ದೇವಸ್ಥಾನದ ಸಮಿತಿಯವರು ಉಳಿದ ಕಾರ್ಯಗಳಿಗೆ ಕೋಟ್ಯಂತರ ಹಣವನ್ನು ಬಳಸಿ ವೀರಭದ್ರೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕೈಗೊಂಡಿದ್ದಾರೆ. ಆದರೆ, ಹೊರ ರಾಜ್ಯದಿಂದ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಮಾಹಿತಿಗಾಗಿ ಸಮಿತಿಯವರಾಗಲಿ ಅಥವಾ ಪ್ರಾಚ್ಯವಸ್ತು ಇಲಾಖೆಯ ಅಧಿಕಾರಿಗಳಾಗಲಿ, ಪಂಚಲಿಂಗೇಶ್ವರ ದೇವಾಲಯದ ಬಗ್ಗೆ ಮಾಹಿತಿ ನೀಡುವ ಒಂದೇ ಒಂದು ನಾಮಫಲಕ ಹಾಕಿಲ್ಲ.