<p><strong>ಹಾನಗಲ್:</strong> ‘ಬಂಕಾಪುರದಲ್ಲಿ ಮಹಾರಾಷ್ಟ್ರದ ಬಾಳುಮಾಮಾ ಕುರಿಗಳನ್ನು ಕಾಯ್ದವನು ನಾನು. ಕುರಿಯ ಉಣ್ಣೆಯಿಂದ ತಯಾರಿಸುವ ಕಂಬಳಿ ಬಗ್ಗೆ ಗೌರವ ಹೊಂದಿದ್ದೇನೆ. ಕಂಬಳಿ ನೆಯ್ಗೆಯ ಶ್ರಮ ಅರಿತಿದ್ದೇನೆ. ಕಂಬಳಿಯನ್ನು ಮೈಮೇಲೆ ಹಾಕಿಕೊಳ್ಳಲು ಯೋಗ್ಯತೆ ಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.</p>.<p>ತಾಲ್ಲೂಕಿನ ಯಳವಟ್ಟಿ, ಹುಲ್ಲತ್ತಿ, ಕರಗುದರಿ, ಬೈಚವಳ್ಳಿ ಗ್ರಾಮಗಳಲ್ಲಿ ಸೋಮವಾರ ತೆರೆದ ವಾಹನದಲ್ಲಿ ಅವರು ಬಿಜೆಪಿ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದರು.</p>.<p>‘ಎಲ್ಲ ಸಮಾಜದ ಜೊತೆಯಲ್ಲಿ ಸಾಮರಸ್ಯದಿಂದ ಬಾಳುವವರು ನಾವು. ಜಾತಿಗಳ ಮಧ್ಯೆ ವಿಷಬೀಜ ಬಿತ್ತಿ ರಾಜಕೀಯ ಲಾಭ ಮಾಡಿಕೊಳ್ಳುವುದು ಕಾಂಗ್ರೆಸ್ ಸಿದ್ಧಾಂತ’ ಎಂದು ಅವರು ಟೀಕಿಸಿದರು.</p>.<p>‘ಇಲ್ಲಿನ ಉಪ ಚುನಾವಣೆಯಲ್ಲಿ ಕಾಂಗ್ರೆಸ್ಸಿಗರ ‘ಖತಲ್ ರಾತ್ರಿ’ ಆಟ ನಡೆಯಬಾರದು. ಡಿ.ಕೆ.ಶಿವಕುಮಾರ ತಂದಿರುವ ದುಡ್ಡಿನ ಗೋಣಿಚೀಲವನ್ನು ಬೆಂಗಳೂರಿಗೇ ವಾಪಸ್ ಕಳಿಸಬೇಕು’ ಎಂದು ಹೇಳಿದರು.</p>.<p>‘ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಚುನಾವಣೆ ಸಮಯದಲ್ಲಿ ಬಂದು ಹೇಳಿ ಹೋಗುತ್ತಾರೆ. ಬಳಿಕ ನಿಮ್ಮ ಕೈಗೆ ಸಿಗಲ್ಲ. ಆದರೆ ನಾನು ಇಲ್ಲಿಯವನು. ಚುನಾವಣೆ ಬಳಿಕವೂ ನಿಮಗೆ ಸಿಗುತ್ತೇನೆ. ಹೀಗಾಗಿ ಬಿಜೆಪಿ ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.</p>.<p>ಕಾರ್ಮಿಕ ಇಲಾಖೆ ಸಚಿವ ಶಿವರಾಮ ಹೆಬ್ಬಾರ, ಸಂಸದ ಶಿವಕುಮಾರ ಉದಾಸಿ, ಶಾಸಕ ಅಮೃತ ದೇಸಾಯಿ, ಎಸ್.ವಿ.ಸಂಕನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್:</strong> ‘ಬಂಕಾಪುರದಲ್ಲಿ ಮಹಾರಾಷ್ಟ್ರದ ಬಾಳುಮಾಮಾ ಕುರಿಗಳನ್ನು ಕಾಯ್ದವನು ನಾನು. ಕುರಿಯ ಉಣ್ಣೆಯಿಂದ ತಯಾರಿಸುವ ಕಂಬಳಿ ಬಗ್ಗೆ ಗೌರವ ಹೊಂದಿದ್ದೇನೆ. ಕಂಬಳಿ ನೆಯ್ಗೆಯ ಶ್ರಮ ಅರಿತಿದ್ದೇನೆ. ಕಂಬಳಿಯನ್ನು ಮೈಮೇಲೆ ಹಾಕಿಕೊಳ್ಳಲು ಯೋಗ್ಯತೆ ಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.</p>.<p>ತಾಲ್ಲೂಕಿನ ಯಳವಟ್ಟಿ, ಹುಲ್ಲತ್ತಿ, ಕರಗುದರಿ, ಬೈಚವಳ್ಳಿ ಗ್ರಾಮಗಳಲ್ಲಿ ಸೋಮವಾರ ತೆರೆದ ವಾಹನದಲ್ಲಿ ಅವರು ಬಿಜೆಪಿ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದರು.</p>.<p>‘ಎಲ್ಲ ಸಮಾಜದ ಜೊತೆಯಲ್ಲಿ ಸಾಮರಸ್ಯದಿಂದ ಬಾಳುವವರು ನಾವು. ಜಾತಿಗಳ ಮಧ್ಯೆ ವಿಷಬೀಜ ಬಿತ್ತಿ ರಾಜಕೀಯ ಲಾಭ ಮಾಡಿಕೊಳ್ಳುವುದು ಕಾಂಗ್ರೆಸ್ ಸಿದ್ಧಾಂತ’ ಎಂದು ಅವರು ಟೀಕಿಸಿದರು.</p>.<p>‘ಇಲ್ಲಿನ ಉಪ ಚುನಾವಣೆಯಲ್ಲಿ ಕಾಂಗ್ರೆಸ್ಸಿಗರ ‘ಖತಲ್ ರಾತ್ರಿ’ ಆಟ ನಡೆಯಬಾರದು. ಡಿ.ಕೆ.ಶಿವಕುಮಾರ ತಂದಿರುವ ದುಡ್ಡಿನ ಗೋಣಿಚೀಲವನ್ನು ಬೆಂಗಳೂರಿಗೇ ವಾಪಸ್ ಕಳಿಸಬೇಕು’ ಎಂದು ಹೇಳಿದರು.</p>.<p>‘ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಚುನಾವಣೆ ಸಮಯದಲ್ಲಿ ಬಂದು ಹೇಳಿ ಹೋಗುತ್ತಾರೆ. ಬಳಿಕ ನಿಮ್ಮ ಕೈಗೆ ಸಿಗಲ್ಲ. ಆದರೆ ನಾನು ಇಲ್ಲಿಯವನು. ಚುನಾವಣೆ ಬಳಿಕವೂ ನಿಮಗೆ ಸಿಗುತ್ತೇನೆ. ಹೀಗಾಗಿ ಬಿಜೆಪಿ ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.</p>.<p>ಕಾರ್ಮಿಕ ಇಲಾಖೆ ಸಚಿವ ಶಿವರಾಮ ಹೆಬ್ಬಾರ, ಸಂಸದ ಶಿವಕುಮಾರ ಉದಾಸಿ, ಶಾಸಕ ಅಮೃತ ದೇಸಾಯಿ, ಎಸ್.ವಿ.ಸಂಕನೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>