<p><strong>ಹಾವೇರಿ</strong>: ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ವಸತಿ ನಿಲಯ ಹಾಗೂ ವಸತಿ ಶಾಲೆಗಳಿಗೆ ಸರ್ಕಾರದಿಂದ ಬಿಡುಗಡೆಯಾದ ಆಹಾರ ಪದಾರ್ಥಗಳ ಪೈಕಿ ಉಳಿಕೆಯಾದ ಆಹಾರ ಪದಾರ್ಥಗಳನ್ನು ಜಿಲ್ಲಾಡಳಿತಕ್ಕೆ ಮಂಗಳವಾರ ಹಸ್ತಾಂತರಿಸಲಾಯಿತು.</p>.<p>ಲಾಕ್ಡೌನ್ ಕಾರಣ ವರ್ಷಾಂತ್ಯದಲ್ಲಿ ಉಳಿಕೆಯಾದ ಸಮಾಜ ಕಲ್ಯಾಣ ಇಲಾಖೆಯ 1500 ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ 100 ಆಹಾರ ಪದಾರ್ಥಗಳ ಕಿಟ್ಗಳನ್ನು ತಯಾರಿಸಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರಿಗೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.</p>.<p>ಮೇ 21ರವರೆಗೆ ಜಿಲ್ಲೆಯ ಉಭಯ ಇಲಾಖೆಯ ವಿವಿಧ ವಸತಿ ನಿಲಯ ಹಾಗೂ ಸರ್ಕಾರಿ ವಸತಿ ಶಾಲೆಗಳಲ್ಲಿ ಉಳಿಕೆಯಾದ ವಿವಿಧ ಪದಾರ್ಥಗಳ ಒಳಗೊಂಡಂತೆ 1600 ಕಿಟ್ ತಯಾರಿಸಲಾಗಿದೆ. ಈ ಕಿಟ್ಗಳಲ್ಲಿ ತೊಗರಿಬೇಳೆ, ಉಪ್ಪು, ಅವಲಕ್ಕಿ, ಅಡುಗೆ ಎಣ್ಣೆ, ಹೆಸರು ಕಾಳು, ಕಡ್ಲೆಕಾಳು, ಅಲಸಂದೆ ಕಾಳು, ರವೆ, ಸಕ್ಕರೆ, ಕಾರದಪುಡಿ, ಸಾಸಿವೆ, ಜೀರಿಗೆ ಹಾಗೂ ಅರಿಸಿನಪುಡಿ ಒಳಗೊಂಡ 13 ವಿವಿಧ ಬಗೆಯ ಆಹಾರ ಸಾಮಗ್ರಿಗಳನ್ನೊಳಗೊಂಡಿದ್ದು, ಈ ಕಿಟ್ಗಳನ್ನು ಸರ್ಕಾರದ ಸೂಚನೆಯಂತೆ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರಾ ತಿಳಿಸಿದರು.</p>.<p>ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನಾಗರಾಜ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ವಸತಿ ನಿಲಯ ಹಾಗೂ ವಸತಿ ಶಾಲೆಗಳಿಗೆ ಸರ್ಕಾರದಿಂದ ಬಿಡುಗಡೆಯಾದ ಆಹಾರ ಪದಾರ್ಥಗಳ ಪೈಕಿ ಉಳಿಕೆಯಾದ ಆಹಾರ ಪದಾರ್ಥಗಳನ್ನು ಜಿಲ್ಲಾಡಳಿತಕ್ಕೆ ಮಂಗಳವಾರ ಹಸ್ತಾಂತರಿಸಲಾಯಿತು.</p>.<p>ಲಾಕ್ಡೌನ್ ಕಾರಣ ವರ್ಷಾಂತ್ಯದಲ್ಲಿ ಉಳಿಕೆಯಾದ ಸಮಾಜ ಕಲ್ಯಾಣ ಇಲಾಖೆಯ 1500 ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ 100 ಆಹಾರ ಪದಾರ್ಥಗಳ ಕಿಟ್ಗಳನ್ನು ತಯಾರಿಸಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರಿಗೆ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.</p>.<p>ಮೇ 21ರವರೆಗೆ ಜಿಲ್ಲೆಯ ಉಭಯ ಇಲಾಖೆಯ ವಿವಿಧ ವಸತಿ ನಿಲಯ ಹಾಗೂ ಸರ್ಕಾರಿ ವಸತಿ ಶಾಲೆಗಳಲ್ಲಿ ಉಳಿಕೆಯಾದ ವಿವಿಧ ಪದಾರ್ಥಗಳ ಒಳಗೊಂಡಂತೆ 1600 ಕಿಟ್ ತಯಾರಿಸಲಾಗಿದೆ. ಈ ಕಿಟ್ಗಳಲ್ಲಿ ತೊಗರಿಬೇಳೆ, ಉಪ್ಪು, ಅವಲಕ್ಕಿ, ಅಡುಗೆ ಎಣ್ಣೆ, ಹೆಸರು ಕಾಳು, ಕಡ್ಲೆಕಾಳು, ಅಲಸಂದೆ ಕಾಳು, ರವೆ, ಸಕ್ಕರೆ, ಕಾರದಪುಡಿ, ಸಾಸಿವೆ, ಜೀರಿಗೆ ಹಾಗೂ ಅರಿಸಿನಪುಡಿ ಒಳಗೊಂಡ 13 ವಿವಿಧ ಬಗೆಯ ಆಹಾರ ಸಾಮಗ್ರಿಗಳನ್ನೊಳಗೊಂಡಿದ್ದು, ಈ ಕಿಟ್ಗಳನ್ನು ಸರ್ಕಾರದ ಸೂಚನೆಯಂತೆ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರಾ ತಿಳಿಸಿದರು.</p>.<p>ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನಾಗರಾಜ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>