:</strong> ‘ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಕಾಂಪೌಂಡ್ ಬಿದ್ದು ಹಾಳಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಗಿರೀಶ ಬಾರ್ಕಿ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗ ಕರವೇ ತಾಲ್ಲೂಕು ಘಟಕದಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮಂಗಳವಾರ ಪ್ರತಿಭಟಿಸಿ ತಹಶೀಲ್ದಾರ್ ಎಂ. ರೇಣುಕಾ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.</p>.<p>‘ಕೆಲವು ಅಂಗಡಿಗಳ ನಾಮಫಲಕದಲ್ಲಿ ಸರ್ಕಾರದ ಆದೇಶ ಪಾಲಿಸುತ್ತಿಲ್ಲ. ಸಭೆ, ಸಮಾರಂಭ, ಹಬ್ಬದ ಸಂದರ್ಭದಲ್ಲಿ ಹಾಕುವ ಬ್ಯಾನರ್ಗಳಲ್ಲೂ ನಿಯಮ ಪಾಲಿಸಬೇಕು’ ಎಂದು ಹೇಳಿದರು.</p>.<p>‘ಪಟ್ಟಣದ ಬಸ್ ನಿಲ್ದಾಣಕ್ಕೆ ವರಕವಿ ಸರ್ವಜ್ಞ ಬಸ್ ನಿಲ್ದಾಣ ಎಂದು ನಾಮಕರಣ ಮಾಡಬೇಕು ಮತ್ತು ಜನಸಂಖ್ಯೆ ಆಧಾರದ ಮೇಲೆ ಬೇರೆ ಕಡೆ ಬಸ್ ನಿಲ್ದಾಣವನ್ನು ನಿರ್ಮಾಣ ಕಾರ್ಯವಾಗಬೇಕು’ ಎಂದರು.</p>.<p>ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಮಾರುತಿ ಪೂಜಾರ, ಅಬ್ಬು ಕೋಡಮಗ್ಗಿ, ಕರಿಯಪ್ಪ ಕೊರವರ, ಯಲ್ಲಪ್ಪ ಕಟೆಕರ, ಬಿ.ಎಚ್. ಬಣಕಾರ, ರವಿ ಬನ್ನಿಹಟ್ಟಿ, ರಾಮನಗೌಡ ಪಾಟೀಲ, ಅಶೋಕ ಬಾವಾಪುರ, ರವಿ ಲಮಾಣಿ ಚನ್ನಳ್ಳಿ, ಅಶೋಕ ಮಡಿವಾಳ, ಜಾಫರಸಾಬ್, ಚಂದ್ರಕಾಂತ ಲಮಾಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>